ಮೊದಲು ಸ್ಕೆಚ್‌ ನಂತರ ಫೋಟೋಶೂಟ್‌ ಕುರುಕ್ಷೇತ್ರಕ್ಕೆ ಭರ್ಜರಿ ತಯಾರಿ


Team Udayavani, Jul 31, 2017, 10:51 AM IST

abhimanyu.jpg

“ಕುರುಕ್ಷೇತ್ರ’ ಚಿತ್ರದ ತಯಾರಿ ಜೋರಾಗಿ ನಡೆಯುತ್ತಿದೆ. ಆಗಸ್ಟ್‌ 6 ರಂದು ಅದ್ಧೂರಿಯಾಗಿ ಚಿತ್ರದ ಮುಹೂರ್ತ ನಡೆಯಲಿದೆ. ಈಗಾಗಲೇ ಚಿತ್ರದ ಬಹುತೇಕ ತಾರಾಬಳಗದ ಆಯ್ಕೆ ನಡೆದಿದ್ದು, ಟೆಸ್ಟ್‌ಶೂಟ್‌ ಕೂಡಾ ನಡೆದಿದೆ. ಎಲ್ಲರಿಗಿರುವ ಕುತೂಹಲ ಒಂದೇ, ಅದೇನೆಂದರೆ ಯಾವ ರೀತಿ ಫೋಟೋಶೂಟ್‌ ನಡೆಯುತ್ತದೆ, ಆಯಾ ಪಾತ್ರಗಳಲ್ಲಿ ಕಲಾವಿದರು ಹೇಗೆ ಕಾಣುತ್ತಾರೆಂಬುದು. ಹೈದರಾಬಾದ್‌ನಲ್ಲಿ ಫೋಟೋಶೂಟ್‌ ನಡೆಯುತ್ತಿದ್ದು, ಕಲಾವಿದರು ಗೆಟಪ್‌ನ ಒಂದು ಸ್ಯಾಂಪಲ್‌ ಇಲ್ಲಿದೆ. ಇಲ್ಲಿರುವ ಚಿತ್ರ ನಿಖೀಲ್‌ ಕುಮಾರ್‌ ಅವರದು.

“ಕುರುಕ್ಷೇತ್ರ’ದಲ್ಲಿ ನಿಖೀಲ್‌ ಅಭಿಮನ್ಯು ಪಾತ್ರ ಮಾಡುತ್ತಿದ್ದು, ಈಗಾಗಲೇ ನಿಖೀಲ್‌ ಟೆಸ್ಟ್‌ಶೂಟ್‌ ನಡೆದಿದೆ. ಆ ಟೆಸ್ಟ್‌ಶೂಟ್‌ನಲ್ಲಿ, ಅಭಿಮನ್ಯು ಗೆಟಪ್‌ನಲ್ಲಿ ನಿಖೀಲ್‌ ಹೇಗೆ ಕಾಣಿಸಿಕೊಂಡಿದ್ದಾರೆಂಬುದನ್ನು ಈ ಸ್ಕೆಚ್‌ ಮೂಲಕ ನೋಡಬಹುದು. “ಕುರುಕ್ಷೇತ್ರ’ ಚಿತ್ರದ ಟೆಸ್ಟ್‌ಶೂಟ್‌ ತುಂಬಾ ಕ್ರಮಬದ್ಧವಾಗಿ ನಡೆಯುತ್ತಿದ್ದು, ಏಕಾಏಕಿ ಕಲಾವಿದರಿಗೆ ಕಾಸ್ಟೂéಮ್‌ ತೊಡಿಸಿ ಫೋಟೋಶೂಟ್‌ ಮಾಡುತ್ತಿಲ್ಲ. ಬದಲಾಗಿ ಆಯಾ ಪಾತ್ರವನ್ನು ಕಲ್ಪಿಸಿಕೊಂಡು, ಮೊದಲು ಆ ಪಾತ್ರವನ್ನು ಸ್ಕೆಚ್‌ ಮಾಡಲಾಗುತ್ತದೆ.

