“ಸೇಂಟ್‌ ಮಾರ್ಕ್ಸ್ ರಸ್ತೆ’ಯಲ್ಲಿ ಪ್ರಿಯಾಂಕಾ

ಮತ್ತೊಂದು ಮಹಿಳಾ ಪ್ರಧಾನ ಚಿತ್ರ

Team Udayavani, Nov 19, 2019, 6:03 AM IST

Saint-Marks-Road

ಸದ್ಯ ನಟಿ ಪ್ರಿಯಾಂಕಾ ಉಪೇಂದ್ರ ಸಾಲು ಸಾಲು ಮಹಿಳಾ ಪ್ರಧಾನ ಚಿತ್ರಗಳಲ್ಲಿ ಬಿಝಿಯಾಗುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ “ದೇವಕಿ’ ಚಿತ್ರದ ಮೂಲಕ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದ್ದ ಪ್ರಿಯಾಂಕಾ, ಈಗ ಅಂಥದ್ದೇ ಮತ್ತೊಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರೋದಕ್ಕೆ ತಯಾರಾಗುತ್ತಿದ್ದಾರೆ. ಅಂದಹಾಗೆ, ಪ್ರಿಯಾಂಕಾ ಉಪೇಂದ್ರ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಸೇಂಟ್‌ ಮಾರ್ಕ್ಸ್ ರಸ್ತೆ’ ಎಂದು ಹೆಸರಿಡಲಾಗಿದ್ದು, ಇದೀಗ ಈ ಚಿತ್ರದ ಫ‌ಸ್ಟ್‌ಲುಕ್‌ ಹೊರಬಿದ್ದಿದೆ.

ನಟಿ ಪ್ರಿಯಾಂಕಾ ಉಪೇಂದ್ರ ಬರ್ತ್‌ಡೇ ಪ್ರಯುಕ್ತ ನಟ ಕಂ ನಿರ್ದೇಶಕ ಉಪೇಂದ್ರ ದಂಪತಿಗಳ ಜೊತೆಗೂಡಿ ಚಿತ್ರತಂಡ “ಸೇಂಟ್‌ ಮಾರ್ಕ್ಸ್ ರಸ್ತೆ’ ಚಿತ್ರದ ಫ‌ಸ್ಟ್‌ಲುಕ್‌ ಹೊರತಂದಿದೆ. ಸದ್ಯ ಹೊರಬಂದಿರುವ “ಸೇಂಟ್‌ ಮಾರ್ಕ್ಸ್ ರಸ್ತೆ’ ಚಿತ್ರದ ಫ‌ಸ್ಟ್‌ಲುಕ್‌ ಒಂದಷ್ಟು ನೋಡುಗರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ಗೆ ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇನ್ನು “ಸೇಂಟ್‌ ಮಾರ್ಕ್ಸ್ ರಸ್ತೆ’ ಚಿತ್ರದ ಟೈಟಲ್‌ಗೆ “ಡೆತ್‌ ಎಂಡ್‌’ ಎಂಬ ಟ್ಯಾಗ್‌ ಲೈನ್‌ ಇದ್ದು, ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಚಿತ್ರ ತೆರೆಗೆ ಬರುತ್ತಿದೆ. ಕೆಲ ವರ್ಷಗಳ ಹಿಂದೆ ನಡೆದ ನೈಜ ಘಟನೆ ಆಧರಿಸಿ ಈ ಚಿತ್ರ ತಯಾರಾಗುತ್ತಿದೆ ಎನ್ನಲಾಗುತ್ತಿದ್ದು, ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ಮಹತ್‌ ರಾಘವೇಂದ್ರ, ಯಶಿಕಾ ಆನಂದ್‌, ಸರ ವೆಂಕಟೇಶ್‌, ಮಾ.ಕಾ.ಪಾ ಆನಂದ್‌, ಮನೋಬಾಲ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಭರತನ್‌ ಚಿತ್ರಗಳು’ ಲಾಂಛನದಡಿಯಲ್ಲಿ ಆರ್‌.ವಿ ಭರತನ್‌ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮ್ಯಾಗ್ವೆನ್‌ ನಿರ್ದೇಶನ ಮಾಡುತ್ತಿದ್ದಾರೆ. ಎಸ್‌. ತಮನ್‌ “ಸೇಂಟ್‌ ಮಾರ್ಕ್ಸ್ ರಸ್ತೆ’ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರತಂಡದ ಪ್ಲಾನ್‌ ಪ್ರಕಾರ ಮುಂದಿನ ವರ್ಷದ ಆರಂಭದಲ್ಲಿ “ಸೇಂಟ್‌ ಮಾರ್ಕ್ಸ್ ರಸ್ತೆ’ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.