ಬಂಧನವನ್ನು ತಪ್ಪಿಸಲು ಅನುಶ್ರೀ ಮಾಡಲಿದ್ದಾರೆ ಹೊಸ ನಾಟಕ! ಪ್ರಶಾಂತ್ ಸಂಬರಗಿ ಹೇಳಿದ್ದೇನು?
Team Udayavani, Oct 3, 2020, 1:12 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಬಗ್ಗೆ ಸದಾ ಒಂದೊಂದು ಸುಳಿವು ನೀಡುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈಗ ನಿರೂಪಕಿ ಅನುಶ್ರೀಯ ಮುಂದಿನ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಶುಕ್ರವಾರ ಅನುಶ್ರೀಯ ಶುಗರ್ ಡ್ಯಾಡಿಯ ಬಗ್ಗೆ ಹೇಳಿಕೊಂಡಿದ್ದ ಸಂಬರಗಿ ಈಗ ನಿರೂಪಕಿಯ ಬಂಧನದ ನಾಟಕದ ಬಗ್ಗೆ ಹೇಳಿಕೊಂಡಿದ್ದಾರೆ. ಅನುಶ್ರೀ ಬಂಧನವನ್ನು ಇನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದ ಅವರು ಇಂದು, “ಕೋವಿಡ್ ಇದೆ, ಹತ್ತಿರ ಬರಬೇಡಿ.. ಇದು ಇವತ್ತು ಪ್ರದರ್ಶನ ಆಗಲಿರೋ ಹೊಸಾ ಡ್ರಾಮ. ಪೊಲೀಸ್ ಅರೆಸ್ಟ್ ಮಾಡ್ತಾರೆ ಅಂತ ಗೊತ್ತಾದ ತಕ್ಷಣಕ್ಕೆ ಶುರು ಆಗುತ್ತೆ ಕಥೆ. ನಾಟಕದ ರಾಣಿಯ ಹೊಸ ಅವತಾರ ಇಂದು”. ಎಂದಿದ್ದಾರೆ.
ಇದನ್ನೂ ಓದಿ:ನಟ ಸುಶಾಂತ್ ಪೋಷಕರ ಆರೋಪದಲ್ಲಿ ಹುರುಳಿಲ್ಲ: ಏಮ್ಸ್ ನ ಅಂತಿಮ ವರದಿಯಲ್ಲೇನಿದೆ?
ನಿರೂಪಕಿ ಅನುಶ್ರೀ ಶುಕ್ರವಾರ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋವೊಂದನ್ನು ಹಾಕಿ, ತಾನು ಸಿಸಿಬಿ ಕಚೇರಿಗೆ ಹೋಗಿ ಬಂದಿದ್ದಕ್ಕೆ ನಾನು ಅಪರಾಧಿ ಅಥವಾ ಆರೋಪಿಯಲ್ಲ. ಈ ಪ್ರಕರಣದಲ್ಲಿ ನನ್ನನ್ನು ಬಿಂಬಿಸಿದ ರೀತಿಯಿಂದ ಮನಸ್ಸಿಗೆ ಬೇಸರವಾಗಿದೆ ಎಂದು ಕಣ್ಣೀರು ಹಾಕಿದ್ದರು.
ಇದಾದ ನಂತರ ಟ್ವೀಟ್ ಮಾಡಿದ್ದ ಸಂಬರಗಿ, ಅನುಶ್ರೀ ಬಂಧನವಾಗದಂತೆ ಇದುವರೆಗೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ, ಅದು ಇನ್ನು ಸಾಧ್ಯವಿಲ್ಲ. ಇನ್ನಷ್ಟು ರಹಸ್ಯಗಳು ಹೊರಬೀಳಲಿದೆ ಎಂದಿದ್ದರು.
ಯಾರಿದು ಶುಗರ್ ಡ್ಯಾಡಿ?
ಹಣ, ಅಮೂಲ್ಯ ವಸ್ತುಗಳು, ಉಡುಗೊರೆಗಳನ್ನು ನೀಡಿ ಅದಕ್ಕೆ ಪ್ರತಿಯಾಗಿ ಯುವತಿಯರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಹಿರಿಯ ವಯಸ್ಸಿನ ವ್ಯಕ್ತಿಯನ್ನು ಶುಗರ್ ಡ್ಯಾಡಿ ಎನ್ನುತ್ತಾರೆ ಎಂದು ಸ್ವತಃ ಸಂಬರಗಿ ವಿವರಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