ಪ್ರಜಾ ರಾಜ್ಯ ಚಿತ್ರದಲ್ಲಿ ರೈತ ಗೀತೆ


Team Udayavani, Jan 16, 2023, 3:29 PM IST

praja rajya kannada movie

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ರೈತರಿಗೆಂದೇ ಮಾಡಲಾದ ವಿಶೇಷ ಗೀತೆಯೊಂದನ್ನು “ಪ್ರಜಾರಾಜ್ಯ’ ಚಿತ್ರತಂಡ ಬಿಡುಗಡೆ ಮಾಡಿದೆ. “ಜಗದಲ್ಲಿ ರೈತನೆಂಬ ಬ್ರಹ್ಮ…’ ಎಂಬ ಸಾಲುಗಳಿಂದ ಶುರುವಾಗುವ ಈ ಗೀತೆಗೆ ಡಾ. ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯವಿದ್ದು, ಶಂಕರ್‌ ಮಹದೇವನ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಇತ್ತೀಚೆಗೆ ಹಿರಿಯ ನಿರ್ದೇಶಕ ಟಿ. ಎಸ್‌ ನಾಗಾಭರಣ ಈ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಮಾತನಾಡಿದ ಟಿ. ಎಸ್‌ ನಾಗಾಭರಣ, “ರೈತ ಗೀತೆಗಳು ನಮಗೆಲ್ಲ ಹೊಸದಲ್ಲ. ಕುವೆಂಪು ಮಾದರಿ ಕಲ್ಪಿಸಿ ಕೊಟ್ಟಿದ್ದಾರೆ. ಈ ಚಿತ್ರದ ರೈತಗೀತೆಯಲ್ಲಿ ಹೊಸದನ್ನು ಹುಟ್ಟುಹಾಕುವ ಪ್ರಯತ್ನವನ್ನು ನಾಗೇಂದ್ರ ಪ್ರಸಾದ್‌ ಚೆನ್ನಾಗಿ ಮಾಡಿದ್ದಾರೆ. ನಮ್ಮ ಮೂಲ ಸಂಸ್ಕೃತಿ ಜೊತೆ ಕೃಷಿ ಹೆಣೆಯಬೇಕು ಎನ್ನುವ ವಿಷಯವನ್ನು ಜನರಿಗೆ ತಲುಪಿಸುವ ಪ್ರಯತ್ನ ಈ ತಂಡ ಮಾಡಿದೆ. ಪ್ರಜೆಗಳಿಗೆ ಮುಖ್ಯವಾಗಿ ಇರಬೇಕಾದ ಅಂಶದ ಮೇಲೆ ಈ ಸಿನಿಮಾ ಮಾಡಲಾಗಿದೆ. ಹೊಸತನವನ್ನು ಹುಡುಕುತ್ತಾ ಬಂದಿರುವ ಈ ಸಿನಿಮಾ ಪ್ರಜೆಗಳಿಗೆ ತಲುಪಬೇಕು’ ಎಂದರು.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ ಡಾ. ವರದರಾಜು ಡಿ. ಎಸ್‌ ಮಾತನಾಡಿ, “ನಾನು ವೃತ್ತಿಯಲ್ಲಿ ಡಾಕ್ಟರ್‌ ಆಗಿದ್ದರೂ ನನ್ನ ಮೂಲ ಕೃಷಿ. ಇಂದು ದೇಶ ಕಾಪಾಡತ್ತ ಇರೋದು ಕೃಷಿ ಹಾಗೂ ರೈತ. ಆ ರೈತರಿಗೆ ಈ ಸಾಂಗ್‌ ಸಮರ್ಪಣೆ. ಹಾಗಾಗಿ ನಾವು ಈ ಗೀತೆಯನ್ನು ರೈತರ ಹಬ್ಬವಾದ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್‌ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಬಂದು 75 ವರ್ಷದಲ್ಲಿ ಪ್ರಜಾಪ್ರಭುತ್ವ ಮರೆತಿರುವುದು ನಮ್ಮ ಸಾಧನೆ. ಹಾಗಾಗಿ ಅದನ್ನು ನೆನಪು ಮಾಡುವುದಕ್ಕೆ ಈ ಸಿನಿಮಾ ಮಾಡಲಾಗಿದೆ’ ಎಂದರು.

ಚಿತ್ರದ ನಿರ್ದೇಶಕ ವಿಜಯ್‌ ಭಾರ್ಗವ, ಹಿರಿಯ ನಟ ಚಿಕ್ಕ ಹೆಜ್ಜಾಜಿ ಮಹಾದೇವ, ವಿತರಕ ವೆಂಕಟ್‌ ಮೊದಲಾದವರು ಚಿತ್ರದ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ವಿಜೇತ ಮಂಜಯ್ಯ ಸಂಗೀತ, ರಾಕೇಶ್‌ ತಿಲಕ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನವಿದೆ. ನಿರ್ಮಾಪಕ ವರದರಾಜು ಹಾಗೂ ನಿರ್ದೇಶಕ ವಿಜಯ್‌ ಭಾರ್ಗವ, ದಿವ್ಯಾ ಗೌಡ, ದೇವರಾಜ್‌, ಸುಧಾ ಬೆಳವಾಡಿ, ಅಚ್ಯುತ್ ಕುಮಾರ್‌, ತಬಲಾ ನಾಣಿ, ಸುಧಾರಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ “ಪ್ರಜಾರಾಜ್ಯ’ ಚಿತ್ರ ಇದೇ ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.