ಅಭಿಷೇಕ್‌ ಚಿತ್ರಕ್ಕೆ ಪ್ರಶಾಂತ್‌ ರಾಜ್‌ ನಿರ್ದೇಶನ?

ತಯಾರಿ ಜೋರು

Team Udayavani, Sep 16, 2019, 3:03 AM IST

Abhishek

ಅಭಿಷೇಕ್‌ ಅಂಬರೀಶ್‌ “ಅಮರ್‌’ ಚಿತ್ರದ ಬಳಿಕ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗಲೂ ಅದು ಪ್ರಶ್ನೆಯಾಗಿಯೇ ಉಳಿದಿದೆ. ಆದರೆ, ಅಭಿಷೇಕ್‌ ಅಂಬರೀಶ್‌, “ಅಮರ್‌’ ಚಿತ್ರದ ಬಳಿಕ ಸಾಕಷ್ಟು ಕಥೆ ಕೇಳಿರುವುದುಂಟು. ಆ ಪೈಕಿ ಎರಡು ಕಥೆಗಳನ್ನು ಒಪ್ಪಿದ್ದು, ಆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂಬ ಸುದ್ದಿಯೂ ಜೋರಾಗಿತ್ತು. ಹಾಗಾದರೆ, ಆ ಎರಡು ಕಥೆಗಳು ಯಾರು ಹೇಳಿದ್ದು? ಅಭಿಷೇಕ್‌ ಅಂಬರೀಶ್‌ ಅವರ ಎರಡನೇ ಚಿತ್ರವನ್ನು ನಿರ್ದೇಶನ ಮಾಡುವ ನಿರ್ದೇಶಕ ಯಾರು? ಈ ಪ್ರಶ್ನೆ ಸದ್ಯಕ್ಕೆ ಗಿರಕಿ ಹೊಡೆಯುತ್ತಿದೆ.

ಈಗ ಕೇಳಿಬರುತ್ತಿರುವ ಸುದ್ದಿಯೆಂದರೆ, ಅಭಿಷೇಕ್‌ ಅಂಬರೀಶ್‌ ಅವರಿಗೆ “ಜೂಮ್‌’ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ರಾಜ್‌ ಅವರು ಕಥೆಯೊಂದನ್ನು ಹೇಳಿದ್ದು, ಆ ಕಥೆಯ ಒನ್‌ಲೈನ್‌ ಇಷ್ಟವಾಗಿದ್ದು, ಆ ಐಡಿಯಾ ಮೇಲೆ ವರ್ಕ್‌ ನಡೆಸಿ ಎಂಬ ಗ್ರೀನ್‌ಸಿಗ್ನಲ್‌ ಕೂಡ ಅಭಿಷೇಕ್‌ ಅವರಿಂದ ಸಿಕ್ಕಿದೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಇಷ್ಟರಲ್ಲೇ ಅಭಿಷೇಕ್‌ ಅಂಬರೀಶ್‌ ಅವರ ಎರಡನೇ ಚಿತ್ರಕ್ಕೆ ಪ್ರಶಾಂತ್‌ ರಾಜ್‌ ನಿರ್ದೇಶಕರಾಗಲಿದ್ದಾರೆ.

ಈ ಕುರಿತು ಸ್ವತಃ “ಉದಯವಾಣಿ’ಗೆ ಸ್ಪಷ್ಟಪಡಿಸಿದ ನಿರ್ದೇಶಕ ಪ್ರಶಾಂತ್‌ರಾಜ್‌, “ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ. ಅಧಿಕೃತವಾಗಿ ಅನೌನ್ಸ್‌ ಮಾಡುವುದಷ್ಟೇ ಬಾಕಿ. ಒನ್‌ಲೈನ್‌ ಕೇಳಿದ ಅವರು, ಐಡಿಯಾ ಚೆನ್ನಾಗಿದೆ. ಇದನ್ನು ಮುಂದುವರೆಸಿ ಎಂದಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‌ ಸಿನಿಮಾ ಆಗಿದ್ದು, ಮಾಸ್‌ ಎಲಿಮೆಂಟ್ಸ್‌ ಇರಲಿದೆ. ಕಲರ್‌ಫ‌ುಲ್‌ ಸಿನಿಮಾ ಕೊಡುವ ಉದ್ದೇಶದಿಂದ ಹೊಸಬಗೆಯ ಕಥೆ ಮಾಡಿದ್ದೇನೆ. ತುಂಬಾ ಅದ್ಧೂರಿಯಾಗಿ, ಹೊಸತನದೊಂದಿಗೆ ಚಿತ್ರ ಮಾಡುವ ಯೋಚನೆ ಇದೆ.

