ಮದುವೆ ಓಡಾಟದಲ್ಲಿ ಪವಿತ್ರ-ನರೇಶ್
Team Udayavani, Jun 6, 2023, 12:56 PM IST
“ಮತ್ತೆ ಮದುವೆ’ – ಹೀಗೊಂದು ಸಿನಿಮಾದ ಹೆಸರು ಅನೇಕ ದಿನಗಳಿಂದ ಕೇಳಿಬರುತ್ತಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜೂ.09 ರಂದು ತೆರೆಕಾಣುತ್ತಿದೆ. ಪವಿತ್ರಾ ಹಾಗೂ ನರೇಶ್ ಈ ಸಿನಿಮಾದ ಮುಖ್ಯ»ಭೂಮಿಕೆಯಲ್ಲಿ ನಟಿಸಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ನರೇಶ್, “ಮತ್ತೆ ಮದುವೆ ಒಳ್ಳೆಯ ಕಂಟೆಂಟ್ ಇರುವ ಸಿನಿಮಾ. ಸದ್ಯ ಸಮಾಜದಲ್ಲಿ ಗಂಡ, ಹೆಂಡತಿ ಸಂಬಂಧಗಳ ಕುರಿತ ಕಥಾ ಹಂದರವನ್ನು ಹೊಂದಿದೆ. ಈ ಸಿನಿಮಾವನ್ನು ತೆಲುಗಿನಲ್ಲಿ ನೋಡಿದವರೆಲ್ಲ ಚೆನ್ನಾಗಿದೆ ಎಂದು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ವರದರಾಜ್ ಚಿಕ್ಕಬಳ್ಳಾಪುರ ಮತ್ತೆ ಮದುವೆ ಸಿನಿಮಾಗೆ ಬಹಳ ಅಚ್ಚುಕಟ್ಟಾಗಿ ಡಬ್ಬಿಂಗ್ ಜೊತೆಗೆ ಅದ್ಭುತ ಹಾಡುಗಳನ್ನ ಕನ್ನಡದಲ್ಲಿ ಬರೆದಿದ್ದಾರೆ. ಇವರ ಸಹಾಯದಿಂದ ಮತ್ತೆ ಮದುವೆ ಚಿತ್ರದ ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್ ಮಾಡಿದ್ದೇನೆ’ ಎಂದರು.
ಪವಿತ್ರಾ ಲೋಕೇಶ್ ಮಾತನಾಡಿ, “ವಿಜಯ್ ಕೃಷ್ಣ ಮೂವೀಸ್ ಮತ್ತೆ ಲಾಂಚ್ ಮಾಡಿ ಒಳ್ಳೆ ಸಿನಿಮಾ ಮಾಡಬೇಕು ಎಂಬ ಉದ್ದೇಶದಿಂದ ಮಾಡಿದ ಸಿನಿಮಾವಿದು. ಈ ಬ್ಯಾನರ್ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್ ಓರಿಯೆಂಟೆಡ್ ಆಗಿತ್ತು. ಸಮಾಜಕ್ಕೆ ಒಳ್ಳೆ ವಿಷಯ ತಲುಪಿಸುವ ಕೆಲಸ ಮಾಡಿದ್ದರು. ವಿಜಯ್ ಕೃಷ್ಣ ಮೂವೀಸ್ನಡಿ ಮತ್ತೂಂದು ಮೆಸೇಜ್ ಕೊಡುವಂತಹ ಸ್ಟ್ರಾಂಗ್ ಸಿನಿಮಾ ಮಾಡಬೇಕು ಎಂಬುವುದು ನರೇಶ್ ಅವರ ಉದ್ದೇಶವಾಗಿತ್ತು. ಮತ್ತೆ ಮದುವೆ ಕಥೆಯನ್ನು ಎಂ.ಎಸ್ ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಎಂದು ತೀರ್ಮಾನ ಮಾಡಿದೆವು. ತೆಲುಗು ಕನ್ನಡ ಎರಡು ಭಾಷೆಯಲ್ಲಿಯೂ ಒಟ್ಟಿಗೆ ಪ್ರಚಾರ ಮಾಡಲು ಕಷ್ಟವಾಗುತ್ತದೆ ಎಂದು ಮೊದಲ ತೆಲುಗಿನಲ್ಲಿ ಸಿನಿಮಾ ರಿಲೀಸ್ ಮಾಡಿದೆವು. ಜೂನ್ 9ಕ್ಕೆ ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ’ ಎಂದರು.
ಮತ್ತೆ ಮದುವೆ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