ಇಂದು ಪ್ರಜ್ವಲ್‌ ಬರ್ತ್‌ಡೇ: ಸಿನಿಮಾಗಳ ಟೈಟಲ್‌, ಟೀಸರ್‌, ಪೋಸ್ಟರ್‌ ರಿಲೀಸ್‌


Team Udayavani, Jul 4, 2021, 8:30 AM IST

prajwal devaraj

ಡೈನಾಮಿಕ್‌ ಪ್ರಿನ್ಸ್‌ ನಟ ಪ್ರಜ್ವಲ್‌ ದೇವರಾಜ್‌ಗೆ ಇಂದು (ಜು.4) ಜನ್ಮದಿನದ ಸಂಭ್ರಮ. ಪ್ರತಿವರ್ಷ ಪ್ರಜ್ವಲ್‌ ದೇವರಾಜ್‌ ತಮ್ಮ ಜನ್ಮದಿನವನ್ನು ಅಭಿಮಾನಿಗಳು, ಸ್ನೇಹಿತರು ಮತ್ತುಕುಟುಂಬ ವರ್ಗದ ಜೊತೆ ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದರು. ಆದರೆ ಕಳೆದ ವರ್ಷದಿಂದ ಕೊರೊನಾ ಆತಂಕ ಪ್ರಜ್ವಲ್‌ ದೇವರಾಜ್‌ ಅದ್ಧೂರಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್‌ ಹಾಕಿದೆ.

ಕೊರೊನಾ ಲಾಕ್‌ಡೌನ್‌ನಿಂದ ಕಳೆದ ವರ್ಷ ತಮ್ಮ ಬರ್ತ್‌ಡೇಯನ್ನು ಪ್ರಜ್ವಲ್‌ ದೇವರಾಜ್‌ ಸರಳವಾಗಿ ಆಚರಿಸಿಕೊಂಡಿದ್ದರು. ಇನ್ನೂ ಈ ವರ್ಷ ಕೂಡ ಕೊರೊನಾ ಎರಡನೇ ಅಲೆಯ ಆತಂಕ ಮುಂದುವರೆದಿರುವುದರಿಂದ, ಈ ಬಾರಿಯೂ ಪ್ರಜ್ವಲ್‌ ತಮ್ಮ ಹುಟ್ಟುಹಬ್ಬದ ಅದ್ಧೂರಿ ಆಚರಣೆಯಿಂದ ದೂರವಿರುವ ನಿರ್ಧಾರಕ್ಕೆ ಬಂದಿದ್ದಾರೆ. “ಅಭಿಮಾನಿಗಳು ಕೊರೊನಾ ಸಂತ್ರಸ್ಥರಿಗೆ ಸಹಾಯ ಹಸ್ತ ನೀಡುವ ಮೂಲಕ ನನ್ನ ಹುಟ್ಟು ಹಬ್ಬಕ್ಕೆ ಹರಸಿ ಹಾರೈಸಿ ಎಂದುಕೇಳಿಕೊಳ್ಳುತ್ತೇನೆ’ ಎಂದು ಪ್ರಜ್ವಲ್‌ ಅಭಿಮಾನಿಗಳಲ್ಲಿ ಪ್ರಜ್ವಲ್‌ ಮನವಿ ಮಾಡಿದ್ದಾರೆ.

ಇನ್ನು, ಬರ್ತ್‌ಡೇ ಪ್ರಯುಕ್ತ ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ಮುಂಬರುವ ಹಲವು ಸಿನಿಮಾ ತಂಡಗಳು ತಮ್ಮ ಸಿನಿಮಾಗಳ ಟೀಸರ್‌, ಪೋಸ್ಟರ್‌, ಫ‌ಸ್ಟ್‌ಲುಕ್‌, ಟೈಟಲ್‌ ಬಿಡುಗಡೆ ಮಾಡುವ ಮೂಲಕ ತಮ್ಮ ನಾಯಕ ನಟನಿಗೆ ಜನ್ಮದಿನದ ಶುಭಾಶಯ ಕೋರುತ್ತಿವೆ. ಸದ್ಯಕೈಯಲ್ಲಿ ಐದಕ್ಕೂ ಹೆಚ್ಚು ಸಿನಿಮಾಗಳಿವೆ.

“ವೀರಂ’ಟೀಸರ್‌ ಔಟ್‌: ಪ್ರಜ್ವಲ್‌ ದೇವರಾಜ್‌ ಆ್ಯಕ್ಷನ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ “ವೀರಂ’ ಚಿತ್ರದ ಫ‌ಸ್ಟ್‌ ಟೀಸರ್‌, ಪ್ರಜ್ವಲ್‌ ಬರ್ತ್‌ಡೇ ಪ್ರಯುಕ್ತ “ಆನಂದ್‌ ಆಡಿಯೋ’ ಯು-ಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. “ಶಶಿಧರ್‌ ಸ್ಟುಡಿಯೋಸ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಶಶಿಧರಕೆ.ಎಂ ನಿರ್ಮಾಣದಲ್ಲಿ ಮೂಡಿಬರುತ್ತಿರುವ “ವೀರಂ’ ಚಿತ್ರಕ್ಕೆ ಕುಮಾರ್‌ ರಾಜ್‌ (ಖದರ್‌) ನಿರ್ದೇಶನವಿದೆ. ಚಿತ್ರದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ರಚಿತಾ ರಾಮ್‌ ಜೋಡಿಯಾಗಿದ್ದಾರೆ. ಶ್ರೀನಗರ ಕಿಟ್ಟಿ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಬಿಡುಗಡೆಯಾಗಿರುವ “ವೀರಂ’ ಟೀಸರ್‌ ಮಾಸ್‌ ಆಡಿಯನ್ಸ್‌ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ಭೋಜಪುರಿ ಮತ್ತೊಂದು ಚಿತ್ರದಲ್ಲಿ ಬ್ಯುಝಿಯಾದ ನಟಿ ಹರ್ಷಿಕಾ ಪೂಣಚ್ಚ

