ಪ್ರಿಯಾ ಎಂಬ ಚತುರೆ


Team Udayavani, Mar 22, 2018, 11:22 AM IST

Ram-priya.jpg

ರಾಮ್‌ಪ್ರಿಯಾ ಮತ್ತೆ ಬಂದಿದ್ದಾರೆ! ಅರೇ, ಯಾರಪ್ಪಾ ಇದು ರಾಮ್‌ಪ್ರಿಯಾ ಎಂಬ ಪ್ರಶ್ನೆ ಎದುರಾಗುವುದು ಸಹಜ. ಈ ರಾಮ್‌ಪ್ರಿಯಾ ಬೇರಾರೂ ಅಲ್ಲ, “ಬಿಂದಾಸ್‌ ಹುಡುಗಿ’ ಅಲಿಯಾಸ್‌ ಪ್ರಿಯಾ ಹಾಸನ್‌. ಹೌದು, ಪ್ರಿಯಾ ಈಗ “ಹಾಸನ್‌’ ಹೆಸರು ತೆಗೆದು ಹಾಕಿ, ಪ್ರಿಯಾ ಹೆಸರ ಮುಂದೆ ಪತಿ ಹೆಸರು “ರಾಮ್‌’ ಎಂದು ಸೇರಿಸಿಕೊಂಡಿದ್ದಾರೆ. ಇದಷ್ಟೇ ವಿಷಯ ಆಗಿದ್ದರೆ, ಹೇಳುತ್ತಿರಲಿಲ್ಲ. ಹೊಸ ಸುದ್ದಿ ಅಂದರೆ, ರಾಮ್‌ಪ್ರಿಯಾ ಈಗ ಹೊಸ ಸಿನಿಮಾ ಮೂಲಕ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಹೊಸ ಚಿತ್ರಕ್ಕೆ ಇಟ್ಟುಕೊಂಡಿರುವ ಹೆಸರು “ರಣಚತುರೆ’.

ಹೌದು, “ಸ್ಮಗ್ಲರ್‌’ ಬಳಿಕ ರಾಮ್‌ಪ್ರಿಯಾ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಅವರ ಬ್ಯಾನರ್‌ನಲ್ಲೇ ನಿರ್ಮಾಣವಾಗುತ್ತಿರುವ ಚಿತ್ರವಿದು. ಹೆಸರೇ ಹೇಳುವಂತೆ, ಇದೊಂದು ಪಕ್ಕಾ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಚಿತ್ರ. “ಬಿಂದಾಸ್‌ ಹುಡುಗಿ’ ಚಿತ್ರದಲ್ಲಿ ಕೇವಲ ಹತ್ತು ನಿಮಿಷಗಳ ಕಾಲ ಕಾಣಬರುವ ದೃಶ್ಯದಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು ರಾಮ್‌ಪ್ರಿಯಾ. ಈಗ “ರಣಚತುರೆ’ ಚಿತ್ರದಲ್ಲಿ ಮೊದಲ ಸಲ ಪೊಲೀಸ್‌ ಅಧಿಕಾರಿಯಾಗಿ ನಟಿಸುತ್ತಿದ್ದಾರೆ.

ರಾಮ್‌ಪ್ರಿಯಾ ಸಿನಿಮಾ ಅಂದಮೇಲೆ ಅಲ್ಲಿ ದಂಡಂ ದಶಗುಣಂ ಇದ್ದೇ ಇರುತ್ತೆ. ವ್ಯವಸ್ಥೆ ವಿರುದ್ಧ, ಭ್ರಷ್ಟತೆಯ ವಿರುದ್ಧ ಹೋರಾಡುವಂತಹ ಅಧಿಕಾರಿಯಾಗಿ ಅವರು ತೆರೆಯ ಮೇಲೆ ಮಿಂಚಲಿದ್ದಾರೆ. ಸಮಾಜದಲ್ಲಿ ಇಂದಿಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯ ಖಂಡಿಸುವ ಕೆಲಸ ಆಗುತ್ತಿಲ್ಲ. ಧ್ವನಿ ಕಳೆದುಕೊಂಡವರ ಪರ ನಿಂತು ಹೋರಾಡುವ ಪೊಲೀಸ್‌ ಅಧಿಕಾರಿಯಾಗಿ ನಟಿಸುತ್ತಿದ್ದಾರಂತೆ ರಾಮ್‌ಪ್ರಿಯಾ.

ಹಾಗೆ ನೋಡಿದರೆ, ರಾಮ್‌ಪ್ರಿಯಾ ಅವರು “ಸ್ಮಗ್ಲರ್‌’ ಬಳಿಕ ಎರಡು ಚಿತ್ರಗಳಲ್ಲಿ ನಟಿಸಬೇಕಿತ್ತಂತೆ. ಆದರೆ, ಹಲವು ಕಾರಣಗಳಿಂದ ಅದು ಸಾಧ್ಯವಾಗಿಲ್ಲ. ಈಗ ಪಕ್ಕಾ ಪ್ಲಾನಿಂಗ್‌ ಮಾಡಿಕೊಂಡು ಬಂದಿರುವ ರಾಮ್‌ಪ್ರಿಯಾ, ಇನ್ನು ಮುಂದೆ ಬ್ಯಾಕ್‌ ಟು ಬ್ಯಾಕ್‌ ಚಿತ್ರ ಮಾಡುವ ಉದ್ದೇಶ ಇಟ್ಟುಕೊಂಡಿದ್ದಾರಂತೆ. ಚಿತ್ರದಲ್ಲಿ ಭರ್ಜರಿಯಾಗಿರುವ ಆರು ಫೈಟ್‌ಗಳಿದ್ದು, ಐದು ಸಾಹಸಗಳಿಗೆ ಕೌರವ ವೆಂಕಟೇಶ್‌ ಸಂಯೋಜನೆ ಮಾಡಿದರೆ, ರಾಜೇಶ್‌ ಖನ್ನಾ ಅವರು ಒಂದು ಫೈಟ್‌ ಸಂಯೋಜಿಸುತ್ತಿದ್ದಾರೆ.

ರವಿ ಜೈ ಎಂಬ ಹೊಸ ಪ್ರತಿಭೆ ಸಂಗೀತ ನೀಡುತ್ತಿದ್ದು, ಎರಡು ಹಾಡುಗಳಷ್ಟೇ ಚಿತ್ರದಲ್ಲಿರಲಿವೆ. ಇಲ್ಲಿ ನಾಲ್ಕು ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದಾರೆ ಅವರು. ಇನ್ನುಳಿದಂತೆ ಮನೋಹರ್‌ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್‌ ನಿತೇಶ್‌ ಸಂಭಾಷಣೆ ಬರೆದಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳು ಇಲ್ಲಿ ಕೆಲಸ ಮಾಡುತ್ತಿವೆ ಎಂಬುದು ರಾಮ್‌ ಪ್ರಿಯಾ ಅವರ ಮಾತು. ಈಗಾಗಲೇ ಹಾಡುಗಳ ಧ್ವನಿಮುದ್ರಣ ಕಾರ್ಯ ಮುಗಿದಿದ್ದು, ಬೆಂಗಳೂರು ಸುತ್ತಮುತ್ತ 45 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಮುಂದಿನ ಗುರುವಾರದಿಂದ ಚಿತ್ರಕ್ಕೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.