ಆಡಿಸಿ ನೋಡು ಬೀಳಿಸಿ ನೋಡು ಸಿನಿಮಾ ಆಗುವುದು


Team Udayavani, May 17, 2017, 11:08 AM IST

adisi-nodu.jpg

“ಆಡಿಸಿ ನೋಡು ಬೀಳಿಸಿ ನೋಡು …’ ಎಂಬ “ಕಸ್ತೂರಿ ನಿವಾಸ’ ಚಿತ್ರದ ಹಾಡು ಇಂದಿಗೂ ಜನಜನಿತ. ಮೊನ್ನೆ ಮೊನ್ನೆಯಷ್ಟೇ ತೆರೆಕಂಡ “ರಾಜಕುಮಾರ’ ಚಿತ್ರದಲ್ಲೂ “ಆಡಿಸಿಯೇ ನೋಡು ಬೀಳಿಸಿಯೇ ನೋಡು…’ ಹಾಡು ಪುನಃ ಧ್ವನಿಸಿದ್ದು ಮತ್ತೂಂದು ವಿಶೇಷ. ಈಗ ಇದೇ ಶೀರ್ಷಿಕೆಯಡಿ ಸಿನಿಮಾವೂ ಸೆಟ್ಟೇರಿದೆ.

ಹೌದು, “ಆಡಿಸಿ ನೋಡು ಬೀಳಿಸಿ ನೋಡು’ ಎಂಬ ಸಿನಿಮಾ ಈಗಾಗಲೇ ಶೇ.70 ರಷ್ಟು ಚಿತ್ರೀಕರಣ ಮುಗಿಸಿದೆ. ಈ ಚಿತ್ರದ ಮೂಲಕ ಹೊಸ ಪ್ರತಿಭೆಗಳು ಚಿತ್ರರಂಗಕ್ಕೆ ಕಾಲಿಟ್ಟಿವೆ. ಬಹುತೇಕ ಹೊಸಬರೇ ಸೇರಿ ಮಾಡಿರುವ ಈ ಚಿತ್ರಕ್ಕೂ “ಕಸ್ತೂರಿ ನಿವಾಸ’ ಚಿತ್ರದ “ಆಡಿಸಿ ನೋಡು ಬೀಳಿಸಿ ನೋಡು’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ.

ಈ ಚಿತ್ರದ ಮೂಲಕ ಮನೋಜ್‌ ಶ್ರೀ ಹರಿ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಇವರು “ಕೇರ್‌ ಆಫ್ ಫ‌ುಟ್‌ಪಾತ್‌’ ಚಿತ್ರಕ್ಕೆ ಸಂಗೀತ ನೀಡಿದ್ದರು. ಈಗ ಕಥೆ, ಚಿತ್ರಕಥೆ, ಹಾಡು, ಸಂಭಾಷಣೆ ಬರೆದು ನಿರ್ದೇಶಕರಾಗಿದ್ದಾರೆ. ಇದಷ್ಟೇ ಅಲ್ಲ, ಸಂಗೀತ, ನೃತ್ಯನಿರ್ದೇಶನ, ಸಂಕಲನ, ವಿಎಫ್ಎಕ್ಸ್‌ ಹಾಗೂ ಕ್ಯಾಮೆರಾ ಕೆಲಸವನ್ನೂ ಒಬ್ಬರೇ ನಿರ್ವಹಿಸಿದ್ದಾರೆ.

ಅಲ್ಲಿಗೆ ಸಕಲಕಲಾವಲ್ಲಭ ಎಂದು ನಿರೂಪಿಸಲು ಹೊರಟಿದ್ದಾರೆ. ಇರಲಿ, ಈ ಚಿತ್ರದ ಕಥೆ ಇಷ್ಟು, ಇದೊಂದು ಸಿನಿಮಾ ಕುರಿತ ಕಥೆ. ಸಿನಿಮಾ ಮಾಡುವುದರಿಂದ ಅದರ ಉಪಯೋಗ ಮತ್ತು ದುರುಪಯೋಗದ ಕುರಿತು ಒಂದಷ್ಟು ವಿಷಯಗಳನ್ನು ಹೇಳಹೊರಟಿದ್ದಾರಂತೆ ನಿರ್ದೇಶಕರು.

