ಹೊರಬಂತು ‘ಪ್ರೀತ್ಸು’ ಹಾಡುಗಳು; ಇಳಯರಾಜ ಸಂಗೀತ ಸಂಯೋಜನೆ


Team Udayavani, Apr 11, 2022, 2:19 PM IST

ಹೊರಬಂತು ‘ಪ್ರೀತ್ಸು’ ಹಾಡುಗಳು; ಇಳಯರಾಜ ಸಂಗೀತ ಸಂಯೋಜನೆ

ನವ ಪ್ರತಿಭೆ ಸುಭಾಷ್‌ ಹಾಗೂ ನೇಹಾ ಜೋಡಿಯಾಗಿ ಅಭಿನಯಿಸುತ್ತಿರುವ ಔಟ್‌ ಆ್ಯಂಡ್‌ ಔಟ್‌ ರೊಮ್ಯಾಂಟಿಕ್‌ ಲವ್‌ಸ್ಟೋರಿ “ಪ್ರೀತ್ಸು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇದೀಗ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿತು.

ಕೆ.ಗಣೇಶನ್‌ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ “ಪ್ರೀತ್ಸು’ ಚಿತ್ರದ ಗೀತೆಗಳಿಗೆ ಸ್ವರ ಮಾಂತ್ರಿಕ ಇಳಯರಾಜ ಸಂಗೀತ ಸಂಯೋಜಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನಿರ್ಮಾಪಕ ಭಾ. ಮ ಹರೀಶ್‌, ಟೇಶಿ ವೆಂಕಟೇಶ್‌, ಸೆವೆನ್‌ ರಾಜ್‌, ರವಿ ವಿಠಲ್‌ ಮೊದಲಾದ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ “ಪ್ರೀತ್ಸು’ ಚಿತ್ರದ ಗೀತೆಗಳು ಹೊರಬಂದವು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಕೆ. ಗಣೇಶನ್‌, “ಕಳೆದ 30 ವರ್ಷಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ಇಲ್ಲಿಯವರೆಗೆ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿಯಲ್ಲೂ ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿದ್ದೇನೆ. ಈಗ ರೊಮ್ಯಾಂಟಿಕ್‌, ಲವ್‌ ಕಂ ಥ್ರಿಲ್ಲರ್‌ ಕಥಾಹಂದರದ “ಪ್ರೀತ್ಸು’ ಸಿನಿಮಾ ನಿರ್ದೇಶಿಸಿದ್ದೇನೆ. ಇಂದಿನ ಜನರೇಶನ್‌ ಆಡಿಯನ್ಸ್‌ಗೆ ಇಷ್ಟವಾಗುವ ಸಬ್ಜೆಕ್ಟ್ ಸಿನಿಮಾದಲ್ಲಿದೆ. ಕಂಪ್ಲೀಟ್‌ ಮನರಂಜನೆ ನೀಡುವಂಥ ಸಿನಿಮಾ ಮಾಡಿದ್ದೇವೆ’ ಎಂದರು.

ಇದನ್ನೂ ಓದಿ:ಅಧಿಕಾರಿಗಳಿಂದ ಪತ್ನಿಗೆ ಲೈಂಗಿಕ ಕಿರುಕುಳ : ನಟಿ ಆಯೇಷಾ ಪತಿಯ ಆರೋಪ

“ಒಮ್ಮೆ ಮಲೇಷಿಯಾಗೆ ಬಂದಾಗ ನಿರ್ದೇಶಕ ಕೆ. ಗಣೇಶನ್‌ ಹೇಳಿದ ಕಥೆ ಇಷ್ಟವಾಗಿದ್ದರಿಂದ ಅವರೊಂದಿಗೆ ಸೇರಿ ಈ ಸಿನಿಮಾ ಮಾಡುತ್ತಿದ್ದೇವೆ. ಎಲ್ಲ ಥರದ ಮನರಂಜನಾತ್ಮಕ ಅಂಶಗಳಿರುವುದರಿಂದ, ಸಿನಿಮಾ ಎಲ್ಲರಿಗೂ ಇಷ್ಟವಾಗಲಿದೆ’ ಎನ್ನುವುದು “ಪ್ರೀತ್ಸು’ ಚಿತ್ರದ ಇನ್ನೊಬ್ಬ ನಿರ್ಮಾಪಕ ಗಾನ ವಿನೋದನ್‌ ಅವರ ಭರವಸೆಯ ಮಾತು. ನಾಯಕ ಸುಭಾಷ್‌, ನಾಯಕಿ ನೇಹಾ “ಪ್ರೀತ್ಸು’ ಚಿತ್ರದ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ಗಣೇಶನ್‌, ಮನೋಬಲ, ಸ್ವಾಮಿನಾಥ, ಮನೋಹರ್‌ ಮುಂತಾದವರು “ಪ್ರೀತ್ಸು’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದು, ಚಿತ್ರಕ್ಕೆ ಎ.ಸಿ ಮಹೇಂದ್ರನ್‌ ಛಾಯಾಗ್ರಹಣ, ಸಂಜೀವ ಸಂಕಲನ ಹಾಗೂ ಜಾನ್‌ ಪೀಟರ್‌ ಕಲಾ ನಿರ್ದೇಶನವಿದೆ.

ಸದ್ಯ ಆಡಿಯೋ ಬಿಡುಗಡೆ ಮೂಲಕ ಪ್ರಚಾರ ಕಾರ್ಯ ಶುರು ಮಾಡಿರುವ “ಪ್ರೀತ್ಸು’ ಚಿತ್ರತಂಡ ಮೇ ಅಂತ್ಯದ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.