ರಜನಿಕಾಂತ್‌ ಕನಸಿನ ಪಾತ್ರದಲ್ಲಿ ಬಾಹುಬಲಿ ಖ್ಯಾತಿಯ ಪ್ರಭಾಕರ್‌

ಬಿಚ್ಚುಗತ್ತಿಯಲ್ಲಿ ದಳವಾಯಿ ಮುದ್ದಣ್ಣನಾಗಿ ಅಭಿನಯ

Team Udayavani, Nov 28, 2019, 6:05 AM IST

Bicchugatti

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ಕನಸಿನ ಪಾತ್ರದ ಬಗ್ಗೆ ಆಗಾಗ ಹೇಳುತ್ತಲೇ ಇರುತ್ತಾರೆ. ಅವರಷ್ಟೇ ಅಲ್ಲ, ಪ್ರಕಾಶ್‌ ರೈ ಕೂಡ ಆ ಪಾತ್ರದ ಕುರಿತು ಸಾಕಷ್ಟು ಸಲ ಹೇಳಿದ್ದು ಉಂಟು. ಈಗ ರಜನಿಕಾಂತ್‌ ಅವರ ಕನಸಿನ ಪಾತ್ರದಲ್ಲಿ ತಮಿಳು ನಟರೊಬ್ಬರು ಕಾಣಿಸಿಕೊಂಡಿದ್ದಾರೆ. ಹೌದು, ರಜನಿಕಾಂತ್‌ ಹಾಗು ಪ್ರಕಾಶ್‌ ರೈ ಅವರ ಕನಸಿನ ಪಾತ್ರ ಬೇರಾವುದೂ ಅಲ್ಲ. ಅದು, ದಳವಾಯಿ ಮುದ್ದಣ್ಣ.

ಅಂದಹಾಗೆ, ಈ ಪಾತ್ರ ಮಾಡಿರೋದು “ಬಾಹುಬಲಿ’ ಖ್ಯಾತಿಯ ಪ್ರಭಾಕರ್‌. ಕನ್ನಡದಲ್ಲಿ ತಯಾರಾಗುತ್ತಿರುವ ಡಾ.ಬಿ.ಎಲ್‌.ವೇಣು ಅವರ ಕಾದಂಬರಿ ಆಧಾರಿತ “ಬಿಚ್ಚುಗತ್ತಿ’ ಚಿತ್ರದಲ್ಲಿ ಪ್ರಭಾಕರ್‌ ಅವರು ದಳವಾಯಿ ಮುದ್ದಣ್ಣ ಪಾತ್ರ ಮಾಡಿದ್ದಾರೆ. ಹರಿ ಸಂತೋಷ್‌ ನಿರ್ದೇಶನದ ಈ ಚಿತ್ರದಲ್ಲಿ ಭರಮಣ್ಣನಾಗಿ ರಾಜವರ್ಧನ್‌ ಅವರು ಕಾಣಿಸಿಕೊಂಡಿದ್ದಾರೆ. ಸಿದ್ಧಾಂಬೆ ಪಾತ್ರದಲ್ಲಿ ಹರಿಪ್ರಿಯಾ ನಟಿಸಿದ್ದಾರೆ.

ಉಳಿದಂತೆ ಚಿತ್ರದಲ್ಲಿ “ಸ್ಪರ್ಶ’ ರೇಖಾ, ಶಿವರಾಂ, ಶರತ್‌ಲೋಹಿತಾಶ್ವ, “ಡಿಂಗ್ರಿ’ ನಾಗರಾಜ್‌, ರಮೇಶ್‌ ಪಂಡಿತ್‌, ಪ್ರಕಾಶ್‌ ಹೆಗ್ಗೊಡು, ಕಲ್ಯಾಣಿ, ಶ್ರೀನಿವಾಸಮೂರ್ತಿ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ರಮುಖ ಪಾತ್ರ ದಳವಾಯಿ ಮುದ್ದಣ್ಣ ಪಾತ್ರದಲ್ಲಿ ಪ್ರಭಾಕರ್‌ ನಟಿಸಿದ್ದು, ಆ ಪಾತ್ರ ಚಿತ್ರದ ಹೈಲೈಟ್‌ಗಳಲ್ಲೊಂದು ಎಂಬುದು ಚಿತ್ರತಂಡದ ಮಾತು. “ಬಿಚ್ಚುಗತ್ತಿ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಗ್ರಾಫಿಕ್ಸ್‌ ಕೆಲಸ ನಡೆಯುತ್ತಿದೆ. ಇಷ್ಟರಲ್ಲೇ ಸಿಜಿ ಕೆಲಸ ಮುಗಿಯಲಿದ್ದು, ಬಿಡುಗಡೆಗೆ ತಯಾರಿ ಮಾಡಿಕೊಳುತ್ತಿದೆ.

ಚಿತ್ರದ ಇನ್ನೊಂದು ವಿಶೇಷವೆಂದರೆ, 16 ನೇ ಶತಮಾನಕ್ಕೆ ಕೊಂಡೊಯ್ಯುವ ಮೇಕಿಂಗ್‌ ನೋಡಿದ ದಕ್ಷಿಣ ಭಾರತದ ಹೆಸರಾಂತ ತಂತ್ರಜ್ಞರೊಬ್ಬರು, ತಮ್ಮ ನೇತೃತ್ವದಲ್ಲಿ ಚಿತ್ರದ ಗ್ರಾಫಿಕ್ಸ್‌ ಹಾಗು ಪೋಸ್ಟ್‌ಪ್ರೊಡಕ್ಷನ್ಸ್‌ ಕೆಲಸದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆ ಹೆಸರಾಂತ ತಂತ್ರಜ್ಞರು ಯಾರೆಂಬುದನ್ನು ಚಿತ್ರತಂಡ ಇಷ್ಟರಲ್ಲೇ ಕೆಲಸ ಪೂರ್ಣಗೊಂಡ ಬಳಿಕ ಹೇಳಲಿದೆ. ಸದ್ಯದಲ್ಲೇ ಟೀಸರ್‌ ಬಿಡುಗಡೆ ಮಾಡುವ ಯೋಚನೆ ತಂಡಕ್ಕಿದೆ. ಡಿಸೆಂಬರ್‌ನಲ್ಲಿ ಆಡಿಯೋ ಬಿಡುಗಡೆಗೆ ಜೋರು ತಯಾರಿ ನಡೆಯುತ್ತಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.