ವೀರಂ ಹಿಂದೆ ಪ್ರಜ್ವಲ್‌

ಶೀರ್ಷಿಕೆ, ಮೋಷನ್‌ ಪೋಸ್ಟರ್‌ಗೆ ದರ್ಶನ್‌ ಚಾಲನೆ

Team Udayavani, Sep 19, 2019, 3:03 AM IST

prajwal

ಇತ್ತೀಚೆಗಷ್ಟೇ ಪ್ರಜ್ವಲ್‌ ದೇವರಾಜ್‌ ಅವರು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಆ ಚಿತ್ರವನ್ನು “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರದ ನಿರ್ಮಾಪಕ ಶಶಿಧರ್‌ ಕೆ.ಎಂ. ನಿರ್ಮಿಸಲಿದ್ದಾರೆ ಎಂದು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆಗ ಆ ಹೊಸ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ಈಗ ಚಿತ್ರಕ್ಕೆ “ವೀರಂ’ ಎಂದು ಹೆಸರಿಟ್ಟಿದ್ದು, ನಟ ದರ್ಶನ್‌ ಅವರು ಸೆ.18 ರ ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬದ ದಿನದಂದೇ ಚಿತ್ರದ ಶೀರ್ಷಿಕೆ ಹಾಗೂ ಮೋಷನ್‌ ಪೋಸ್ಟರ್‌ ಲಾಂಚ್‌ ಮಾಡುವ ಮೂಲಕ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಹೌದು, ಪ್ರಜ್ವಲ್‌ ದೇವರಾಜ್‌ ಅಭಿನಯದ ಹೊಸ ಚಿತ್ರಕ್ಕೆ “ವೀರಂ’ ಎಂದು ಹೆಸರಿಡಲಾಗಿದೆ. ಶೀರ್ಷಿಕೆ ಹೇಳುವಂತೆ ಇದೊಂದು ಪಕ್ಕಾ ಮಾಸ್‌ ಫೀಲ್‌ ಇರುವ ಚಿತ್ರ. ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬದಂದೇ ಚಿತ್ರದ ಶೀರ್ಷಿಕೆ ಮತ್ತು ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಲು ಕಾರಣವಿದೆ. “ವೀರಂ’ ಚಿತ್ರದಲ್ಲಿ ನಾಯಕ ಪ್ರಜ್ವಲ್‌ ಅವರು ವಿಷ್ಣುವರ್ಧನ್‌ ಅವರ ಅಭಿಮಾನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ, ವಿಷ್ಣುವರ್ಧನ್‌ ಅವರ ಜನ್ಮದಿನದಂದೇ ಟೈಟಲ್‌, ಪೋಸ್ಟರ್‌ ಲಾಂಚ್‌ ಮಾಡಲಾಗಿದೆ ಎಂಬುದು ಚಿತ್ರತಂಡದ ಮಾತು.

ಈಗಾಗಲೇ ಹಲವು ಚಿತ್ರಗಳಲ್ಲಿ ಹೀರೋ ವಿಷ್ಣುವರ್ಧನ್‌ ಅವರ ಅಭಿಮಾನಿಯಾಗಿ ನಟಿಸಿದ್ದಾರೆ. ಯಶ್‌ “ರಾಮಾಚಾರಿ’ಯಲ್ಲಿ ವಿಷ್ಣುವರ್ಧನ್‌ ಫ್ಯಾನ್‌ ಆಗಿದ್ದರೆ, ಗುರುರಾಜ್‌ ಜಗ್ಗೇಶ್‌ “ವಿಷ್ಣು ಸರ್ಕಲ್‌’ ಚಿತ್ರದಲ್ಲಿ ವಿಷ್ಣುವರ್ಧನ್‌ ಅಭಿಮಾನಿ, ಇನ್ನು, ಕೆ.ಮಂಜು ಪುತ್ರ ಶ್ರೇಯಸ್‌ ಅಭಿನಯದ “ಪಡ್ಡೆ ಹುಲಿ’ ಚಿತ್ರದಲ್ಲೂ ವಿಷ್ಣು ಅಭಿಮಾನಿಯಾಗಿ ಕಾಣಿಸಿಕೊಂಡಾಗಿದೆ. ಈಗ “ವೀರಂ’ ಚಿತ್ರದಲ್ಲಿ ಪ್ರಜ್ವಲ್‌ ವಿಷ್ಣುವರ್ಧನ್‌ ಅವರ ಫ್ಯಾನ್‌. ಇದಷ್ಟೇ ಅಲ್ಲ, ವಿಷ್ಣುವರ್ಧನ್‌ ಅವರ ಚಿತ್ರಗಳ ಶೀರ್ಷಿಕೆ ಚಿತ್ರದಲ್ಲೂ ಸ್ಟಾರ್‌ ನಟರು ನಟಿಸಿದ್ದಾರೆ.

“ಕೋಟಿಗೊಬ್ಬ’, “ಯಜಮಾನ’ ಚಿತ್ರಗಳ ಶೀರ್ಷಿಕೆ ಮರುಬಳಕೆಯಾಗಿ, ಸಕ್ಸಸ್‌ ಕಂಡಿದ್ದು ಕಣ್ಣ ಮುಂದೆಯೇ ಇದೆ. ಅದೇನೆ ಇರಲಿ, “ವೀರಂ’ ಒಂದು ಸಂಸ್ಕೃತ ಪದವಾಗಿದ್ದು, ಆ ಹೆಸರಲ್ಲಿ ಈಗ ಪಕ್ಕಾ ಕಮರ್ಷಿಯಲ್‌ ಸಿನಿಮಾ ಮಾಡಲು ಚಿತ್ರತಂಡ ಅಣಿಯಾಗುತ್ತಿದೆ. ಖದರ್‌ ಕುಮಾರ್‌ ನಿರ್ದೇಶನವಿದೆ. ನಿರ್ಮಾಣದಲ್ಲಿ ರಘು ಸಿಂಗಂ ಸಾಥ್‌ ನೀಡುತ್ತಿದ್ದಾರೆ. ಸದ್ಯಕ್ಕೆ ಹೀರೋ ಹೊರತಾಗಿ, ನಾಯಕಿ, ತಂತ್ರಜ್ಞರ ಆಯ್ಕೆ ನಡೆದಿಲ್ಲ. ಎಲ್ಲಾ ಅಂದುಕೊಂಡಂತೆ ನಡೆದರೆ ಡಿಸೆಂಬರ್‌ನಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.