ಒಂದು ಸಿನಿಮಾದಿಂದ ಒಳ್ಳೆಯದ್ದೂ ಆಗುತ್ತೆ, ಕೆಟ್ಟದ್ದೂ ಆಗುತ್ತೆ. ಅದನ್ನು ಹೇಗೆ ಸ್ವೀಕರಿಸಬೇಕು ಎಂಬ ವಿಷಯ ಈ ಚಿತ್ರದಲ್ಲಿ ಅಡಗಿದೆಯಂತೆ. ಈಗಾಗಲೇ ಶೇ.70 ರಷ್ಟು ಚಿತ್ರೀಕರಣ ಮಾಡಿದೆ ಚಿತ್ರತಂಡ. ಬಹುತೇಕ ಬೆಂಗಳೂರಿನಲ್ಲೇ ಚಿತ್ರೀಕರಿಸಲಾಗಿದೆಯಂತೆ. ಒಂದೊಳ್ಳೆಯ ಸಂದೇಶ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದು, ಈಗಿನ ಯೂತ್ಸ್ಗೆ ಬೇಕಾದ ಎಲ್ಲಾ ಅಂಶಗಳು ಇಲ್ಲಿರಲಿವೆಯಂತೆ. 

ಈ ಚಿತ್ರವನ್ನು ಮನುಗೌಡ ನಿರ್ಮಿಸುತ್ತಿದ್ದಾರೆ. ಇದು ಇವರಿಗೆ ಮೊದಲ ಸಿನಿಮಾ. ಇನ್ನು, ಇವರಿಗೆ ಶಿವಪ್ರಸಾದ್‌ ಮತ್ತು ಮೋಹನ್‌ ನಿರ್ಮಾಣದಲ್ಲಿ ಸಾಥ್‌ ನೀಡುತ್ತಿದ್ದಾರೆ. ಚಿತ್ರದಲ್ಲಿ ಐವರು ನಾಯಕರು, ಇಬ್ಬರು ನಾಯಕಿಯರಿದ್ದಾರೆ. ನಟ ಧನಂಜಯ್‌ ಅವರ ಸಹೋದರ ಸಂಬಂಧಿ ಆದಿ, ಯೋಗರಾಜ್‌, ಸೋಮಗೌಡ, ಮಂಜುನಾಥ್‌ ಮತ್ತು ಸುನೀಲ್‌ ಈ ಐವರು ನಾಯಕಿರಿಗೂ ಇದು ಮೊದಲ ಅನುಭವ.

ನಾಯಕಿಯರಾದ ಕಾವ್ಯಾಗೌಡ ಮತ್ತು ಡಾ.ನಿಸರ್ಗ ಅವರಿಗೂ ಇದು ಚೊಚ್ಚಲ ಚಿತ್ರ. ಈ ಚಿತ್ರದಲ್ಲಿ  ಮೋಹನ್‌ ಗೌಡ ಖಳನಟರಾಗಿ ನಟಿಸುತ್ತಿದ್ದಾರೆ. ಎಲ್ಲರಿಗೂ ಇದು ಹೊಸ ಅನುಭವ. ಚಿತ್ರದ ಆಡಿಯೋ ಸಿಡಿ ಬಿಡುಗಡೆಗೆ ಸಿದ್ಧವಾಗಿರುವ ಚಿತ್ರತಂಡ, ಮೇ 17 ರಂದು ಹಾಡುಗಳನ್ನು ಹೊರತರಲಿದೆ. ಜೆಸ್ಸಿಗಿಫ್ಟ್, ಚಂದನ್‌ಶೆಟ್ಟಿ, ಸಂತೋಷ್‌ ವೆಂಕಿ ಹಾಗೂ ಅನುರಾಧ ಭಟ್‌ ಹಾಡುಗಳನ್ನು ಹಾಡಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.