ವರ್ಷಾರಂಭದಲ್ಲಿ ಪರಭಾಷೆಯದ್ದೇ “ದರ್ಬಾರ್‌’

ಬ್ಯಾಕ್‌ ಟು ಬ್ಯಾಕ್‌ ಸ್ಟಾರ್‌ ಸಿನ್ಮಾ - ಕನ್ನಡದಿಂದ ಯಾವುದೇ ಸ್ಟಾರ್‌ ಸಿನಿಮಾ ಇಲ್ಲ ..

Team Udayavani, Jan 5, 2020, 7:04 AM IST

durbar

ಹೊಸ ವರ್ಷ ಭರ್ಜರಿಯಾಗಿ ಎಂಟ್ರಿಕೊಟ್ಟಿದೆ. ಹೊಸ ವರ್ಷದಲ್ಲಿ ಸಾಕಷ್ಟು ಸ್ಟಾರ್‌ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲಿದೆ ಎಂಬುದು ನಿಮಗೆ ಗೊತ್ತಿದೆ. ಆದರೆ, ವರ್ಷಾರಂಭದಲ್ಲಿ, ಅದರಲ್ಲೂ ಮೊದಲು ತಿಂಗಳು (ಜನವರಿ)ಯಲ್ಲಿ ಕನ್ನಡ ಚಿತ್ರರಂಗದ ಯಾವುದೇ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಸಾಮಾನ್ಯವಾಗಿ ಹಬ್ಬ ಸಮಯದಲ್ಲಿ ಸಿನಿಮಾ ಬಿಡುಗಡೆ, ಮುಹೂರ್ತ ಜೋರಾಗಿರುತ್ತದೆ. ಆದರೆ, ಈ ಬಾರಿ ಸಂಕ್ರಾಂತಿಗೂ ಕನ್ನಡದಿಂದ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಯಾವುದೇ ಸಿನಿಮಾಗಳು ತೆರೆಗೆ ಬರುತ್ತಿಲ್ಲ.

ಆದರೆ, ಪರಭಾಷೆ ಮಾತ್ರ ಧೂಳೆಬ್ಬಿಸಲು ಹೊರಟಿದೆ. ತಮಿಳು, ತೆಲುಗಿನಿಂದ ಸಾಲು ಸಾಲು ಸ್ಟಾರ್‌ ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗುತ್ತಿವೆ. ರಜನಿಕಾಂತ್‌, ಮಹೇಶ್‌ ಬಾಬು, ಅಲ್ಲು ಅರ್ಜುನ್‌, ಧನುಶ್‌ … ಹೀಗೆ ತಮಿಳು, ತೆಲುಗು ಚಿತ್ರರಂಗದ ಸ್ಟಾರ್‌ ನಟರ ಬಹುನಿರೀಕ್ಷಿತ ಸಿನಿಮಾಗಳಷ್ಟೇ ಬಿಡುಗಡೆ ಯಾಗುತ್ತಿವೆಯೇ ಹೊರತು ಕನ್ನಡದಿಂದ ಯಾವ ಸ್ಟಾರ್‌ ಸಿನಿಮಾಗಳು ಕೂಡಾ ಬಿಡುಗಡೆಯಾಗುತ್ತಿಲ್ಲ. ಈ ಮೂಲಕ ವರ್ಷಾರಂಭದಲ್ಲಿ ಪರಭಾಷಾ ಸಿನಿಮಾಗಳ ಸದ್ದೇ ಜೋರಾಗಲಿದೆ.

ರಜನಿಕಾಂತ್‌ ಅಭಿನಯದ “ದರ್ಬಾರ್‌’ ಸಿನಿಮಾ ಮೂಲಕ ಪರಭಾಷೆ ಅಬ್ಬರ ಶುರುವಾಗಲಿದೆ. ಜನವರಿ 09ಕ್ಕೆ “ದರ್ಬಾರ್‌’, ಜನವರಿ 10ಕ್ಕೆ ಮಹೇಶ್‌ ನಟನೆಯ “ಸರಿಲೇರು ನೀಕೆವರು’, ಜನವರಿ 12ಕ್ಕೆ ಅಲ್ಲು ಅರ್ಜುನ್‌ ನಟನೆಯ “ಅಲಾ ವೈಕುಂಠಪುರಂಲೋ’ ಹಾಗೂ ಜನವರಿ 16ಕ್ಕೆ ಧನುಶ್‌ ಅಭಿನಯದ “ಪಟ್ಟಾಸ್‌’ ಚಿತ್ರಗಳು ಮುಖ್ಯವಾಗಿ ಬಿಡುಗಡೆಯಾಗುತ್ತಿವೆ. ಈ ಎಲ್ಲಾ ಚಿತ್ರಗಳು ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿರುವುದರಿಂದ ಬಹು ತೇಕ ಚಿತ್ರಮಂದಿರಗಳನ್ನು ಈ ಎಲ್ಲಾ ಚಿತ್ರಗಳು ಆವರಿಸಿಕೊಳ್ಳಲಿದೆ.

