ಪ್ರಥಮ ಆಶಾಕಿರಣ


Team Udayavani, Jul 9, 2018, 11:22 AM IST

prathama.jpg

ಹಿರಿಯ ನಟಿ ವಿನಯಾಪ್ರಸಾದ್‌ ಅವರ ಪುತ್ರಿ ಪ್ರಥಮ ಖುಷಿಯಲ್ಲಿದ್ದಾರೆ. ಅವರ ಖುಷಿಗೆ ಕಾರಣ, “ಎಂಎಂಸಿಎಚ್‌’. ಹೌದು, ಈ ಚಿತ್ರದಲ್ಲಿ ನಾಲ್ವರು ನಾಯಕಿಯರ ಪೈಕಿ ಪ್ರಥಮ ಕೂಡ ಒಬ್ಬರು. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಪ್ರಥಮ, ಈ ಮೂಲಕ ಇನ್ನಷ್ಟು ಗುರುತಿಸಿಕೊಳ್ಳುವ ನಂಬಿಕೆಯಲ್ಲಿದ್ದಾರೆ.

ಅದಕ್ಕೆ ಕಾರಣ, ಚಿತ್ರದ ಪಾತ್ರ. ಹೌದು, ಪ್ರಥಮ ಅವರಿಗಿಲ್ಲಿ ರಗಡ್‌ ಪಾತ್ರ ಸಿಕ್ಕಿದೆ. ಅದೊಂಥರಾ ರಫ್ ಅಂಡ್‌ ಟಫ್ ಹುಡುಗಿಯ ಪಾತ್ರ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಮಾಲಾಶ್ರೀ ರೀತಿ ಫೈಟ್‌ ಮಾಡುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಅಂಥದ್ದೊಂದು ಪಾತ್ರ ಅಂದಮೇಲೆ, ಪ್ರಥಮ ಅವರು ಫೈಟ್‌ ಮಾಡದೇ ಇರುತ್ತಾರಾ?
 

ಕಾಲೇಜ್‌ ಹುಡುಗಿಯರು ಮತ್ತು ತನ್ನ ಗೆಳತಿಯರನ್ನು ಕೆಣಕಿದ ಪೋಲಿ ಹುಡುಗರನ್ನು ಹಿಗ್ಗಾಮುಗ್ಗಾ ಥಳಿಸೋ ಹುಡುಗಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಹಾಗಂತ, ಸಿನಿಮಾದುದ್ದಕ್ಕೂ ರಫ್ ಅಂಡ್‌ ಟಫ್ ಹುಡುಗಿಯಾಗಿಯೇ ಇರುವುದಿಲ್ಲ. ಎಮೋಷನ್‌ ಅಂದಾಗ, ಅವರ ಹೆಣ್‌ ಮನಸ್ಸು ಕೂಡ ಕರಗಲಿದೆ. ರೆಬೆಲ್‌ ಆಗಿದ್ದರೂ, ಸೆಂಟಿಮೆಂಟ್‌ ವಿಷಯ ಬಂದಾಗ ಕೂಲ್‌ ಆಗುವಂತಹ ಪಾತ್ರ ಅವರ ಪಾಲಿಗೆ ಸಿಕ್ಕಿದೆ.

ಈ ಕುರಿತು ಹೇಳಿಕೊಳ್ಳುವ ಪ್ರಥಮ, “ಅಮ್ಮನ ನಿರ್ದೇಶನದಲ್ಲಿ ನಟಿಸಿದ್ದರಿಂದ ಇಲ್ಲಿ ನಟಿಸಲು ಹೆಚ್ಚೇನೂ ತೊಂದರೆ ಆಗಲಿಲ್ಲ. ನನ್ನ ಜೊತೆ ಮೇಘನಾರಾಜ್‌, ಸಂಯುಕ್ತಾ ಹೊರನಾಡು, ನಕ್ಷತ್ರ ಮೂವರು ನಾಯಕಿಯರು ಇದ್ದಾರೆ. ರಾಗಿಣಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದು ಹೊಸ ಅನುಭವ ಕಟ್ಟಿಕೊಟ್ಟಿರುವುದು ನಿಜ. ಆರಂಭದಲ್ಲಿ ಭಯ ಇತ್ತು. ಹೇಗಪ್ಪಾ ಮ್ಯಾನೆಜ್‌ ಮಾಡೋದು ಅಂತ.

