“ಅದ್ಧೂರಿ-2’ಗೆ ತೆರೆಮರೆಯಲ್ಲಿ ಸಿದ್ಧತೆ!

ಸೀಕ್ವೆಲ್‌ ಚಿತ್ರದ ಬಗ್ಗೆ ನಟ ನಿರಂಜನ್‌ ಹೇಳ್ಳೋದೇನು?

Team Udayavani, May 13, 2019, 3:00 AM IST

niranjan

2012ರಲ್ಲಿ ತೆರೆಗೆ ಬಂದಿದ್ದ “ಅದ್ಧೂರಿ’ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಧ್ರುವ ಸರ್ಜಾ ಎನ್ನುವ ಸರ್ಜಾ ಕುಟುಂಬದ ಹುಡುಗನನ್ನ ಆ್ಯಕ್ಷನ್‌ ಪ್ರಿನ್ಸ್‌ ಆಗಿ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ ಅದು. ಈಗ ಅದೇ “ಅದ್ಧೂರಿ’ ಚಿತ್ರದ ಸೀಕ್ವೆಲ್‌ “ಅದ್ಧೂರಿ-2′ ತೆರೆಗೆ ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಜೋರಾಗಿ ಹರಿದಾಡುತ್ತಿದೆ.

ಅಂದಹಾಗೆ, ಈ ಹಿಂದೆ “ಅದ್ಧೂರಿ’ ಚಿತ್ರವನ್ನು ನಿರ್ಮಿಸಿದ್ದ “ಸಿಎಂಆರ್‌ ಪ್ರೊಡಕ್ಷನ್ಸ್‌” ಬ್ಯಾನರ್‌ನಲ್ಲೇ ಶಂಕರ್‌ ರೆಡ್ಡಿ, ಮೋಹನ್‌ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಈ ಬಾರಿಯ “ಅದ್ಧೂರಿ’ ಚಿತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ರಮೇಶ್‌ ವೆಂಕಟೇಶ್‌ ಎಂಬ ನವ ಪ್ರತಿಭೆ ನಿರ್ದೇಶಿಸಲಿದ್ದಾರೆ ಅನ್ನೋದು ಸದ್ಯ ಹರಿದಾಡುತ್ತಿರುವ ಸುದ್ದಿ. ಹಾಗಾದರೆ, ನಿಜಕ್ಕೂ “ಅದ್ಧೂರಿ-2′ ಚಿತ್ರ ತೆರೆಗೆ ಬರಲಿದೆಯಾ? ಚಿತ್ರದಲ್ಲಿ ಯಾರ್ಯಾರು ಇರಲಿದ್ದಾರೆ? ಚಿತ್ರದ ಕಥೆ ಏನು? ಹೀಗೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಹತ್ತಾರು ಪ್ರಶ್ನೆಗಳಿಗೆ ನಟ ನಿರಂಜನ್‌ ಸುಧೀಂದ್ರ ಅವರೇ ಉತ್ತರಿಸಿದ್ದಾರೆ.

ಈ ಬಗ್ಗೆ ಮಾತನಾಡುವ ನಿರಂಜನ್‌, “ಅದ್ಧೂರಿ-2′ ಟೈಟಲ್‌ನಲ್ಲಿ ಅದೇ ಸೀಕ್ವೆಲ್‌ನಲ್ಲಿ ಸಿನಿಮಾ ಮಾಡಲು ತಯಾರಿ ನಡೆಯುತ್ತಿರುವುದೇನೋ ನಿಜ. ಈಗಾಗಲೇ ಅದರ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಒಂದೆರಡು ಸುತ್ತಿನ ಮಾತುಕತೆಯೂ ನಡೆದಿದೆ. ಕಥೆಯ ಎಳೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ. ಕಥೆಯನ್ನು ಕೇಳಿದಾಗ ನನಗೂ ಇಷ್ಟವಾಗಿದೆ.

ಆದರೆ ಸ್ಕ್ರಿಪ್ಟ್ ಮೇಲೆ ಇನ್ನೂ ಒಂದಷ್ಟು ಕೆಲಸ ನಡೆಯುತ್ತಿರುವುದರಿಂದ, ಚಿತ್ರದ ಕಲಾವಿದರು, ತಂತ್ರಜ್ಞರು, ಶೂಟಿಂಗ್‌ ಮತ್ತಿತರ ಯಾವುದೇ ಸಂಗತಿಗಳು ಅಂತಿಮವಾಗಿಲ್ಲ. ಸ್ಕ್ರಿಪ್ಟ್ ಅಂತಿಮವಾದ ಬಳಿಕವಷ್ಟೇ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಬಹುದು. ಇತರೆ ವಿಷಯಗಳನ್ನು ಹಂಚಿಕೊಳ್ಳಬಹುದು’ ಎನ್ನುತ್ತಾರೆ.

“ಸದ್ಯ “ಅದ್ಧೂರಿ-2′ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ತಿಂಗಳ ಅಂತ್ಯದೊಳಗೆ ಈ ಚಿತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಆಮೇಲೆ ಆ ಚಿತ್ರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಬಹುದು’ ಎನ್ನುವುದು ನಿರಂಜನ್‌ ಮಾತು.

ಇನ್ನು ಪ್ರಿಯಾಂಕ ಉಪೇಂದ್ರ ಅಭಿನಯದ “ಸೆಕೆಂಡ್‌ ಹಾಫ್’ ಚಿತ್ರದ ಮೂಲಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾದ ನಿರಂಜನ್‌ ಈಗ “ನಮ್‌ ಹುಡುಗ್ರು ಕಥೆ’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಇದೇ ಸೆಪ್ಟೆಂಬರ್‌ ವೇಳೆಗೆ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. ಒಟ್ಟಾರೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಅಂತೆ-ಕಂತೆಗಳಿಗೆ ಸ್ಪಷ್ಟತೆ ಸಿಗಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಾಗುತ್ತದೆ ಅನ್ನೋದು ಚಿತ್ರತಂಡದ ಮೂಲಗಳ ಮಾಹಿತಿ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.