ವೈಶಿಷ್ಟ್ಯತೆಗಳ ನಡುವೆ ವಿಷ್ಣುಪ್ರಿಯ


Team Udayavani, Sep 5, 2019, 11:20 AM IST

Priya

“ಪಡ್ಡೇಹುಲಿ’ ಚಿತ್ರದ ಬಳಿಕ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರ ಸೆಟ್ಟೇರಲು ರೆಡಿಯಾಗುತ್ತಿದೆ. ಕೆಲ ದಿನಗಳ
ಹಿಂದಷ್ಟೇ ತಮ್ಮ ಪುತ್ರನ ನೂತನ ಚಿತ್ರಕ್ಕೆ “ವಿಷ್ಣುಪ್ರಿಯ’ ಎಂದು ಹೆಸರಿಟ್ಟಿದ್ದ ನಿರ್ಮಾಪಕ ಕೆ. ಮಂಜು, ಇದೀಗ ಚಿತ್ರದ ಇತರೆ ಕಲಾವಿದರು ಮತ್ತು ತಂತ್ರಜ್ಞರನ್ನು ಪರಿಚಯಿಸಿದ್ದಾರೆ.

ಇನ್ನು “ವಿಷ್ಣುಪ್ರಿಯ’ ಕೆ. ಮಂಜು ನಿರ್ಮಾಣದ 45ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಶ್ರೇಯಸ್‌ಗೆ ನಾಯಕಿಯಾಗಿ ಮಲೆಯಾಳಿ ಚೆಲುವೆ ಪ್ರಿಯಾ ಪ್ರಕಾಶ್‌ ವಾರಿಯರ್‌ ಜೋಡಿಯಾಗುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಸುಮಾರು ನಾಲ್ಕೈದು ಭಾಷೆಗಳಲ್ಲಿ 30ಕ್ಕೂ ಹೆಚ್ಚು ಚಿತ್ರಗಳು, ಸುಮಾರು 1200 ಕ್ಕೂ ಹೆಚ್ಚು ಆ್ಯಡ್‌ ಫಿಲಂಗಳಿಗೆ ಕೆಲಸ ಮಾಡಿರುವ ಅನುಭವವಿರುವ ಕೆ. ಪ್ರಕಾಶ್‌, “ವಿಷ್ಣುಪ್ರಿಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಕೆ. ಮಂಜು, “ವಿಷ್ಣುಪ್ರಿಯ ಅನ್ನೋದು ಹೃದಯಾಂತರಾಳದಿಂದ ಬಂದಂತಹ ಹೆಸರು. ಈ ಚಿತ್ರದಲ್ಲಿ ಪ್ರೀತಿ ಎಂದರೇನು ಎಂಬುದನ್ನು ಭಿನ್ನವಾಗಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಪೋಷಕರಿಗೆ ಮಕ್ಕಳು ಯಾವ ರೀತಿ ಗೌರವ ಕೊಡಬೇಕು, ಹಿರಿಯರಾದವರು ಯುವ ಪ್ರೇಮಿಗಳಿಗೆ ಹೇಗೆ ಬೆಂಬಲವಾಗಿ ನಿಲ್ಲಬೇಕು, ಎಂಬ ಹತ್ತಾರು ಸಂಗತಿಗಳು ಚಿತ್ರದಲ್ಲಿದೆ.

ಕೃತಕವಲ್ಲದ 90ರ ದಶಕದ ಪ್ರೀತಿಯನ್ನ ಚಿತ್ರದಲ್ಲಿ ನೋಡಬಹುದು. ಚಿತ್ರದ ಕಥೆಯಲ್ಲಿ ಸಂಬಂಧಗಳ ಮೌಲ್ಯಗಳು ಇರಲಿದೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಧಾರವಾಡದ ಸಿಂಧೂಶ್ರೀ ಎನ್ನುವ ಹುಡುಗಿಯ ಕಾದಂಬರಿಯನ್ನು ಈ ಚಿತ್ರದ ಮೂಲಕ ತೆರೆಮೇಲೆ
ತರುತ್ತಿದ್ದೇವೆ. ಸುಮಾರು ಮೂರು ಭಾಷೆಗಳಲ್ಲಿ ಚಿತ್ರವನ್ನು ತೆರೆಗೆ ತರುವ ಯೋಚನೆ ಇದೆ’ ಎನ್ನುವ ಮಾಹಿತಿ ನೀಡಿದರು.

“ವಿಷ್ಣುಪ್ರಿಯ’ ಚಿತ್ರದಲ್ಲಿ ನಾಯಕ ಶ್ರೇಯಸ್‌ ವಿಷ್ಣು ಎನ್ನುವ ಹೆಸರಿನ ಹುಡುಗನಾಗಿ, ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಾಯಕಿ ಪ್ರಿಯಾ ವಾರಿಯರ್‌, ಪ್ರಿಯ ಎನ್ನುವ ಹೆಸರಿನ ಸಂಕೀರ್ಣ ಮನಸ್ಥಿತಿಯ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ಸುಚೇಂದ್ರ ಪ್ರಸಾದ್‌, ಬಿರದಾರ್‌, ಅಚ್ಯುತ್‌ ಕುಮಾರ್‌, ಅಶ್ವಿ‌ನಿ ಗೌಡ, ನವೀನ್‌ ಪಡೀಲ್‌, ನಿಹಾಲ್‌ ಮುಂತಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ತೆಲುಗಿನಲ್ಲಿ ಹಲವು ಜನಪ್ರಿಯ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಗೋಪಿ ಸುಂದರ್‌ “ವಿಷ್ಣುಪ್ರಿಯ’ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಸಂಗೀತ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಡಾ. ವಿ ನಾಗೇಂದ್ರ ಪ್ರಸಾದ್‌ ಸಾಹಿತ್ಯ, ರವಿ ಶ್ರೀವತ್ಸ ಸಂಭಾಷಣೆ ಇದೆ. ಚಿತ್ರಕ್ಕೆ ವಿನೋದ್‌ ಭಾರತಿ ಛಾಯಾಗ್ರಹಣ, ಸುರೇಶ್‌ ಅರಸ್‌ ಸಂಕಲನವಿದೆ. ಚಿತ್ರದಲ್ಲಿ ಲವ್‌, ಸೆಂಟಿಮೆಂಟ್‌ ಜೊತೆಗೆ ಭರ್ಜರಿ ಆ್ಯಕ್ಷನ್‌ ದೃಶ್ಯಗಳು ಕೂಡ ಇರಲಿದ್ದು, ಜಾನಿ, ರವಿವರ್ಮ, ವಿನೋದ್‌ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿದ್ದಾರೆ. “ವಿಷ್ಣುಪ್ರಿಯ’ ಚಿತ್ರವನ್ನು
ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಮೊದಲಾದ ಕಡೆಗಳಲ್ಲಿ ಎರಡು ಹಂತದಲ್ಲಿ ಚಿತ್ರೀಕರಿಸಲು ನಿರ್ಮಾಪಕ ಕೆ. ಮಂಜು ಪ್ಲಾನ್‌ ಹಾಕಿಕೊಂಡಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.