“ಮಾಫಿಯಾ’ದಲ್ಲಿ ಖಡಕ್‌ ಲುಕ್‌: ಪ್ರಜ್ವಲ್‌ ದೇವರಾಜ್‌ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ಅಭಿನಯಿಸುತ್ತಿರುವ, ಗುರುದತ್‌ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ “ಮಾಫಿಯಾ’ ಎಂದು ಟೈಟಲ್‌ ಇಡಲಾಗಿದೆ. ಪ್ರಜ್ವಲ್‌ ಬರ್ತ್‌ಡೆ ಪ್ರಯುಕ್ತ ಚಿತ್ರತಂಡ “ಮಾಫಿಯಾ’ ಸಿನಿಮಾ ಟೈಟಲ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದುಕೂಡ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರದ ಚಿತ್ರವಾಗಿದ್ದು, “ಮಾಫಿಯಾ’ ಟೈಟಲ್‌ ಪೋಸ್ಟರ್‌ ಮಾಸ್‌ ಆಡಿಯನ್ಸ್‌ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರವನ್ನು ಕುಮಾರ್‌ ಬಿ. ನಿರ್ಮಿಸುತ್ತಿದ್ದಾರೆ.

ಅಬ್ಬರ: ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ಅಭಿನಯಿಸುತ್ತಿರುವ, ಕೆ. ರಾಮನಾರಾಯಣ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ “ಅಬ್ಬರ’ ಎಂದು ಹೆಸರಿಡಲಾಗಿದ್ದು, ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ” ಸಿ ಆ್ಯಂಡ್‌ ಎಂ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಬಸವರಾಜ್‌ ಮಂಚಯ್ಯ ನಿರ್ಮಾಣವಿದೆ. ಇದರ ಜತೆಗೆ ಪ್ರಜ್ವಲ್‌ ಅವರ ಹೊಸ ಸಿನಿಮಾವು ಇಂದು ಅನೌನ್ಸ್‌ ಆಗಲಿದ್ದು, ನವೀನ್‌ ಕುಮಾರ್‌ ಎನ್ನುವವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ

ನಂದಕಿಶೋರ್‌ ಜೊತೆ ಆ್ಯಕ್ಷನ್‌ ಚಿತ್ರ: “ರಶ್ಮಿ ಫಿಲಂಸ್‌’ ಬ್ಯಾನರ್‌ನಲ್ಲಿ ಸುಮಂತ್‌ ಕ್ರಾಂತಿ ನಿರ್ಮಾಣದ ಎರಡನೇ ಚಿತ್ರದಲ್ಲಿ ಪ್ರಜ್ವಲ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದುಈ ಚಿತ್ರಕ್ಕೆ “ಪೊಗರು’ ಖ್ಯಾತಿಯ ನಂದಕಿಶೋರ್‌ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಪ್ರಜ್ವಲ್‌ ಬರ್ತ್‌ಡೇ ಪ್ರಯುಕ್ತ ಚಿತ್ರತಂಡ ಚಿತ್ರವನ್ನು ಘೋಷಣೆ ಮಾಡಿದ್ದು, ಸದ್ಯ ಚಿತ್ರದ ಪ್ರಿ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರ ಹೊಂದಿರುವ ಈ ಚಿತ್ರದ ಟೈಟಲ್‌ ಮತ್ತು ಫ‌ಸ್ಟ್‌ಲುಕ್‌ ಶೀಘ್ರದಲ್ಲೇ ರಿಲೀಸ್‌ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ರಿಲೀಸ್‌ಗೆ ರೆಡಿ ಅರ್ಜುನ್‌ ಗೌಡ: ಪ್ರಜ್ವಲ್‌ ದೇವರಾಜ್‌ ಅಭಿನಯದ “ಅರ್ಜುನ್‌ ಗೌಡ’ ಶೀಘ್ರದಲ್ಲಿಯೇ ತೆರೆಗೆ ಬರಲಿದೆ. ಈಗಾಗಲೇ “ಅರ್ಜುನ್‌ ಗೌಡ’ ಟೈಟಲ್‌, ಲುಕ್‌, ಟೀಸರ್‌, ಟ್ರೇಲರ್‌ ಮಾಸ್‌ಆಡಿಯನ್ಸ್‌ ಗಮನ ಸೆಳೆದಿದ್ದು, ಕೋಟಿ ನಿರ್ಮಾಪಕ ರಾಮು ನಿರ್ಮಾಣದ ಈ ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ. ಚಿತ್ರಕ್ಕೆ ಲಕ್ಕಿ ಶಂಕರ್‌ ನಿರ್ದೇಶನವಿದ್ದು, ಚಿತ್ರದಲ್ಲಿ ಪ್ರಜ್ವಲ್‌ಗೆ  ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್‌ ಅಭಿನಯಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.