ರಕ್ಷಿತಾ ಸಹೋದರ ಲಾಂಚ್‌ಗೆ ವೇದಿಕೆ ಸಿದ್ಧ


Team Udayavani, Mar 5, 2019, 6:08 AM IST

abhishek-copy.jpg

ನಿರ್ದೇಶಕ ಪ್ರೇಮ್‌ ತಮ್ಮ  ಹೊಸ ಸಿನಿಮಾದ ಕೆಲಸದಲ್ಲಿ ಬಿಝಿಯಾಗಿದ್ದಾರೆ. ಈ ಬಾರಿ ಅವರು ಹೊಸ ಹುಡುಗನನ್ನು ಲಾಂಚ್‌ ಮಾಡುತ್ತಿದ್ದಾರೆ. ಅದು ಬೇರಾರು ಅಲ್ಲ, ರಕ್ಷಿತಾ ಅವರ ಸಹೋದರ ಅಭಿಷೇಕ್‌. ಅಭಿಷೇಕ್‌ ಅವರ ಲಾಂಚ್‌ಗೆ ಭರ್ಜರಿ ವೇದಿಕೆ ಸಿದ್ಧವಾಗಿದೆ. ಪ್ರೇಮ್‌ ಕೂಡಾ ತುಂಬಾನೇ ತಲೆಕೆಡಿಸಿಕೊಂಡು ತಮ್ಮ ಕುಟುಂಬದ ಹುಡುಗನನ್ನು ಲಾಂಚ್‌ ಮಾಡುವ ತಯಾರಿಯಲ್ಲಿದ್ದಾರೆ. ಈ  ಚಿತ್ರ ಮಾರ್ಚ್‌ 31 ರಂದು ಸೆಟ್ಟೇರುತ್ತಿದೆ.

ಅಂದೇ ಚಿತ್ರದ ಟೈಟಲ್‌ ಹಾಗೂ ಫ‌ಸ್ಟ್‌ಲುಕ್‌ ಬಿಡುಗಡೆಯಾಗಲಿದೆ. ಎಲ್ಲಾ ಓಕೆ, ಮಾರ್ಚ್‌ 31 ರಂದೇ ಯಾಕೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ರಕ್ಷಿತಾ ಅವರ ಹುಟ್ಟುಹಬ್ಬ. ತಮ್ಮ ಹುಟ್ಟುಹಬ್ಬದಂದೇ ಸಹೋದರನ ಸಿನಿಮಾ ಲಾಂಚ್‌ ಆಗಬೇಕೆಂಬುದು ರಕ್ಷಿತಾ ಆಸೆ. ಆ ಆಸೆಗೆ ತಕ್ಕಂತೆ ಪ್ರೇಮ್‌ ಅದೇ ದಿನ ಲಾಂಚ್‌ ಮಾಡಲು ಸಿದ್ಧತೆ ನಡೆಸಿದ್ದಾರೆ. ಅಭಿಷೇಕ್‌ ಕೂಡಾ ಸಿನಿಮಾಕ್ಕೆ ಬೇಕಾದ ಸಾಕಷ್ಟು ತಯಾರಿ ನಡೆಸಿದ್ದಾರೆ.

ನಟನೆ, ಫೈಟ್‌, ಡ್ಯಾನ್ಸ್‌ … ಹೀಗೆ ಎಲ್ಲದರಲ್ಲೂ ಪಕ್ಕಾ ಆಗಿದ್ದಾರೆ. ಇದಕ್ಕಿಂತ ಹೆಚ್ಚಾಗಿ “ದಿ ವಿಲನ್‌’ ಸಿನಿಮಾ ಸೆಟ್‌ನಲ್ಲಿ ಅಭಿಷೇಕ್‌ ನಟನೆ ಕಲಿತಿದ್ದಾರಂತೆ. ಅದು ಹೇಗೆ ಎಂದು ನೀವು ಕೇಳಬಹುದು. “ದಿ ವಿಲನ್‌’ ಚಿತ್ರದಲ್ಲಿನ ಸುದೀಪ್‌ ಪಾತ್ರದ ನಟನೆಯನ್ನು ಸುದೀಪ್‌ ಮಾಡುವ ಮೊದಲು ಅಭಿಷೇಕ್‌ ಮಾಡುತ್ತಿದ್ದರಂತೆ. ಸ್ವತಃ ಸುದೀಪ್‌ ಕೂಡಾ ಅಭಿಷೇಕ್‌ ಬೆನ್ನುತಟ್ಟಿ, “ಮೊದಲು ನೀನು ಮಾಡಿ ತೋರಿಸು’ ಎನ್ನುತ್ತಿದ್ದರಂತೆ. ಹಾಗಾಗಿ, ಪ್ರೇಮ್‌ ಸೆಟ್‌ನಲ್ಲೇ ಅಭಿಷೇಕ್‌ ನಟನೆಯನ್ನು ಕಲಿತಿದ್ದಾರೆನ್ನಬಹುದು. 

