ಪ್ರೇಮಿಗಳ ದಿನಕ್ಕೆ ಪೊಗರು ಆಡಿಯೋ
ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ
Team Udayavani, Feb 10, 2021, 12:40 PM IST
ಇತ್ತೀಚೆಗಷ್ಟೇ ಧ್ರುವ ಸರ್ಜಾ ಅಭಿನಯದ “ಪೊಗರು’ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಅನೌನ್ಸ್ ಮಾಡಿದೆ. ಇದೇ ಫೆ. 19ಕ್ಕೆ “ಪೊಗರು’ ಚಿತ್ರ ಕನ್ನಡ, ತೆಲುಗು, ತಮಿಳಿನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇದರ ನಡುವೆಯೇ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, “ಪೊಗರು’ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕಸರತ್ತಿನಲ್ಲಿ ನಿರತವಾಗಿದೆ.
ಇದೇ ವೇಳೆ ಇನ್ಸ್ಟಾಗ್ರಾಂನಲ್ಲಿ ಲೈವ್ ಮೂಲಕ ಪ್ರೇಕ್ಷಕರ ಮುಂದೆ ಬಂದ ನಟ ಧ್ರುವ ಸರ್ಜಾ, ಚಿತ್ರದ ಪ್ರಮೋಷನ್ ಮತ್ತಿತರ ವಿಷಯಗಳ ಬಗ್ಗೆ ಅಭಿಮಾನಿಗಳ ಜೊತೆ ಒಂದಷ್ಟು ಮಾತನಾಡಿದ್ದಾರೆ. “ಫೆಬ್ರವರಿ 14 ಪ್ರೇಮಿಗಳ ದಿನದಂದು ದಾವಣಗೆರೆಯಲ್ಲಿ “ಪೊಗರು’ ಸಿನಿಮಾ ಆಡಿಯೋ ರೀಲಿಸ್ ಮಾಡಲಿದ್ದೇವೆ’ ಎಂದಿರುವ ಧ್ರುವಸರ್ಜಾ, “ನಮ್ಮ ಸಿನಿಮಾದ ಆಡಿಯೋ ರಿಲೀಸ್ ವೇಳೆ ಸಾಕಷ್ಟು ವರ್ಷಗಳಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೆ ಇರುವ ಸೆಲೆಬ್ರಿಟಿ ಸ್ಟಾರ್ಗಳು ಒಂದೇ ಕಡೆಕಾಣಿಸಿಕೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ. “ತುಂಬಾ ದೊಡ್ಡ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ : ಸಂಹಾರಿಣಿಯಾಗಿ ಪೂಜಾ ಗಾಂಧಿ ರೀ ಎಂಟ್ರಿ
ಸಿನಿಮಾ ಕುರಿತಾಗಿ ಸಾಕಷ್ಟು ಸರ್ಪ್ರೈಸ್ ಇರಲಿದೆ. “ಪೊಗರು’ ಸಿನಿಮಾದ ಕಲಾವಿದರು ಹಾಗೂ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಲವು ವರ್ಷಗಳಿಂದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದೆ ಇರುವ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಒಂದೆ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ನಾವು ಕಾರ್ಯಕ್ರಮದಲ್ಲಿ ಹೇಳಲಿದ್ದೇವೆ. ಫೆಬ್ರವರಿ 19 ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಸಿನಿಮಾ ರಿಲೀಸ್ ದಿನ ನಾವೆಲ್ಲ ಎಲ್ಲಿರುತ್ತೇವೆ ಅನ್ನೋ ವಿಷಯವನ್ನು ಈ ಕಾರ್ಯಕ್ರಮದಲ್ಲಿ ಹೇಳುತ್ತೇವೆ’ ಎಂದಿದ್ದಾರೆ ಧ್ರುವ.
ಇನ್ನು ಲೈವ್ನಲ್ಲಿ, “ಒಂದು ನಿಮಿಷದ ಟ್ರೇಲರ್, ಮೇಕಿಂಗ್ ವೀಡಿಯೋ ಅಥವಾ ಇಂಟ್ರೊಡಕ್ಷನ್ ಸಾಂಗ್ ಬಿಡಬೇಕಾ ಎಂಬ ವಿಚಾರವನ್ನು ಅಭಿಮಾನಿಗಳಾದ ನಿಮಗೆ ಬಿಡುತ್ತೇನೆ. ನೀವು ಹೇಳಿದ ಹಾಗೆ ನಮ್ಮ ಚಿತ್ರತಂಡ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ’ ಎಂದು ಆಯ್ಕೆಯನ್ನು ಪ್ರೇಕ್ಷಕರಿಗೇ ಬಿಟ್ಟಿದ್ದಾರೆ ಧ್ರುವ ಸರ್ಜಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