ಮೃತ ಫೈಟರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ನಿರ್ಮಾಪಕ ಗುರು ದೇಶಪಾಂಡೆ
Team Udayavani, Aug 10, 2021, 9:40 PM IST
ಬೆಂಗಳೂರು : ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಮೃತ ಪಟ್ಟ ಫೈಟರ್ ವಿವೇಕ್ ಅವರ ಕುಟುಂಬಕ್ಕೆ ನಿರ್ಮಾಪಕ ಗುರು ದೇಶಪಾಂಡೆ ಅವರು 10 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಘಟನೆ ಬಳಿಕ ನಾಪತ್ತೆಯಾಗಿರುವ ಗುರು ದೇಶಪಾಂಡೆ, ಮೃತ ವಿವೇಕ್ ಅವರ ಚಿಕ್ಕಪ್ಪ ಗೋಪಿ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಪರಿಹಾರವಾಗಿ 10 ಲಕ್ಷ ಹಣ ನೀಡುವುದಾಗಿ ಹೇಳಿದ್ದಾರಂತೆ.
ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಗೋಪಿ, ”ಫೈಟ್ ಯೂನಿಯನ್ ನವರು ಕರೆ ಮಾಡಿ ಹತ್ತು ಲಕ್ಷ ಪರಿಹಾರ ಸಿಗುತ್ತದೆ. ಈಗ ಏನು ಕೆಲಸ ಆಗಬೇಕು ಅದು ನೋಡಿ. ಘಟನೆಯಲ್ಲಿ ಯಾರದ್ದೂ ತಪ್ಪಿಲ್ಲ, ಗುರು ಅವರದ್ದೂ ತಪ್ಪಿಲ್ಲ. ಈಗಾಗಲೇ ಪ್ರಕರಣ ದಾಖಲಾಗಿದೆ ತಪ್ಪು ಯಾರದ್ದಿರುತ್ತದೆಯೋ ಅವರಿಗೆ ಶಿಕ್ಷೆ ಆಗಲಿದೆ” ಎಂದು ಹೇಳಿದ್ದಾರೆ” ಎಂದಿದ್ದಾರೆ.
ಇನ್ನು ನಟ ಅಜಯ್ ರಾವ್, ರಚಿತಾ ರಾಮ್ ನಟಿಸುತ್ತಿರುವ ‘ಲವ್ ಯು ರಚ್ಚು’ ಸಿನಿಮಾದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದು ಒಬ್ಬ ವ್ಯಕ್ತಿ ಗಾಯಾಳುವಾಗಿದ್ದಾನೆ.
ಘಟನೆ ಕುರಿತು ದೂರು ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು, ಸಾಹಸ ನಿರ್ದೇಶಕ , ಸಿನಿಮಾ ನಿರ್ದೇಶ ಹಾಗೂ ಕ್ರೈನ್ ಡ್ರೈವರ್ ನನ್ನು ಬಂಧಿಸಿದ್ದಾರೆ. ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