ಇದು ನನ್ನ ಏಳನೇ ಚಿತ್ರ ಆಗಲಿದ್ದು, ಇಷ್ಟರಲ್ಲೇ ಇನ್ನಷ್ಟು ಮಾಹಿತಿ ನೀಡುತ್ತೇನೆ’ ಎಂಬುದು ಪ್ರಶಾಂತ್‌ರಾಜ್‌ ಅವರ ಮಾತು. ಅಂದಹಾಗೆ, ಅಭಿಷೇಕ್‌ ಅಂಬರೀಶ್‌ ಅವರು ಹೊಸ ಗೆಟಪ್‌ನಲಿದ್ದ ಫೋಟೋವೊಂದು ಇತ್ತೀಚೆಗೆ ಹರಿದಾಡಿತ್ತು. ಸಖತ್‌ ಸ್ಲಿಮ್‌ ಆಗಿ, ಗಡ್ಡ ಹಾಗು ಮೀಸೆಯೊಂದಿಗಿನ ಆ ಹೊಸ ಗೆಟಪ್‌ ಎರಡನೇ ಚಿತ್ರದ್ದು ಎಂದೇ ಹೇಳಲಾಗುತ್ತಿತ್ತು. ಆದರೆ, ಅದು ನಿಜವಾಗಿಯೂ ತಮ್ಮ ಎರಡನೇ ಚಿತ್ರಕ್ಕೆ ಮಾಡಿಕೊಂಡ ಗೆಟಪ್‌ ಇರಬಹುದಾ ಎಂಬ ಪ್ರಶ್ನೆ ಕೂಡ ಹಾಗೆಯೇ ಇದೆ. ಅದೇನೆ ಇರಲಿ, ಪ್ರಶಾಂತ್‌ ರಾಜ್‌ ಅವರ ಹಿಂದಿನ ಚಿತ್ರಗಳಲ್ಲಿ ಪಕ್ಕಾ ಮನರಂಜನೆ ಇತ್ತು.

ಆ ಸಿನಿಮಾಗಳಲ್ಲಿ ಯಶಸ್ಸು ಕಂಡಿದ್ದರು ಕೂಡ. ಈಗ ಅಭಿಷೇಕ್‌ ಅವರಿಗೆ ಹೇಳಿದ ಕಥೆಯಲ್ಲೂ ಮನರಂಜನೆ ಹೇರಳವಾಗಿದೆಯಂತೆ. ಆ ಸಿನಿಮಾ ಹೇಗಿರುತ್ತೆ ಎಂಬುದಕ್ಕೆ ಇನ್ನೂ ಸಾಕಷ್ಟು ಸಮಯ ಬೇಕು. ಇನ್ನು, ಅಂಬರೀಶ್‌ ಅವರ “ಅಂಬಿ ನಿಂಗ್‌ ವಯಸ್ಸಾಯೊ¤à’ ಚಿತ್ರ ನಿರ್ದೇಶಿಸಿದ್ದ ಗುರುದತ್‌ ಗಾಣಿಗ ಅವರು ಕೂಡ ಅಭಿಷೇಕ್‌ ಜೊತೆ ಒಂದು ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅದಕ್ಕಿನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಆದರೆ, ಆ ಬಗ್ಗೆಯೂ ಈಗಾಗಲೇ ಮಾತುಕತೆ ನಡೆದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.