ಪ್ರಥಮ ಕಾಣಿಕೆ 99 ಲಕ್ಷಕ್ಕೊಬ್ಬ!

ಕ್ರಿಕೆಟ್‌ ಬೆಟ್ಟಿಂಗ್‌ ಸುತ್ತ ಚಿತ್ರ

Team Udayavani, Feb 27, 2020, 7:01 AM IST

99-Lakshakkobba

ನೂರಕ್ಕೊಬ್ಬ, ಸಾವಿರಕ್ಕೊಬ್ಬ, ಲಕ್ಷಕ್ಕೊಬ್ಬ, ಕೋಟಿಗೊಬ್ಬ…. ಸಾಮಾನ್ಯವಾಗಿ ಈ ಪದಬಳಕೆ ಗೊತ್ತಿರುತ್ತೆ. ಇನ್ನು “ಕೋಟಿಗೊಬ್ಬ’, “ಕೋಟಿಗೊಬ್ಬ-2′, ಕೋಟಿಗೊಬ್ಬ 3′ ಅಂಥ ಚಿತ್ರಗಳೂ ಇವೆ. ಆದರೆ, “99 ಲಕ್ಷಕ್ಕೊಬ್ಬ’ ಎಂಬ ಸಿನಿಮಾ ಹೆಸರನ್ನೂ ಇಡಲಾಗಿದೆ ಅನ್ನೋದು ಈ ಹೊತ್ತಿನ ಸುದ್ದಿ. ಹೌದು, ಪ್ರಥಮ್‌ ಈ ಚಿತ್ರದ ಹೀರೋ. ಪ್ರಥಮ್‌ ಸಿನಿಮಾ ಅಂದಮೇಲೆ, ಅಲ್ಲಿ ಒಂದಷ್ಟು ಗಿಮಿಕ್‌ ಇದ್ದೇ ಇರುತ್ತೆ. ಸಿನಿಮಾ ಸದ್ದು ಮಾಡದಿದ್ದರೂ, ಶೀರ್ಷಿಕೆ ಸದ್ದಿಗೇನೂ ಕೊರತೆ ಇಲ್ಲ. ಇತ್ತೀಚೆಗೆ ಪ್ರಥಮ್‌ ತಮ್ಮ ಹುಟ್ಟಹಬ್ಬ ಆಚರಿಸಿಕೊಂಡರು.

ಅಂದು “99 ಲಕ್ಷಕ್ಕೊಬ್ಬ’ ಚಿತ್ರದ ಪೋಸ್ಟರ್‌ ಅನ್ನು ಅಭಿಷೇಕ್‌ ಅಂಬರೀಷ್‌ ಬಿಡುಗಡೆ ಮಾಡಿ ಶುಭ ಹಾರೈಸಿದರು. ತಮ್ಮ ಚಿತ್ರದ ಶೀರ್ಷಿಕೆ ಕುರಿತು ಮಾತನಾಡುವ ಪ್ರಥಮ್‌, “ಇದಕ್ಕೂ ಮುನ್ನ “ಕೋಟಿಗೊಬ್ಬ’ ಟೈಟಲ್‌ ಇಡಲು ಯೋಚಿಸಲಾಗಿತ್ತು. ಆದರೆ ಡಾ. ವಿಷ್ಣುವರ್ಧನ್‌, ಸುದೀಪ್‌ ಅವರಿಗೆ ಮಾತ್ರ ಈ ಟೈಟಲ್‌ ಸರಿಹೊಂದುತ್ತೆ. ಆದ್ದರಿಂದ ಅವರಿಗಿಂತ ಒಂದು ಲಕ್ಷ ಕಡಿಮೆ ಇರಬೇಕು ಅಂದುಕೊಂಡು, ಈ ಶೀರ್ಷಿಕೆ ಇಡಲಾಗಿದೆ.

ಇನ್ನು, ಇದೊಂದು ಕ್ರಿಕೆಟ್‌ ಬೆಟ್ಟಿಂಗ್‌ ಕುರಿತ ಕಥೆ ಹೊಂದಿದೆ. ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಜಾಮಿಟ್ರಿ ಬಾಕ್ಸ್‌ ಇದ್ದರೆ ಅದನ್ನು ಎಲ್ಲರಿಗೂ ತೋರಿಸಿ ಖುಷಿ ಪಡುತ್ತಿದ್ದರು. ಆದರೆ ಈಗ ಕಾಲ ಬದಲಾದಂತೆ, ಇಂದು ಹುಡುಗರು ಕ್ರಿಕೆಟ್‌ ಮ್ಯಾಚ್‌ ಸಮಯದಲ್ಲಿ ನನ್ನದೊಂದು ಸಿಕ್ಸರ್‌ ಅಂಥ ಬೆಟ್ಟಿಂಗ್‌ ಕಟ್ಟುತ್ತಾರೆ. ಇದರಿಂದ ಏನೇನು ಅನಾಹುತಗಳು ಆಗುತ್ತದೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಮಹಾಭಾರತದ ಗುಣ ಲಕ್ಷಣಗಳನ್ನು ಇಟ್ಟುಕೊಂಡು, ಯಾರೂ ಹೇಳದ ಕಥೆಯನ್ನು ಇಲ್ಲಿ ಹೇಳುತ್ತಿದ್ದೇವೆ’ ಎಂಬುದು ಅವರ ಮಾತು.

“ಸ್ವಾರಸ್ಯ ಸಿನಿ ಕ್ರಿಯೇಶನ್ಸ್‌’ ಬ್ಯಾನರ್‌ನಲ್ಲಿ ನೀಲೇಶ್‌ “99 ಲಕ್ಷಕ್ಕೊಬ್ಬ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರದ್ಯೋತ್ತನ್‌ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಶೋಭರಾಜ್‌, ಉಮೇಶ್‌, ನಿಹಾರಿಕಾ ಶಣೈ ಮೊದಲಾದವರು ಅಭಿನಯಿಸುತ್ತಿದ್ದಾರೆ. ಚಿತ್ರದ ನಾಯಕಿ ಆಯ್ಕೆ ನಡೆದಿಲ್ಲ. ಬಾಲಿವುಡ್‌ ನಟಿಯೊಬ್ಬರನ್ನು ಕರೆತರುವ ಯೋಚನೆ ಚಿತ್ರತಂಡದ್ದು. ಏಪ್ರಿಲ್‌ ಮೊದಲ ವಾರ ಚಿತ್ರಕ್ಕೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.