ನಿರ್ದೇಶಕ ಮುಸ್ಸಂಜೆ ಮಹೇಶ್‌ ಕಥೆ ಹೇಗೆ ಹೇಳಿದ್ದರೋ, ಹಾಗೇ ಚಿತ್ರ ಮಾಡಿದ್ದಾರೆ. ಎಲ್ಲವನ್ನೂ ಸಮಾಧಾನದಿಂದ ಹೇಳಿಕೊಟ್ಟಿದ್ದರಿಂದ ಎಲ್ಲೂ ಸಮಸ್ಯೆ ಎನಿಸಲಿಲ್ಲ. ಇಲ್ಲಿ ನಾಲ್ವರು ನಾಯಕಿಯರಿದ್ದರೂ, ಯಾರೂ ಹೆಚ್ಚಲ್ಲ, ಕಮ್ಮಿಯೂ ಇಲ್ಲ. ಎಲ್ಲರಿಗೂ ಸಮಾನ ಅವಕಾಶವಿದೆ. ಇಷ್ಟಪಟ್ಟು ಮಾಡಿದ ಚಿತ್ರದಲ್ಲಿ ಕಷ್ಟವೂ ಆಗಿದೆ. ಇಲ್ಲಿ ಫೈಟ್ಸ್‌ ಇದೆ. ಹುಡುಗರನ್ನು ಅಟ್ಟಾಡಿಸಿಕೊಂಡು ಹೊಡೆಯುವ ದೃಶ್ಯಗಳಿವೆ.

ನಾನು ಡ್ಯಾನ್ಸರ್‌ ಆಗಿರುವುದರಿಂದ ಪಾತ್ರಕ್ಕೂ ಡ್ಯಾನ್ಸ್‌ ನಂಟು ಇದೆ. ಫೈಟ್ಸ್‌ ಮಾಡೋಕೆ ಅಷ್ಟೇನು ಕಷ್ಟ ಆಗಲಿಲ್ಲ. ಯಾಕೆಂದರೆ, ನಾನು, ಕೇರಳದ ಕಲರಿಪಯಟ್ಟು, ಮಣಿಪುರದ ಥಾಂಗ್‌ ಮತ್ತು ಒಡಿಸ್ಸಾದ ಛಾವ್‌ ಕಲೆಗಳ ತರಬೇತಿ ಕಲಿತಿದ್ದೇನೆ. ಮಾರ್ಷಲ್‌ ಆರ್ಟ್ಸ್ ಪಕ್ಕಾ ಆಗಿರುವುದರಿಂದ ಸ್ಟಂಟ್ಸ್‌ ಸುಲಭವಾಗಿದೆ’ ಎಂದು ವಿವರ ಕೊಡುತ್ತಾರೆ ಪ್ರಥಮ.

ಸಾಮಾನ್ಯವಾಗಿ ನಾಯಕಿಯರ ಪ್ರಧಾನ ಚಿತ್ರ ಅಂದಾಗ, ಆ ನಾಯಕಿಯರಿಗೆ ಜವಾಬ್ದಾರಿ ಹೆಚ್ಚಾಗಿರುತ್ತೆ. ಇಲ್ಲಿ ನಾವೇ ಹೀರೋಗಳು, ನಾವೇ ವಿಲನ್‌ಗಳು ಹಾಗಾಗಿ ಸಿನಿಮಾ ಕಥೆಗೆ, ಪಾತ್ರಕ್ಕೆ ಮತ್ತು ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಕೆಲಸ ಮಾಡಿದ್ದೇವೆ. ಒಂದು ಚಿತ್ರದಲ್ಲಿ ಇಬ್ಬರು, ಮೂವರು ನಾಯಕಿಯರಿದ್ದಾಗ, ಈಗೋ, ಜಗಳ ಅಂತಾರೆ.

ಆದರೆ, “ಎಂಎಂಸಿಎಚ್‌’ ಚಿತ್ರದಲ್ಲಿ ಅಂತಹ ಯಾವುದೇ ಸಮಸ್ಯೆ ಎದುರಾಗಲಿಲ್ಲ. ಎಲ್ಲರೂ ಒಟ್ಟಿಗೆ ಕುಳಿತು, ದೃಶ್ಯಗಳ ಬಗ್ಗೆ ಚರ್ಚೆ ಮಾಡುವ ಮೂಲಕ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದೆವು. ಹಾಗಾಗಿ, ನಿರ್ದೇಶಕರು ಅಂದುಕೊಂಡಂತೆಯೇ ಚಿತ್ರ ಮೂಡಿಬಂದಿದೆ. ಇಷ್ಟರಲ್ಲೇ ಚಿತ್ರ ಬಿಡುಗಡೆಯಾಗಲಿದೆ. ನನಗೂ ಹೆಚ್ಚು ಕುತೂಹಲವಿದೆ ಎಂದಷ್ಟೇ ಹೇಳುತ್ತಾರೆ ಪ್ರಥಮ.

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್‌ ಕೊಟ್ಟ ಹೊಂಬಾಳೆ

ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್‌ ಕೊಟ್ಟ ಹೊಂಬಾಳೆ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.