‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾದ ಮೂಲಕ ಜೀವನ ಶೈಲಿ ಬದಲಾಗುವ ನಿರೀಕ್ಷೆ..!


Team Udayavani, Feb 15, 2020, 3:55 PM IST

15-February-20

ಗಾಂಧಿನಗರದಲ್ಲಿ ವಿಭಿನ್ನ ಟೈಟಲ್ ಮೂಲಕ ಸಿನಿಮಾಗಳು ಹಾಗಾಗ ಸದ್ದು ಮಾಡುತ್ತಲಿರುತ್ತವೆ. ರಿಲೀಸ್ ಗೆ ರೆಡಿಯಾಗಿರುವ ಸಿನಿಮಾವೊಂದು‌ ಹಿಂದೆಂದು ಕೇಳಿರದ ವಿಭಿನ್ನ ಟೈಟಲ್ ಮೂಲಕ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಸಂಯುಕ್ತ-2 ಸಿನಿಮಾ ನಿರ್ದೇಶಿಸಿದ್ದ ಅಭಿರಾಮ್ ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದ್ದಾರೆ. ‘ಪ್ರೆಸೆಂಟ್ ಪ್ರಪಂಚ 0% ಲವ್’ ಎಂಬ ಭಾರಿ ಕುತೂಹಲ ಹುಟ್ಟಿಸುವ ಟೈಟಲ್ ನ್ನಿಟ್ಟು ಸಿನಿಮಾ ರೆಡಿ ಮಾಡಿದ್ದಾರೆ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಎಲ್ಲರ ಚಿತ್ತ ಆ ಸಿನಿಮಾದತ್ತ ನೆಡುವಂತೆ ಮಾಡಿದೆ.

ಅರ್ಜುನ್ ಮಂಜುನಾಥ್ ‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾದ ನಾಯಕರಾಗಿದ್ದಾರೆ. ಈ ಹಿಂದೆ ಸಂಯುಕ್ತ-೨ ಸಿನಿಮಾದ ನಿರ್ಮಾಪಕರಾಗಿದ್ದ ಅರ್ಜುನ್, ಹೀರೋ ಲುಕ್ ಇದ್ದ ಕಾರಣ ಈ ಸಿನಿಮಾದ ಮೂಲಕ ನಾಯಕ ನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅರ್ಜುನ್ ಗೆ ನಾಯಕಿಯಾಗಿ ಸಂಭ್ರಮಶ್ರೀ ಕಾಣಿಸಿಕೊಂಡಿದ್ದಾರೆ.

‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾ ಹೆಸರೇ ಸೂಚಿಸುವಂತೆ ಇಂದಿನ ಕಾಲಘಟ್ಟದ ಸಿನಿಮಾವಾಗಿದೆ. ಸದ್ಯ ಜನ ಸಮಯದ ಹಿಂದೆ, ಹಣದ ಹಿಂದಷ್ಟೇ ತಮ್ಮ ಓಟವನ್ನ ಮುಂದುವರೆಸಿದ್ದಾರೆ. ತಮ್ಮ ಅಮೂಲ್ಯವಾದ ಜೀವನ ಎಲ್ಲಿ ಕಳೆದು ಹೋಗುತ್ತಿದೆ, ಹೇಗೆ ಮಾಯವಾಗುತ್ತಿದೆ ಎಂವುದನ್ನೇ ಮರೆತು ಬಿಟ್ಟಿದ್ದಾರೆ. ಈ ಎಳೆಯನ್ನೇ ಇಟ್ಟುಕೊಂಡು ಸಿನಿಮಾ ಸಿದ್ಧ ಮಾಡಿದ್ದಾರೆ.

ಈ ಸಿನಿಮಾದ ವಿಷಯ ಸದ್ಯದ ಸ್ಥಿತಿಗೆ ಬಹಳ‌ಮುಖ್ಯವಾದ ಅಂಶ ಎಂದರೆ ತಪ್ಪಾಗಲ್ಲ. ಯಾಕಂದ್ರೆ ಜೀವನವನ್ನೇ ಮರೆತು ದುಡಿಯುತ್ತಿರುವವರಿಗೆ ಮಾಡುತ್ತಿರುವ ತಪ್ಪಿನ ಅರಿವಾಗಬೇಕು. ಇರುವುದೊಂದು ಜೀವನವನ್ನ ನೆಮ್ಮದಿಯಾಗಿಯೂ ಕಳೆಯದೇ ಮುಪ್ಪಿನಲ್ಲಿ ಕೊರಗಿದರೆ ಪ್ರಯೋಜನವಿರುವುದಿಲ್ಲ. ಹೀಗಾಗಿ ಆಗುತ್ತಿರುವ ತಪ್ಪನ್ನ ತಿಳಿ ಹೇಳಲು ಯಾರಾದರೊಬ್ಬರ ಅನಿವಾರ್ಯವಿತ್ತು. ಆ ಜಾಗವನ್ನು ಈ ಸಿನಿಮಾ ತುಂಬಬಹುದೆಂಬ ಭರವಸೆ ಮೂಡಿದೆ. ನಾವೂಗಳು ಕೂಡ ಸಮಯದ ಹಂಗಿಲ್ಲದೇ ಕೇವಲ ಕೆಲಸವನ್ನಷ್ಟೇ ಮಾಡ ಹೊರಟಾಗ, ಅಲ್ಲೆ ಕಳೆದು ಹೋಗುತ್ತೇವೆ. ಏನಾಗುತ್ತಿದೆ ಎಂಬುದು ಅರಿವಿಗೆ ಬಂದಾಗ ಬದಲಾವಣೆ ಮೂಡಬಹುದೆಂಬುದಷ್ಟೆ ಆಶಯ.

ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್ ಕೆಲಸದಲ್ಲಿರುವ ಚಿತ್ರತಂಡ, ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಉಂಟು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮಾರ್ಚ್ ತಿಂಗಳಲ್ಲಿ ತೆರೆಗೆ ತರೋದಕ್ಕೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಕೃಷ್ಣ ಮೂರ್ತಿ ಎಲ್, ರವಿಕುಮಾರ್ ಹೆಚ್ .ಪಿ ಬಂಡವಾಳ ಹೂಡಿದ್ದು, ರವಿ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ತಬಲ ನಾಣಿ, ಚಂದನ್ ಆಚಾರ್, ಓಂ ಪ್ರಕಾಶ್ ರಾವ್, ಗೋವಿಂದೇ ಗೌಡ, ಯಶಸ್ ಅಭಿ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.