ಪ್ರಜ್ವಲ್‌ ಈಗ ಇನ್ಸ್‌ಪೆಕ್ಟರ್‌ ವಿಕ್ರಂ


Team Udayavani, Jan 23, 2018, 10:53 AM IST

prajwal.jpg

ಇನ್ಸ್‌ಪೆಕ್ಟರ್‌ ವಿಕ್ರಂ…! ಈ ಹೆಸರು ಕೇಳಿದಾಕ್ಷಣ ನೆನಪಾಗೋದೇ ಶಿವರಾಜಕುಮಾರ್‌. ಹೌದು, ಇದು ಶಿವರಾಜಕುಮಾರ್‌ ಅಭಿನಯಿಸಿದ ಚಿತ್ರ. ಈಗೇಕೆ ಆ ಚಿತ್ರದ ಬಗ್ಗೆ ಪೀಠಿಕೆ ಅಂತೀರಾ? ವಿಷಯ ಇದೆ. ಈಗಾಗಲೇ ಕನ್ನಡದಲ್ಲಿ ಮರುಶೀರ್ಷಿಕೆಗಳು ಬರುತ್ತಿರುವುದು ಎಲ್ಲರಿಗೂ ಗೊತ್ತು. ಸಾಕಷ್ಟು ಹೊಸಬರು, ಹಳಬರು ಹಳೆಯ ಶೀರ್ಷಿಕೆಗಳನ್ನು ಬಳಸಿ ಚಿತ್ರ ಮಾಡಿದ್ದಾರೆ, ಮಾಡುತ್ತಲೂ ಇದ್ದಾರೆ. ಆ ಸಾಲಿಗೆ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರವೂ ಸೇರಿದೆ.

ಶಿವರಾಜಕುಮಾರ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಶೀರ್ಷಿಕೆ ಇಟ್ಟುಕೊಂಡು ಹೊಸ ಚಿತ್ರವೊಂದು ಸೆಟ್ಟೇರುತ್ತಿದೆ. ಪ್ರಜ್ವಲ್‌ ದೇವರಾಜ್‌ ಈ ಚಿತ್ರದ ಹೀರೋ ಎಂಬುದೇ ಈ ಹೊತ್ತಿನ ವಿಶೇಷ. ಇನ್ನೊಂದು ವಿಶೇಷವೆಂದರೆ, ಇದು ಪ್ರಜ್ವಲ್‌ ದೇವರಾಜ್‌ ಅಭಿನಯದ 30 ನೇ ಸಿನಿಮಾ ಎಂಬುದು. ಈ ಚಿತ್ರವನ್ನು ರಮೇಶ್‌ ಅರವಿಂದ್‌ ಅಭಿನಯಿಸಿದ್ದ “ಪುಷ್ಪಕ ವಿಮಾನ’ ಚಿತ್ರವನ್ನು ನಿರ್ಮಿಸಿದ್ದ ವಿಖ್ಯಾತ್‌ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನು, ಈ ಚಿತ್ರದ ಮೂಲಕ ನರಸಿಂಹ ಅವರು ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ನರಸಿಂಹ ಅವರು “ಪುಷ್ಪಕ ವಿಮಾನ’ ಹಾಗು “ರಣವಿಕ್ರಮ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಆ ಅನುಭವದ ಮೇಲೆ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇಲ್ಲಿ “ಇನ್ಸ್‌ಪೆಕ್ಟರ್‌ ವಿಕ್ರಂ’ ಎಂಬ ಹೆಸರು ಕೇಳಿದಾಕ್ಷಣ, ನೆನಪಿಗೆ ಬರೋದೇ, ಪೊಲೀಸ್‌ ಅಧಿಕಾರಿ ಪಾತ್ರ.

ಪ್ರಜ್ವಲ್‌ ದೇವರಾಜ್‌ ಅವರಿಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತುಂಬಾ ಸ್ಟೈಲಿಶ್‌ ಪಾತ್ರ ಕಟ್ಟಿಕೊಟ್ಟಿರುವ ನಿರ್ದೇಶಕರು, ಕ್ಲಾಸ್‌ ಜೊತೆಗೆ ಮಾಸ್‌ ಎಲಿಮೆಂಟ್ಸ್‌ ಇಟ್ಟುಕೊಂಡು ಈ ಚಿತ್ರವನ್ನು ಮಾಡುತ್ತಿದ್ದಾರೆ. ಈಗಿನ ಟ್ರೆಂಡ್‌ಗೆ ತಕ್ಕಂತಹ ಕಥೆ ಹೆಣೆದು, ಎಲ್ಲಾ ವರ್ಗದವರಿಗೂ ಸೀಮಿತವಾಗುವಂತಹ ಚಿತ್ರ ಕೊಡುವ ಪ್ರಯತ್ನ ನಮ್ಮದು. “ಪುಷ್ಪಕ ವಿಮಾನ’ ನಂತರ ಸಾಕಷ್ಟು ಕಥೆ ಕೇಳಿದ್ದೆ.

ಆದರೆ, ಅಷ್ಟೊಂದು ಚೆನ್ನಾಗಿರಲಿಲ್ಲ. ಈಗ “ಇನ್ಸ್‌ಪೆಕ್ಟರ್‌ ವಿಕ್ರಂ’ ಫ‌ನ್‌ ಬೇಸ್ಡ್ ಆ್ಯಕ್ಷನ್‌ ಚಿತ್ರ ಇಷ್ಟವಾಗಿ ಶುರುಮಾಡುತ್ತಿರುವುದಾಗಿ ಹೇಳುತ್ತಾರೆ ನಿರ್ಮಾಪಕ ವಿಖ್ಯಾತ್‌. ಇದೊಂಥರಾ “ದಬಾಂಗ್‌’ ಶೈಲಿಯ ಚಿತ್ರ. ಇಡೀ ಚಿತ್ರದಲ್ಲಿ ಹಾಸ್ಯವೇ ಮೇಳೈಸಲಿದೆ. ಫ‌ನ್ನಿ ಕಾಪ್‌ ಕಥೆ ಇದಾಗಿದ್ದು, ಪ್ರಜ್ವಲ್‌ ಹಿಂದೆಂದೂ ಕಾಣದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿಯ ಆಯ್ಕೆಯಾಗಿಲ್ಲ.

ಸದ್ಯಕ್ಕೆ ಮೂವರು ನಾಯಕಿಯರ ಜೊತೆ ಮಾತುಕತೆ ನಡೆಯುತ್ತಿದೆ. ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ಇತರೆಡೆ ಸುಮಾರು 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. “ಮಫ್ತಿ’ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದ ನವೀನ್‌ಕುಮಾರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಚರಣ್‌ರಾಜ್‌ ಸಂಗೀತವಿದೆ. ಜನವರಿ 27 ರಿಂದ ಚಿತ್ರೀಕರಣ ಶುರುವಾಗಲಿದೆ ಎಂದು ವಿವರಿಸುತ್ತಾರೆ ವಿಖ್ಯಾತ್‌.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.