ಪ್ರೇಮಂನ ಸಾಯಿ ಪಲ್ಲವಿ ಬಂದ್ರೂ ಬರಬಹುದು …


Team Udayavani, Aug 6, 2017, 10:25 AM IST

Sai-pallavi.jpg

ರವಿಚಂದ್ರನ್‌ ಅವರ ಎರಡನೇ ಮಗ ವಿಕ್ರಮ್‌ ಹೀರೋ ಆಗುತ್ತಿರೋದು, ಆ ಚಿತ್ರಕ್ಕೆ “ನವೆಂಬರ್‌ನಲ್ಲಿ ನಾನು ಅವಳು’ ಎಂದು ಟೈಟಲ್‌ ಇಟ್ಟಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರದ ಪೂರ್ವತಯಾರಿ ಜೋರಾಗಿ ನಡೆಯುತ್ತಿದೆ. ಮೊದಲ ಹಂತವಾಗಿ ಚಿತ್ರಕ್ಕೆ ನಾಯಕಿಯನ್ನು ಅಂತಿಮಗೊಳಿಸುವಲ್ಲಿ ಚಿತ್ರತಂಡ ಬಿಝಿಯಾಗಿದೆ. ಈ ಹಿಂದೆ ಚಿತ್ರಕ್ಕೆ ಕಮಲ್‌ ಹಾಸನ್‌ ಪುತ್ರಿ ಅಕ್ಷರಾ ಹಾಸನ್‌ ನಾಯಕಿಯಾಗುತ್ತಾರೆಂಬ ಸುದ್ದಿ ಓಡಾಡುತ್ತಿತ್ತು.

ಆದರೆ, ಅಕ್ಷರಾ ಹಾಸನ್‌ ಈಗ ಈ ಚಿತ್ರದಲ್ಲಿ ನಟಿಸೋದು ಡೌಟು ಎಂಬ ಮಾತು ಕೇಳಿಬರುತ್ತಿದ್ದು, ಅವರ ಜಾಗಕ್ಕೆ ಹೊಸ ನಾಯಕಿಯ ಹೆಸರು ಓಡಾಡುತ್ತಿದೆ. ಅದು ಸಾಯಿ ಪಲ್ಲವಿ. ಯಾರು ಈ ಸಾಯಿ ಪಲ್ಲವಿ ಎಂದರೆ ನಿಮಗೆ ಮಲಯಾಳಂನ ಯಶಸ್ವಿ ಚಿತ್ರ “ಪ್ರೇಮಂ’ ಬಗ್ಗೆ ಹೇಳಬೇಕಾಗುತ್ತದೆ. “ಪ್ರೇಮಂ’ ಸಿನಿಮಾದಲ್ಲಿ ಮಲರಾ ಎಂಬ ಲೆಕ್ಚರರ್‌ ಪಾತ್ರ ಮಾಡಿ, ಆ ಪಾತ್ರದ ಮೂಲಕ ಮೋಡಿ ಮಾಡಿದ ಬೆಡಗಿ ಸಾಯಿ ಪಲ್ಲವಿ.

ಈಗಾಗಲೇ ತಮಿಳು, ತೆಲುಗು ಚಿತ್ರಗಳಲ್ಲಿ ನಟಿಸಿರುವ ಸಾಯಿ ಪಲ್ಲವಿಯನ್ನು ನಿರ್ದೇಶಕ ನಾಗಶೇಖರ್‌ ಸಂಪರ್ಕಿಸಿದ್ದು, ಈಗಾಗಲೇ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಸಾಯಿಪಲ್ಲವಿ “ನವೆಂಬರ್‌ನಲ್ಲಿ ನಾನು ಅವಳು’ ನಾಯಕಿಯಾಗಿ ವಿಕ್ರಮ್‌ ಜೊತೆ ಡ್ಯುಯೆಟ್‌ ಹಾಡಬಹುದು. ಇನ್ನು, ಚಿತ್ರದ ತಯಾರಿ ಜೋರಾಗಿದ್ದು, ಸೋಮವಾರ ವಿಕ್ರಮ್‌ ಅವರ ಫೋಟೋಶೂಟ್‌ ಮಿನರ್ವ ಮಿಲ್‌ನಲ್ಲಿ ನಡೆಯಲಿದೆ.

ತುಂಬಾ ಅದ್ಧೂರಿ ಹಾಗೂ ಸ್ಟೈಲಿಶ್‌ ಆಗಿ ಫೋಟೋಶೂಟ್‌ ಮಾಡುವ ಉದ್ದೇಶ ಚಿತ್ರತಂಡಕ್ಕಿದೆ. ಆಗಸ್ಟ್‌ 16ರಂದು ವಿಕ್ರಮ್‌ ಹುಟ್ಟುಹಬ್ಬವಿದ್ದು, ಅಂದು ಚಿತ್ರದ ಟೀಸರ್‌ ಹಾಗೂ ಫ‌ಸ್ಟ್‌ಲುಕ್‌ ರಿಲೀಸ್‌ ಆಗಲಿದೆ.  ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರವನ್ನು ಕನಕಪುರ ಶ್ರೀನಿವಾಸ್‌ ನಿರ್ಮಿಸುತ್ತಿದ್ದಾರೆ. ತಮಿಳಿನಲ್ಲಿ “ಅವಳುಂ ನಾನುಂ ಅಲೆಯುಂ ಕಡಲಂ’ ಎಂದು ಹೆಸರಿಟ್ಟರೆ, ತೆಲುಗಿನಲ್ಲಿ “ಅಪ್ಪುಡಪ್ಪುಡು’ ಹಾಗೂ ಮಲಯಾಳಂ ಭಾಷೆಯಲ್ಲಿ ರೆಡಿಯಾಗುವ ಚಿತ್ರಕ್ಕೆ “ನಾನುಂ ಅವಳುಂ’ ಎಂದು ಹೆಸರಿಡಲಾಗಿದೆ.

ಚಿತ್ರದಲ್ಲಿ ತಮಿಳಿನ ಶರತ್‌ಕುಮಾರ್‌, ನಾಜರ್‌, ಸುಹಾಸಿನಿ ಮಣಿರತ್ನಂ, ಕನ್ನಡದ ಸಾಧು ಕೋಕಿಲ, ಚಿಕ್ಕಣ್ಣ, ತೆಲುಗಿನ ಅಜಯ್‌ ಮತ್ತು ಸಪ್ತಗಿರಿ ಸೇರಿದಂತೆ ಅನೇಕ ಕಲಾವಿದರು ನಟಿಸುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣವನ್ನು ಸುಮಾರು 50 ದಿನಗಳ ಕಾಲ ಕರ್ನಾಟಕ ಮತ್ತು ತಮಿಳು ನಾಡು ಸುತ್ತಮುತ್ತ ನಡೆಯಲಿದೆ. ಎರಡನೇ ಹಂತದ ಚಿತ್ರೀಕರಣವನ್ನು ಸ್ಕಾಟ್‌ಲೆಂಡ್‌, ಇಂಗ್ಲೆಂಡ್‌ ಮತ್ತು ಐರೆಲಂಡ್‌ನ‌ಲ್ಲಿ ನಡೆಸುವ ಉದ್ದೇಶ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.