‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ನಿರ್ಮಾಪಕ ಅರ್ಜುನ್ ಮಂಜುನಾಥ್ ಕೋವಿಡ್ಗೆ ಬಲಿ
Team Udayavani, Apr 18, 2021, 8:49 PM IST
ಬೆಂಗಳೂರು : ರಾಜ್ಯಾದ್ಯಂತ ಮಹಾಮಾರಿ ಕೋವಿಡ್ ತನ್ನ ಅಟ್ಟಹಾಸ ಮುಂದುವರೆಸಿದ್ದು, ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳ ನಿರ್ಮಾಪಕ ಮಂಜುನಾಥ್ ಇಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮಂಜುನಾಥ್ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆ ಫಲಿಸದೆ ಇಂದು ಅವರು ಸಾವನ್ನಪ್ಪಿದ್ದಾರೆ.
ಮಂಜುನಾಥ್ ಅವರು ಸದ್ಯ ‘0% ಲವ್’ ಸಿನಿಮಾ ನಿರ್ಮಾಣ ಮಾಡಿ ನಟಿಸುತ್ತಿದ್ದರು. ದುರಾದೃಷ್ಟವೆಂಬಂತೆ ಈ ಸಿನಿಮಾ ತೆರೆಗೆ ಬರುವ ಮುನ್ನವೆ ಅವರು ಕಣ್ಣು ಮುಚ್ಚಿದ್ದಾರೆ.
ಇನ್ನು ರಾಜ್ಯದಲ್ಲಿ ಪ್ರತಿನಿತ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಮಿತಿಮೀರಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 19,067 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 12793 ಕೋವಿಡ್ ಸೋಂಕುಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