‘ಮಾಫಿಯಾ’ ಅಡ್ಡದಲ್ಲಿ ದೇವರಾಜ್‌- ಪ್ರಜ್ವಲ್‌ ದೇವರಾಜ್‌


Team Udayavani, Dec 14, 2021, 1:18 PM IST

‘ಮಾಫಿಯಾ’ ಅಡ್ಡದಲ್ಲಿ ದೇವರಾಜ್‌- ಪ್ರಜ್ವಲ್‌ ದೇವರಾಜ್‌

ನಟ ಪ್ರಜ್ವಲ್‌ ದೇವರಾಜ್‌ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ’ ಚಿತ್ರ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶ್ರೀನಿವಾಸ್‌ ನಿರ್ಮಿಸಿದ್ದ ಪೊಲೀಸ್‌ ಕಂಟ್ರೋಲ್‌ ರೂಂನ ಸೆಟ್‌ನಲ್ಲಿ ನಡೆಯುತ್ತಿದೆ. ನಟ ಪ್ರಜ್ವಲ್‌ ದೇವರಾಜ್‌, ಹಿರಿಯ ನಟ ದೇವರಾಜ್‌ ಹಾಗೂ ಸಾಧುಕೋಕಿಲ ಮೊದಲಾದ ಕಲಾವಿದರು ಪಾಲ್ಗೊಂಡಿದ್ದ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯಲಾಯಿತು.

ಬಹಳ ಸಮಯದ ನಂತರ ನಟ ದೇವರಾಜ್‌ ಮತ್ತು ಪ್ರಜ್ವಲ್‌ ದೇವರಾಜ್‌ ಒಂದೇ ಚಿತ್ರದಲ್ಲಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು, ಇದೇ ವೇಳೆ ಮಾಧ್ಯಮಗಳ ಮುಂದೆ ಮುಂದೆ ಬಂದಿದ್ದ ಡೈನಾಮಿಕ್‌ ಹೀರೋ ದೇವರಾಜ್‌ ಮತ್ತು ಪುತ್ರ ಪ್ರಜ್ವಲ್‌ ದೇವರಾಜ್‌, “ಮಾಫಿಯಾ’ ಚಿತ್ರೀಕರಣದ ಅನುಭವಗಳ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡರು.

ಮೊದಲು ಮಾತಿಗಿಳಿದ ದೇವರಾಜ್‌, “ನಾನು ನನ್ನ ಮಗ ಪ್ರಜ್ವಲ್‌ ಇಬ್ಬರು “ಮಾಫಿಯಾ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದೇವೆ. ಇನ್ನೊಂದು ಖುಷಿಯ ವಿಷಯವೆಂದರೆ, ನಾವಿಬ್ಬರೂ ಸಿನಿಮಾದಲ್ಲಿ ಪೊಲೀಸ್‌ ಆಫೀಸರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇವೆ. ನಿರ್ದೇಶಕ ಲೋಹಿತ್‌ ತುಂಬ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಪೊಲೀಸ್‌ ಸ್ಟೋರಿಯಿದ್ದರೂ, ಅದನ್ನು ಬೇರೆ ಥರದಲ್ಲಿ ಸ್ಕ್ರೀನ್‌ ಮೇಲೆ ಹೇಳುತ್ತಿದ್ದಾರೆ. ಸಿನಿಮಾ ತುಂಬ ಚೆನ್ನಾಗಿ ಮೂಡಿಬರುತ್ತಿದೆ. ನಮ್ಮಿಬ್ಬರ ಕೆಮಿಸ್ಟ್ರಿ ಸ್ಕ್ರೀನ್‌ ಮೇಲೆ ಹೇಗೆ ಬರುತ್ತದೆ ಎಂಬ ಕುತೂಹಲ, ನಿರೀಕ್ಷೆ ನನಗೂ ಇದೆ’ ಎಂದರು.

ಇದನ್ನೂ ಓದಿ:ಮಗಳ ಬರ್ತ್ ಡೇ ನೆಪವೊಡ್ಡಿ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದ ಹಿಂದೆ ಸರಿದ ವಿರಾಟ್

ಬಳಿಕ ಮಾತನಾಡಿದ ನಟ ಪ್ರಜ್ವಲ್‌ ದೇವರಾಜ್‌, “ನನ್ನ ಅಪ್ಪನ ಜೊತೆ ಕೆಲಸ ಮಾಡುತ್ತಿರುವುದು ತುಂಬ ಖುಷಿ ಕೊಡುತ್ತಿದೆ. ಈ ಹಿಂದೆ “ಅರ್ಜುನ’ ಸಿನಿಮಾದಲ್ಲಿ ಇಬ್ಬರು ವಿರುದ್ಧ ಪಾತ್ರಗಳಲ್ಲಿ ನಟಿಸಿದ್ದೆವು. ಆದರೆ ಇದರಲ್ಲಿ ಇಬ್ಬರು ಪೊಲೀಸ್‌ ಪಾತ್ರದಲ್ಲಿ ಅಭಿನಯಿಸುತ್ತಿದ್ದೇವೆ. ಅವರು ಸೀನಿಯರ್‌ ಆಫೀಸರ್‌. ನಾನು ಜ್ಯೂನಿಯರ್‌ ಆಫೀಸರ್‌. ಕಂಟ್ರೋಲ್‌ ರೂಂನ ಈ ಸೆಟ್‌ ತುಂಬ ಚೆನ್ನಾಗಿ ಮಾಡಿದ್ದಾರೆ. ನಮ್ಮಿಬ್ಬರಿಗೂ ಈ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ’ ಎಂದರು.

ಚಿತ್ರೀಕರಣದ ವೇಳೆ ಹಾಜರಿದ್ದ ನಟ ಸಾಧುಕೋಕಿಲ, “ಮೊದಲ ದಿನದಿಂದಲೂ ನಾನು ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದೇನೆ. ಶೂಟಿಂಗ್‌ ನೋಡಿದ್ರೆ, ಯಾರು ಹೊಸಬರು ಅನಿಸುವುದಿಲ್ಲ. ಎಲ್ಲರು ಎಕ್ಸ್‌ಪರ್ಟ್ ಗಳಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಚಿತ್ರತಂಡದ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ನಿರ್ದೇಶಕ ಲೋಹಿತ್‌, ನಿರ್ಮಾಪಕ ಕುಮಾರ್‌ ಚಿತ್ರೀಕರಣ ಸಾಗುತ್ತಿರುವ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.