“ಸಂಹಾರಿಣಿ’ಯಾದ ಪೂಜಾಗಾಂಧಿ
Team Udayavani, May 14, 2019, 3:00 AM IST
ಇತ್ತೀಚೆಗೆ ಪೂಜಾಗಾಂಧಿ ಹೆಸರು ಸಿನಿಮಾಗಳಿಗಿಂತ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ಹಾಗಾದರೆ, ವಿವಾದ – ರಾಜಕೀಯಗಳ ಹೊರತಾಗಿ ಪೂಜಾ ಗಾಂಧಿ ಸಿನಿಮಾಗಳ ಸುದ್ದಿ ಏನು ಇಲ್ಲವಾ ಎಂದು ಕೇಳುತ್ತಿದ್ದ ಸಿನಿಮಂದಿಗೆ ಪೂಜಾ ಗಾಂಧಿ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನೆಂದರೆ, ಮತ್ತೆ ಪೂಜಾ ಗಾಂಧಿ ಬಿಗ್ ಸ್ಕ್ರೀನ್ ಮೇಲೆ ಬರುತ್ತಿದ್ದಾರೆ. ಅದೂ “ಸಂಹಾರಿಣಿ’ ಅವತಾರದಲ್ಲಿ.
ಹೌದು, “ದಂಡುಪಾಳ್ಯ’ ಸರಣಿಯ ನಂತರ ಪೂಜಾ ಗಾಂಧಿ ಅಭಿನಯದ “ಸಂಹಾರಿಣಿ’ ಚಿತ್ರ ಸದ್ದಿಲ್ಲದೆ ತಯಾರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಬಂದಿದೆ. ಇನ್ನು ಹೆಸರೇ ಹೇಳುವಂತೆ “ಸಂಹಾರಿಣಿ’ ಔಟ್ ಆ್ಯಂಡ್ ಔಟ್ ಸಾಹಸ ಪ್ರಧಾನ ಕಥಾಹಂದರ ಹೊಂದಿರುವ ಕಮರ್ಷಿಯಲ್ ಚಿತ್ರ.
ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್-ಥ್ರಿಲ್ಲರ್ ಎಲಿಮೆಂಟ್ಸ್ ಕೂಡ ಇರಲಿದೆ ಎನ್ನುವುದು ಚಿತ್ರತಂಡದ ಮಾತು. ಇಲ್ಲಿಯವರೆಗೆ ಗ್ಲಾಮರಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದ ಪೂಜಾ ಗಾಂಧಿ ಈ ಚಿತ್ರದಲ್ಲಿ ಆ್ಯಕ್ಷನ್ ಲುಕ್ನಲ್ಲೂ ನೋಡಬಹುದಂತೆ. ಕೆ. ಶಬರೀಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೆ. ಜವಾಹರ್ “ಸಂಹಾರಿಣಿ’ಯನ್ನು ನಿರ್ದೇಶಿಸುತ್ತಿದ್ದಾರೆ.
“ಸಂಹಾರಿಣಿ’ ಗೆಟಪ್ನಲ್ಲಿರುವ ಪೂಜಾ ಗಾಂಧಿ ಅವರೊಂದಿಗೆ ಚಿತ್ರದಲ್ಲಿ ಬಾಲಿವುಡ್ನ ಖ್ಯಾತ ಖಳನಟರಾದ ರಾಹುಲ್ ದೇವ್, ರವಿ ಕಾಳೆ, ಹ್ಯಾರಿ ಜೋಶ್ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕಿಶೋರ್, ಸಚಿನ್, ಅರುಣ್ ಮೊದಲಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ರಾಜೇಶ್ ಕುಮಾರ್ ಅವರು ಛಾಯಾಗ್ರಹಣ, ಅಖೀಲ್ ಸಂಕಲನವಿದೆ.
ಚಿತ್ರದ ಹಾಡುಗಳಿಗೆ ಡಾ. ವಿ ನಾಗೇಂದ್ರ ಪ್ರಸಾದ್ ಗೀತ ಸಾಹಿತ್ಯವಿದ್ದು, ಮಾಸ್ ಮಾದ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಒಟ್ಟಾರೆ ಬಹುದಿನಗಳ ನಂತರ “ಸಂಹಾರಿಣಿ’ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿರುವ ಪೂಜಾ ಗಾಂಧಿ, ಲುಕ್ ಎಷ್ಟರ ಮಟ್ಟಿಗೆ ಲಕ್ ತಂದುಕೊಡುತ್ತದೆ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