‘ಪುನೀತ ಪರ್ವ’ಕ್ಕೆ ಭರದ ತಯಾರಿ: ಅಭಿಮಾನಿಗಳ ಜತೆ “ಗಂಧದ ಗುಡಿ’ ಪ್ರೀ-ರಿಲೀಸ್‌ ಇವೆಂಟ್‌


Team Udayavani, Oct 20, 2022, 12:45 PM IST

puneeta

ಬೆಂಗಳೂರು: ಪುನೀತ್‌ ರಾಜಕುಮಾರ್‌ ಕೊನೆಯದಾಗಿ ತೆರೆಮೇಲೆ ಕಾಣಿಸಿಕೊಂಡಿರುವ “ಗಂಧದ ಗುಡಿ’ ಡಾಕ್ಯುಮೆಂಟರಿ ಸಿನಿಮಾದ ಇದೇ ಅ. 28ಕ್ಕೆ ಅದ್ಧೂರಿಯಾಗಿ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಸಿನಿಮಾದಂತೆಯೇ ಭರ್ಜರಿಯಾಗಿ ಪ್ರಚಾರ ಪಡೆದುಕೊಳ್ಳುತ್ತಿರುವ “ಗಂಧದ ಗುಡಿ’ಯನ್ನು ಕನ್ನಡ ಚಿತ್ರರಂಗದಲ್ಲಿ ಅವಿಸ್ಮರಣೀಯವಾಗಿಸಲು ರಾಜ್‌ ಕುಟುಂಬ ಮತ್ತು ಪುನೀತ್‌ ರಾಜಕುಮಾರ್‌ ಅಭಿಮಾನಿಗಳು ಟೊಂಕ ಕಟ್ಟಿನಿಂತಿದ್ದಾರೆ.

ಅಪ್ಪು ಕೊನೆ ತೆರೆ ಚಿತ್ರಕ್ಕೆ ಅದ್ಧೂರಿ ತಯಾರಿ: ಇನ್ನು ಪುನೀತ್‌ ರಾಜಕುಮಾರ್‌ ಅವರ ಕನಸಿನ “ಗಂಧದ ಗುಡಿ’ಯನ್ನು ತೆರೆಗೆ ತರುವ ಮುನ್ನ ಅದ್ಧೂರಿಯಾಗಿ ಪ್ರೀ-ರಿಲೀಸ್‌ ಇವೆಂಟ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ಶ್ರೀಕೃಷ್ಣ ವಿಹಾರದಲ್ಲಿ ನಡೆಯಲಿರುವ “ಗಂಧದ ಗುಡಿ’ ಪ್ರೀ-ರಿಲೀಸ್‌ ಇವೆಂಟ್‌ಗಾಗಿ, ಕಳೆದ 3 ದಿನಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ವೇಳೆ ರಾಘವೇಂದ್ರ ರಾಜಕುಮಾರ್‌, ಒಂದಷ್ಟು ಮಾಹಿತಿ ಹಂಚಿಕೊಂಡರು.

“ಅಪ್ಪು ಇದ್ದರೆ ಎಷ್ಟು ಅದ್ಧೂರಿಯಾಗಿ ಈ ಕಾರ್ಯಕ್ರಮವನ್ನು ಮಾಡುತ್ತಿದ್ದರೋ, ಅಷ್ಟೇ ಅದ್ದೂರಿಯಾಗಿ ನಾವು ಕೂಡ ಈ ಕಾರ್ಯಕ್ರಮವನ್ನು ಪ್ಲ್ರಾನ್‌ ಮಾಡಿದ್ದೇವೆ. ಅಶ್ವಿ‌ನಿ ನೇತೃತ್ವದಲ್ಲಿ, ಅಭಿಮಾನಿಗಳ ಜೊತೆಗೂಡಿ ಈ ಕಾರ್ಯಕ್ರಮ ನಡೆಯಲಿದೆ. ಅಶ್ವಿ‌ನಿ ಅವರೇ ಇದರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಪುನೀತ್‌ “ಗಂಧದ ಗುಡಿ’ಯನ್ನು ಬಹಳ ಪ್ರೀತಿಯಿಂದ ಮಾಡಿದ್ದಾರೆ. ದೇವರು ಈ ಸಿನಿಮಾ ಮುಗಿಸಿ ಹೋಗಲು ಅಪ್ಪುಗೆ ಅವಕಾಶ ಕೊಟ್ಟಿದ್ದಾನೆ. ಇನ್ನು ಈ ಇವೆಂಟ್‌ನಲ್ಲಿ ಹಾಡು, ಡಾನ್ಸ್‌, ಪುನೀತ್‌ ಸ್ಮರಣೆ ಸೇರಿದಂತೆ ಇತರ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಅಭಿಮಾನಿಗಳು ಎಷ್ಟೇ ಬಂದರೂ, ಎಲ್ಲರಿಗೂ ಕಾರ್ಯಕ್ರಮ ತೋರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದಿದ್ದಾರೆ ರಾಘವೇಂದ್ರ ರಾಜಕುಮಾರ್‌.