ಈ ಸ್ಕೆಚ್‌ನಲ್ಲಿ ಸಣ್ಣ ಸಣ್ಣ ಅಂಶಗಳನ್ನು ಕೂಡಾ ಗಮನಿಸಿ, ಅದಕ್ಕೆ ಸರಿಯಾಗಿ ಕಾಸ್ಟೂéಮ್‌ ರೆಡಿಮಾಡಲಾಗುತ್ತದೆ. ಆ ನಂತರ ಚಿತ್ರದ ಟೆಸ್ಟ್‌ಶೂಟ್‌ ಮಾಡಲಾಗುತ್ತಿದೆ. ನಿರ್ದೇಶಕ ನಾಗಣ್ಣ ಸದ್ಯ ಹೈದರಾಬಾದ್‌ನಲ್ಲಿ ಟೆಸ್ಟ್‌ಶೂಟ್‌ನಲ್ಲಿ ಬಿಝಿಯಾಗಿದ್ದಾರೆ. ಬಹುತೇಕ ಚಿತ್ರೀಕರಣ ಹೈದರಾನಾದ್‌ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯಲಿದ್ದು, ಅದಕ್ಕಾಗಿ ವಿಶೇಷ ಸೆಟ್‌ ಹಾಕಲಾಗುತ್ತಿದೆ. ಈಗಾಗಲೇ ಸೆಟ್‌ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರದ ಅದ್ಧೂರಿತನವನ್ನು ಬಿಂಬಿಸುವಂತಿವೆಯಂತೆ.

 ಚಿತ್ರದಲ್ಲಿ ದರ್ಶನ್‌ ದುರ್ಯೋಧನ ಪಾತ್ರ ಮಾಡುತ್ತಿದ್ದು, ಈಗಾಗಲೇ ಅವರ ಟೆಸ್ಟ್‌ಶೂಟ್‌ ಆಗಿದೆ. ಹಿರಿಯ ನಟ ಶ್ರೀನಾಥ್‌ “ಕುರುಕ್ಷೇತ್ರ’ ಚಿತ್ರದಲ್ಲಿ ಧೃತರಾಷ್ಟ್ರ, ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರು ಶ್ರೀಕೃಷ್ಣ , ಹಿರಿಯ ನಟರಾದ ಅಂಬರೀಶ್‌ ಅವರು ಭೀಷ್ಮಾಚಾರ್ಯ, ಶ್ರೀನಿವಾಸ ಮೂರ್ತಿಗಳು ದ್ರೋಣಾಚಾರ್ಯ, ಅವಿನಾಶ್‌ ಅವರು ಗಾಂಧರ್ವ ರಾಜನಾಗಿ ನಟಿಸುತ್ತಿದ್ದಾರೆ. “ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರವನ್ನು ಬಹುಭಾಷಾ ನಟಿ ಸ್ನೇಹಾ ಮಾಡುತ್ತಿದ್ದಾರೆ.

ನಿಖೀಲ್‌ ಕುಮಾರ್‌ ಅಭಿಮನ್ಯುವಾಗಿ ನಟಿಸಿದರೆ, ಚಿತ್ರದಲ್ಲಿ ಸಾಯಿಕುಮಾರ್‌ ಶಕುನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಹರಿಪ್ರಿಯಾ ಕೂಡಾ ನಟಿಸುತ್ತಿದ್ದು, ಅವರಿಲ್ಲೊಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಟಿ ರೆಜಿನಾ ಕೂಡಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಕರ್ಣನ ಪಾತ್ರದಲ್ಲಿ ತೆಲುಗು ನಟ ಶ್ರೀಕಾಂತ್‌ ಕಾಣಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ. ಈ ಚಿತ್ರವನ್ನು ಮುನಿರತ್ನ ಅವರು ನಿರ್ಮಿಸುತ್ತಿದ್ದು, ಇದೊಂದು ಬಿಗ್‌ ಬಜೆಟ್‌ನ ಚಿತ್ರವಾಗಿದೆ.

ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಬಾಹುಬಲಿ’ ಖ್ಯಾತಿಯ ಕಿಂಗ್‌ ಸಾಲೋಮನ್‌ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜುಲೈ 30 ರಂದು ಚಿತ್ರದ ಮುಹೂರ್ತ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಮುಹೂರ್ತ ಮುಂದಕ್ಕೆ ಹೋಗಿದ್ದು, ಆಗಸ್ಟ್‌ 6 ರಂದು ನಡೆಯಲಿದೆ.

ಟಾಪ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.