ತ್ಯಾಗಮಯಿ ಈ ‘ಪ್ರೇಮಮಯಿ’: ಪ್ರೇಮ-ಪ್ರೀತಿಗೆ ಹೊಸ ವ್ಯಾಖ್ಯಾನ


Team Udayavani, Sep 16, 2021, 3:03 PM IST

ತ್ಯಾಗಮಯಿ ಈ ‘ಪ್ರೇಮಮಯಿ’: ಪ್ರೇಮ-ಪ್ರೀತಿಗೆ ಹೊಸ ವ್ಯಾಖ್ಯಾನ

ಪ್ರೀತಿ, ಪ್ರೇಮದ ವಿಷಯವನ್ನು ಇಟ್ಟುಕೊಂಡು ನೂರಾರು ಸಿನಿಮಾಗಳು ಬಂದಿರುವುದು ನಿಮಗೆ ಗೊತ್ತೇ ಇದೆ. ಈಗ ಇಲ್ಲೊಂದು ಚಿತ್ರತಂಡ ತಮ್ಮ ಚಿತ್ರದ ಮೂಲಕ ಪ್ರೀತಿ, ಪ್ರೇಮಕ್ಕೆ ಮತ್ತೊಂದು ಹೊಸ ಅರ್ಥ, ವ್ಯಾಖ್ಯಾನ ನೀಡಲು ಹೊರಟಿದೆ. ಅಂದಹಾಗೆ, ಆ ಚಿತ್ರದ ಹೆಸರು “ಪ್ರೇಮಮಯಿ’.

ಈ ಹಿಂದೆ “ದೌಲತ್‌’ ಚಿತ್ರವನ್ನು ನಿರ್ದೇಶಿಸಿದ್ದ ರಘುವರ್ಮ “ಪ್ರೇಮಮಯಿ’ ಚಿತ್ರಕ್ಕೆಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನು ಪ್ರೇಮಮಯಿ ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ನಿರ್ದೇಶಕ ರಘುವರ್ಮ, “ಇಲ್ಲಿಯವರೆಗೆ ಪ್ರೀತಿಯನ್ನು ಒಂದೊಂದು ರೀತಿಯಲ್ಲಿ ವರ್ಣಿಸಲಾಗಿದೆ. ನಮ್ಮ ಸಿನಿಮಾದಲ್ಲಿ ಅದೆಲ್ಲದಕ್ಕಿಂತಲೂ ವಿಭಿನ್ನವಾಗಿ ವರ್ಣಿಸುವ ಪ್ರಯತ್ನ ಮಾಡುತ್ತಿದ್ದೇವೆ. ಪ್ರೀತಿ-ಪ್ರೇಮ ಎಂದರೆ‌ ಕೇವಲ ಹುಡುಗ ‌-ಹುಡುಗಿಯ ನಡುವೆ ಮಾತ್ರ ಇರುವಂಥದಲ್ಲ. ತಂದೆ  -ಮಗ, ಸ್ನೇಹಿತರು ಹೀಗೆ ಎಲ್ಲಕಡೆಯೂ ಇರುವಂಥದ್ದು. ಅದರ ವ್ಯಾಪ್ತಿ ಮತ್ತು ವಿಸ್ತಾರ ದೊಡ್ಡದು ಎಂಬ ಅಂಶವನ್ನು ಈ ಸಿನಿಮಾದಲ್ಲಿ ಹೇಳುತ್ತಿದ್ದೇವೆ. ಬರೀ ಪ್ರೀತಿ-ಪ್ರೇಮ ಮಾತ್ರವಲ್ಲದೆ ಇಲ್ಲೊಂದು ತ್ಯಾಗದ ಕಥೆಯಿದೆ. ನವಿರಾದ ಲವ್‌ಸ್ಟೋರಿ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್‌, ಎಮೋಶನ್ಸ್‌, ಕಾಮಿಡಿ ಹೀಗೆ ಎಲ್ಲ ಅಂಶಗಳೂ ಇದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂಥ ಸಿನಿಮಾ ಇದಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮತ್ತೆ ಗಾಳಿಪಟ-2 ಹಾರಾಟ.. ಸೆ. 18ರಿಂದ ಚಿತ್ರೀಕರಣ

“ಪ್ರೇಮಮಯಿ’ ಚಿತ್ರದಲ್ಲಿ ನವ ಪ್ರತಿಭೆ ರಾಮು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ನವನಟಿ ಸುರಕ್ಷಿತಾ ನಾಯಕಿಯಾಗಿ ತೆರೆಮೇಲೆ ಜೋಡಿಯಾಗುತ್ತಿದ್ದಾರೆ.

ಉಳಿದಂತೆ ಅಂಜನಪ್ಪ, ಶಿವಕುಮಾರ್‌ ಆರಾಧ್ಯ, ಸಂದೀಪ್‌ ಮಲಾನಿ, ಕಲಾರತಿ ಮಹದೇವ್‌, ಕುರಿಬಾಂಡ್‌ ರಂಗ, ವಿಕ್ಟರಿ ವಾಸು, ಶಿಲ್ಪಾ ಮೂರ್ತಿ, ಮಂಜುನಾಥ್‌ ಮೊದಲಾದವರು “ಪ್ರೇಮಮಯಿ ‌ ‘ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದ್ದು, ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಸದ್ಯ “ಪ್ರೇಮಮಯಿ’ ಚಿತ್ರದ ಮುಹೂರ್ತ ನಡೆಸಿರುವ ಚಿತ್ರತಂಡ ಶಿವಮೊಗ್ಗ, ಗೋವಾ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲು ಯೋಚನೆ ಹಾಕಿಕೊಂಡಿದೆ.

“ಶ್ರೀಸಿಂಗನಲ್ಲೂರು ಚೌಡೇಶ್ವರಿ ಕಂಬೈನ್ಸ್‌’ ಬ್ಯಾನರ್‌ನಲ್ಲಿ ಎಲ್‌. ನಾಗಭೂಷಣ್‌, ಕಾರ್ತಿಕ್‌ ವೆಂಕಟೇಶ್‌, ಪಿ.ಎನ್‌.ಕಿರಣ್ ಕುಮಾರ್‌ ಜಂಟಿಯಾಗಿ “ಪ್ರೇಮಮಯಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಐದು ಹಾಡುಗಳಿಗೆ ಕಾರ್ತಿಕ್‌ ವೆಂಕಟೇಶ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಕೀರ್ತಿವರ್ಧನ್‌ ಛಾಯಾಗ್ರಹಣ, ಭಾರ್ಗವ್‌ ಸಂಕಲನವಿದೆ.

ಎಲ್ಲ ಅಂದುಕೊಂಡಂತೆ ನಡೆದರೆ, ಮುಂಬರುವ ಸಂಕ್ರಾಂತಿ ವೇಳೆಗೆ “ಪ್ರೇಮಮಯಿ’ಯನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.