ಎಲ್ಲಾ ಓಕೆ, ಚಿತ್ರದಲ್ಲಿ ನಾಯಕಿ ಯಾರು ಎಂದು ನೀವು ಕೇಳಬಹುದು. ಏಕೆಂದರೆ ಈಗಾಗಲೇ ಸುಧಾರಾಣಿ ಪುತ್ರಿ ಈ ಚಿತ್ರಕ್ಕೆ ನಾಯಕಿಯಾಗುತ್ತಾರೆಂದು ಸುದ್ದಿಯಾಗಿತ್ತು. ಆದರೆ, ಪ್ರೇಮ್‌, ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ ಎನ್ನುತ್ತಾರೆ. “ಇಲ್ಲಿವರೆಗೆ ನಾನು ನಾಯಕಿ ವಿಚಾರದಲ್ಲಿ ಯಾರೊಂದಿಗೂ ಮಾತುಕತೆ ನಡೆಸಿಲ್ಲ. ಈ ಬಾರಿ ಪಕ್ಕಾ ಕನ್ನಡದ ಹುಡುಗಿಯನ್ನೇ ನಾಯಕಿಯನ್ನಾಗಿಸುತ್ತೇನೆ.

ಹೊಸ ಮುಖಗಳಿಗೆ ಮೊದಲ ಆದ್ಯತೆ’ ಎನ್ನುವುದು ಪ್ರೇಮ್‌ ಮಾತು. ಈ ಸಿನಿಮಾವನ್ನು ಪ್ರೇಮ್‌ ಹಾಗೂ ರಕ್ಷಿತಾ ತಮ್ಮ ಹೋಂಬ್ಯಾನರ್‌ನಲ್ಲೇ ನಿರ್ಮಿಸುತ್ತಿದ್ದಾರೆ. ಎಲ್ಲಾ ಓಕೆ, ಯಾಕೆ ಪ್ರೇಮ್‌ ತಮ್ಮ ಹೋಂಬ್ಯಾನರ್‌ನಲ್ಲೇ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆಂದು ನೀವು ಕೇಳಬಹುದು. ಅದಕ್ಕೂ ಪ್ರೇಮ್‌ ಉತ್ತರಿಸುತ್ತಾರೆ. “ವಿಲನ್‌ ನಂತರ ಒಂದಷ್ಟು ಮಂದಿ ನಿರ್ಮಾಪಕರು, ಮುಂಬೈನ ಕೆಲವು ಕಂಪೆನಿಗಳು ಸಿನಿಮಾ ಮಾಡುವಂತೆ ಕೇಳಿಕೊಂಡವು.

ಆದರೆ, ನಾನೇ ಬೇಡ ಎಂದೆ. ನಮ್ಮದೇ ಬ್ಯಾನರ್‌ನಲ್ಲಿ ಮಾಡುವ ಎಂದು. ಒಳ್ಳೆಯದು, ಕೆಟ್ಟದು ಏನೇ ಇದ್ದರೂ ನಮಗೆ ಇರಲಿ. ಆರಂಭದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ಕಾಸು ಬಂದ ನಂತರ ಯಾರಿಗೂ ಆಸಕ್ತಿ ಇರುವುದಿಲ್ಲ. ಹಾಗಾಗಿ, ಈ ಸಿನಿಮಾವನ್ನು ನಮ್ಮದೇ ಬ್ಯಾನರ್‌ನಲ್ಲಿ ಮಾಡುವ ಎಂದು ನಿರ್ಧರಿಸಿದ್ದೇನೆ. ಮುಂದೆಯೂ ಅಷ್ಟೇ, ನಮ್ಮ ಬ್ಯಾನರ್‌ನಲ್ಲೇ ಒಂದಷ್ಟು ಸಿನಿಮಾ ಮಾಡುವ ಆಲೋಚನೆ ಇದೆ’ ಎನ್ನುತ್ತಾರೆ ಪ್ರೇಮ್‌. 

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.