ಕೋವಿಡ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ; ಪುತ್ರ ವಿನೋದ್ ರಾಜ್ ಕಾರ್ಯಕ್ಕೆ ತಾಯಿ ಮೆಚ್ಚುಗೆ
ತಮ್ಮ ಗ್ರಾಮದ ಸುರಕ್ಷತೆಗೆ ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿ ಸಹ ಇದಕ್ಕೆ ಕೈ ಜೋಡಿಸಿದ್ದಾರೆ.
Team Udayavani, Apr 1, 2020, 4:27 PM IST
Actor Vinodraj
ಬೆಂಗಳೂರು: ಕೋವಿಡ್ 19 ವೈರಸ್ ಹರಡದಂತೆ ಎಚ್ಚರ ವಹಿಸುವುದರ ಭಾಗವಾಗಿ ನಟ ವಿನೋದ್ ರಾಜ್ ತಮ್ಮ ಹಳ್ಳಿಯನ್ನು ಕಾಪಾಡಲು ಮುಂದಾಗಿದ್ದು, ಇಡೀ ಗ್ರಾಮದ ರಸ್ತೆ ಹಾಗೂ ಮನೆಯ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ಸ್ವಗ್ರಾಮದಲ್ಲಿ ನಟ ವಿನೋದ್ ರಾಜ್ ರಾಸಾಯನಿಕ ಸಿಂಪಡಣೆ ಮಾಡಿಸಿದ್ದು, ಈ ಮೂಲಕ ತಮ್ಮ ಗ್ರಾಮದ ಸುರಕ್ಷತೆಗೆ ಮುಂದಾಗಿದ್ದಾರೆ. ಹಿರಿಯ ನಟಿ ಡಾ.ಲೀಲಾವತಿ ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ನಟ ವಿನೋದ್ ರಾಜ್ ತಮ್ಮ ತೋಟದಲ್ಲಿ ಬಳಸುವ ಮಿನಿ ಟ್ರ್ಯಾಕ್ಟರ್ ಹಾಗೂ ಪಂಪ್ ಸಹಾಯದಿಂದ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದಾರೆ. ಸ್ವತಃ ಕ್ರಿಮಿನಾಶಕ ಗನ್ ಹಿಡಿದು ಗ್ರಾಮಕ್ಕೆ ವೈರಸ್ ಕಾಲಿಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಔಷಧಿಯನ್ನು ಸಿಂಪಡಣೆ ಮಾಡಿಸಿದ್ದಾರೆ.
ಗ್ರಾಮದ ಬೀದಿ, ಮನೆಗಳ ಗೋಡೆಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ವಿನೋದ್ ರಾಜ್ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಡೀ ಗ್ರಾಮವೇ ನಟ ವಿನೋದ್ ರಾಜ್ ಮತ್ತು ಲೀಲಾವತಿ ಅವರ ಬೆಂಬಲಕ್ಕೆ ನಿಂತು ಗ್ರಾಮದ ಸ್ವಚ್ಛತೆಗೆ ಮುಂದಾಗಿದೆ.
ಈ ವೇಳೆ ಮಾತನಾಡಿದ ಹಿರಿಯ ನಟಿ ಲೀಲಾವತಿ, ಎಲ್ಲರೂ ಚೆನ್ನಾಗಿ ಬಾಳಬೇಕು ಅಂತ ಇಲ್ಲಿ ಬಂದವರು. ಆದರೆ ದೇವರು ಕಷ್ಟ ಕೊಟ್ಟಿದ್ದಾನೆ. ಕೋವಿಡ್ ವೈರಸ್ ನಮ್ಮ ಕರ್ಮ ಆಗಿಬಿಟ್ಟಿದೆ. ಸರ್ಕಾರದ ಕಾನೂನು ಮೀರಬೇಡಿ, ಮನೆಯಲ್ಲೇ ಇದ್ದು ಸಹಕರಿಸಿ. ನಿಮ್ಮ ಮನೆ, ಜಾಗವನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ಪೊಲೀಸರು ಹೊಡೆದರು ಎಂದು ಹೇಳುವ ಬದಲು ಹೊಡೆಯದ ಹಾಗೆ ಇರಿ. ಮಾಸ್ಕ್ ಧರಿಸಿ ಶುಚಿತ್ವ ಕಾಪಾಡಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