ಹಾಗಾದರೆ ಕನ್ನಡದಿಂದ ಸ್ಟಾರ್‌ ನಟರ ಚಿತ್ರಗಳು ಯಾವಾಗಿನಿಂದ ಬಿಡುಗಡೆಯಾಗಲಿವೆ ಎಂದರೆ ಫೆಬ್ರವರಿಯಿಂದ ಎನ್ನಬಹುದು. ಶಿವರಾಜಕುಮಾರ್‌ ಅವರ “ದ್ರೋಣ’ ಫೆಬ್ರವರಿಯಲ್ಲಿ ಬರುವ ಸಾಧ್ಯತೆ ಇದೆ. ಧ್ರುವ “ಪೊಗರು’ ಮಾರ್ಚ್‌, ಪುನೀತ್‌ “ಯುವರತ್ನ’ ಹಾಗೂ ಜಗ್ಗೇಶ್‌ “ತೋತಾಪುರಿ’ ಏಪ್ರಿಲ್‌ನಲ್ಲಿ ಬರುವ ಸಾಧ್ಯತೆ ಇದೆ. ಈ ಮೂಲಕ ಅಭಿಮಾನಿಗಳಿಗೆ ಸಿನಿಹಬ್ಬವಾಗಲಿದೆ. ಸದ್ಯ ಕನ್ನಡದಲ್ಲಿ ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಮತ್ತು ದರ್ಶನ್‌ ಅವರ “ಒಡೆಯ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿವೆ.

ರಜನಿ “ದರ್ಬಾರ್‌’ಗೆ ವಿರೋಧ”: ರಜನಿಕಾಂತ್‌ ಅಭಿನಯದ “ದರ್ಬಾರ್‌’ ಚಿತ್ರ ಕನ್ನಡ ಹೊರತಾಗಿ ಬೇರೆ ಭಾಷೆಗಳಿಗೆ ಡಬ್‌ ಆಗಿ ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರ ಕನ್ನಡಕ್ಕೆ ಡಬ್‌ ಆಗದೇ, ತಮಿಳು, ತೆಲುಗು, ಹಿಂದಿಯಲ್ಲಿ ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವುದನ್ನು ಕನ್ನಡಪರ ಸಂಘಟನೆಯಾದ ಕರ್ನಾಟಕ ರಣಧೀರ ಪಡೆ ವಿರೋಧಿಸಿದೆ. “ದರ್ಬಾರ್‌’ ಕರ್ನಾಟಕದಲ್ಲಿ ಬಿಡುಗಡೆಯಾಗಬೇಕಾದರೆ ಇಲ್ಲಿ ಡಬ್‌ ಆಗಿಯೇ ಬರಬೇಕು, ಇಲ್ಲವಾದರೆ ಇಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದೆ.

ಒಂದು ವೇಳೆ ಬಿಡುಗಡೆಯಾದರೆ ಅದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಸಂಘಟನೆ ಹೇಳಿದೆ. ನರ್ತಕಿ ಚಿತ್ರಮಂದಿರದಲ್ಲಿ “ದರ್ಬಾರ್‌’ ಬಿಡುಗಡೆಯಾಗುತ್ತಿರುವುದನ್ನು ಕೂಡಾ ಸಂಘಟನೆ ವಿರೋಧಿಸಿದ್ದು, ಯಾವುದೇ ಕಾರಣಕ್ಕೂ ಕನ್ನಡ ಸೆಂಟರ್‌ ಆದ ನರ್ತಕಿಯಲ್ಲಿ ಪರಭಾಷಾ ಚಿತ್ರಕ್ಕೆ ಅವಕಾಶ ಕೊಡಬಾರದು. ಒಂದು ವೇಳೆ ಪ್ರದರ್ಶನಕ್ಕೆ ಅವಕಾಶ ಕೊಟ್ಟರೆ ಚಿತ್ರಮಂದಿರಕ್ಕೆ ನುಗ್ಗಿ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ಕೊಟ್ಟಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.