ದೂರದಿಂದ ಬರುವವರಿಗೆ ವ್ಯವಸ್ಥೆ: “ದೂರದಿಂದ ಬರುವ ಅಭಿಮಾನಿಗಳಿಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. 2 ದಿನಗಳ ಹಿಂದಿನಿಂದಲೇ ಅಭಿಮಾನಿಗಳು ಬರೋದಕ್ಕೆ ಶುರು ಮಾಡಿದ್ದಾರೆ. ಈ ಕಾರ್ಯಕ್ರಮ ನೋಡಿ ಇಡೀ ದೇಶ ಪ್ರಪಂಚ ಮಾತಾಡಬೇಕು ಆ ರೀತಿ ಮಾಡೋಣ. ಅಪ್ಪಾಜಿ ಬಗ್ಗೆ ಒಂದು ಪುಸ್ತಕ ಬರೆದ ಅಪ್ಪು. ಈಗ ಈ ಸಿನಿಮಾ ಮೂಲಕ ಜನರಿಗೆ ಅಪ್ಪು ಏನೋ ಹೇಳ್ಳೋಕೆ ಹೊರಟಿದ್ದಾರೆ. ಎಷ್ಟು ಜನ ಬರ್ತಾರೆ ಅಂತ ಲೆಕ್ಕ ಹಾಕೋಕೆ ಆಗಲ್ಲ. ಎಷ್ಟೇ ಜನ ಬಂದ್ರು ಅವರಿಗೆ ಕಾರ್ಯಕ್ರಮ ತೋರಿಸೋ ಕೆಲಸ ನಮ್ಮದು ಅದಕ್ಕೆ ನಾವು ರೆಡಿಯಿದ್ದೇವೆ. ನಾವು ಏನೋ ಮಾಡುತ್ತೇವೆ ಅಂತ ಹೇಳಿಕೊಳ್ಳೊ ಕುಟುಂಬ ಅಲ್ಲ. ನೀವು ನೋಡಿ ಹೇಳಬೇಕು’ ಎಂದರು ರಾಘವೇಂದ್ರ ರಾಜಕುಮಾರ್‌.

ಇದನ್ನೂ ಓದಿ:‘ಕಾಂತಾರ’ ಪ್ರಭಾವ: ದೈವ ನರ್ತಕರಿಗೆ ಮಾಸಾಶನ ನೀಡಲು ಮುಂದಾದ ಸರ್ಕಾರ

“ಗಂಧದ ಗುಡಿ’ ಪ್ರೀ-ರಿಲೀಸ್‌ ಇವೆಂಟ್‌ ಅನ್ನು ಒಂದು ಸೆಲೆಬ್ರೇಷನ್‌ ಥರ ಮಾಡಬೇಕು ಎಂಬುದು ನಮ್ಮ ಉದ್ದೇಶ. ಈ ಕಾರ್ಯಕ್ರಮದಲ್ಲಿ ಎಲ್ಲಾ ಚಿತ್ರರಂಗದ ಗಣ್ಯರು ಇರುತ್ತಾರೆ. ಈ ಕಾರ್ಯಕ್ರಮ ತುಂಬಾ ಚೆನ್ನಾಗಿರುತ್ತೆ. ಕಣ್ಣಿಗೆ ಹಬ್ಬದ ಹಾಗೆ ಇರುತ್ತೆ. ಇದನ್ನ ನಿಮಗಾಗೆ ಮಾಡುತ್ತಿದ್ದೇವೆ, ನಿಮಗೆ ತಲುಪಿಸೋದು ನಮ್ಮ ಧರ್ಮ. ಅಪ್ಪು ಯಾರೊಬ್ಬರ ಸ್ವತ್ತಲ್ಲ. ಇಡೀ ಕರ್ನಾಟಕದ ಸ್ವತ್ತು. ಇದನ್ನ ಎಲ್ಲರಿಗೂ ತಲುಪಿಸಬೇಕು’ ಎಂದರು ರಾಘವೇಂದ್ರ ರಾಜಕುಮಾರ್‌.

ದಕ್ಷಿಣ ಸಿನಿಮಾ ರಂಗದ ದಿಗ್ಗಜ ನಟರು ಭಾಗಿ:  “ಗಂಧದ ಗುಡಿ’ಯ ನಿರ್ದೇಶಕ ಅಮೋಘ ವರ್ಷ ಈ ವೇಳೆ ಹಾಜರಿದ್ದು, ಕಾರ್ಯಕ್ರಮದ ಕುರಿತು ಒಂದಷ್ಟು ಮಾತನಾಡಿದರು. ಇನ್ನು “ಪುನೀತ್‌ ಪರ್ವ’ ಎಂಬ ಹೆಸರಿನಲ್ಲಿ ನಡೆಯುತ್ತಿರುವ “ಗಂಧದ ಗುಡಿ’ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ದಕ್ಷಿಣ ಸಿನಿಮಾ ರಂಗದ ಅನೇಕ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ತಮಿಳು ಸಿನಿಮಾ ರಂಗದ ಕಮಲ್‌ ಹಾಸನ್‌, ಪ್ರಭುದೇವ, ಸೂರ್ಯ, ತೆಲುಗು ನಟರಾದ ರಾಣಾ ದಗ್ಗುಬಾಟಿ, ನಂದಮೂರಿ ಬಾಲಕೃಷ್ಣ, ಕನ್ನಡದಿಂದ ಸುದೀಪ್‌, ಯಶ್‌, ರಮ್ಯಾ, ರವಿಚಂದ್ರನ್‌, ಜಗ್ಗೇಶ್‌, ರಮೇಶ್‌ ಅರವಿಂದ್‌, ಶ್ರೀಮುರಳಿ, ಗಣೇಶ್‌, ಉಪೇಂದ್ರ, ಧ್ರುವ ಸರ್ಜಾ ಸೇರಿದಂತೆ ಬಹುತೇಕ ಕಲಾವಿದರು ಹಾಜರಾಗಲಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಲಾಗಿದೆ. ಚಿತ್ರರಂಗದ ಜೊತೆಗೆ ರಾಜಕೀಯ, ಉದ್ಯಮ ಹೀಗೆ ಇತರ ಕ್ಷೇತ್ರಗಳ ಪ್ರಮುಖ ಗಣ್ಯರಿಗೆ ಕೂಡ ರಾಜ್‌ ಕುಟುಂಬ ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನವನ್ನು ನೀಡಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.