“ಶಿಕಾರಿ’ಗೆ ಹೊರಟ ಪ್ರಮೋದ್‌ ಶೆಟ್ಟಿ

ವಿರಕ್ತ ಕಾದಂಬರಿಕಾರನ ಏಳು-ಬೀಳಿನ ಕಥೆ

Team Udayavani, Nov 25, 2019, 6:02 AM IST

Ondu-Shikariya-Kathe

“ಕಿರಿಕ್‌ ಪಾರ್ಟಿ’, “ಸರ್ಕಾರಿ ಹಿ. ಪ್ರಾ. ಶಾಲೆ ಕಾಸರಗೋಡು’, “ಬೆಲ್‌ಬಾಟಂ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ನಟ ಪ್ರಮೋದ್‌ ಶೆಟ್ಟಿ ಮೊದಲ ಬಾರಿಗೆ ಮುಖ್ಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ಸಿದ್ಧವಾಗುತ್ತಿದ್ದಾರೆ. ಅಂದಹಾಗೆ, ಪ್ರಮೋದ್‌ ಶೆಟ್ಟಿ “ಒಂದು ಶಿಕಾರಿಯ ಕಥೆ’ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಐವತ್ತರ ಅಸುಪಾಸಿನ ಪ್ರಸಿದ್ಧ ಕಾದಂಬರಿಕಾರನ ಪಾತ್ರಕ್ಕೆ ಪ್ರಮೋದ್‌ ಶೆಟ್ಟಿ ಬಣ್ಣ ಹಚ್ಚಿದ್ದಾರೆ.

ಪತ್ನಿಯನ್ನು ತೊರೆದು ಏಕಾಂಗಿಯಾಗಿ ವಾಸಿಸುತ್ತಿರುವ ಕರಾವಳಿ ಭಾಗದ ವಿರಕ್ತ ಕಾದಂಬರಿಕಾರನ ಬದುಕಿನಲ್ಲಿ ಎದುರಾಗುವ ಕೆಲ ಅನಿರೀಕ್ಷಿತ ತಿರುವುಗಳು, ಅವನಲ್ಲಿ ಏನೇನು ಬದಲಾವಣೆಗೆ ಕಾರಣವಾಗುತ್ತವೆ. ಲೇಖನಿ(ಪೆನ್‌)ಯ ಸ್ನೇಹ ಮತ್ತು ಕೋವಿ(ಗನ್‌)ಯ ಸಹವಾಸದಿಂದ ಏನೆಲ್ಲ ನಡೆಯತ್ತದೆ ಅನ್ನೋದೆ “ಒಂದು ಶಿಕಾರಿಯ ಕಥೆ’ ಚಿತ್ರದ ಒಂದೆಳೆ. ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ “ಒಂದು ಶಿಕಾರಿಯ ಕಥೆ’ ಚಿತ್ರಕ್ಕೆ ಕುಂದಾಪುರ ಮೂಲದ ನವ ಪ್ರತಿಭೆ ಸಚಿನ್‌ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಪ್ರಮೋದ್‌ ಶೆಟ್ಟಿ ಅವರೊಂದಿಗೆ ಪ್ರಸಾದ್‌ ಚೆರ್ಕಾಡಿ, ಸಿರಿ ಪ್ರಹ್ಲಾದ್‌, ಅಭಿಮನ್ಯು ಪ್ರಜ್ವಲ್‌, ಎಂ.ಕೆ ಮಠ, ಶ್ರೀಪ್ರಿಯಾ ಮೊದಲಾದವರು ಇತರೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. “ಶೆಟ್ಟಿಸ್‌ ಫಿಲ್ಮ್ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ರಾಜೀವ್‌ ಶೆಟ್ಟಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್‌ ಗೌಡ ಛಾಯಾಗ್ರಹಣ, ಬಿ.ಎಸ್‌ ಕೆಂಪರಾಜು ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರದ ಹಾಡುಗಳಿಗೆ ಶಾನ್‌ ಗೊನ್ಸಲ್ವೇಸ್‌, ಸನತ್‌ ಬಲ್ಕೂರ್‌ ಸಂಗೀತ ಸಂಯೋಜಿಸಿದ್ದಾರೆ.

ಸುಮಾರು ಎರಡು ವರ್ಷಗಳ ಪರಿಶ್ರಮದ ಬಳಿಕ “ಒಂದು ಶಿಕಾರಿಯ ಕಥೆ’ ಚಿತ್ರ ಅಂದುಕೊಂಡಂತೆ ರೀತಿಯಲ್ಲಿ ಮೂಡಿಬಂದಿದ್ದು, ಯಕ್ಷಗಾನ, ಅಡಿಕೆ ವ್ಯಾಪಾರ, ಭೋರ್ಗರೆಯುವ ಕಡಲು, ದಟ್ಟ ಕಾನನ, ತುಂಬಿ ಹರಿಯುವ ನದಿಗಳು ಈ ಎಲ್ಲಾ ಕರಾವಳಿ ಮತ್ತು ಮಲೆನಾಡು ಅಸ್ಮಿತೆ ಬಿಂಬಿಸುವ ಅಂಶಗಳು ಚಿತ್ರದಲ್ಲಿ ಪಾತ್ರಗಳೇ ಆಗಿ ಬರುತ್ತವೆ. ನೋಡುಗರಿಗೆ ಚಿತ್ರ ಹೊಸ ಅನುಭವ ನೀಡಲಿದೆ.

ಚಿತ್ರದ ಬಹುತೇಕ ಚಿತ್ರೀಕರಣವನ್ನು ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ ಎನ್ನುತ್ತದೆ ಚಿತ್ರತಂಡ. ಈಗಾಗಲೇ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಸದ್ದಿಲ್ಲದೆ ಪೂರ್ಣಗೊಳಿಸಿರುವ ಚಿತ್ರತಂಡ, ಸೆನ್ಸಾರ್‌ನಿಂದಲೂ ಗ್ರೀನ್‌ ಸಿಗ್ನಲ್‌ ಪಡೆದುಕೊಂಡಿದ್ದು, ಶೀಘ್ರದಲ್ಲಿಯೇ ಹೊಸಬರ ತಂಡ “ಒಂದು ಶಿಕಾರಿಯ ಕಥೆ’ಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಳ್ಳುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.