ರಕ್ಷಿತ್ ಬಗ್ಗೆ ಈ ರೀತಿ ಸುದ್ದಿ ಸಲ್ಲದು : ಸುದ್ದಿ ವಾಹಿನಿ ವಿರುದ್ಧ ನಿರ್ಮಾಪಕ ಪುಷ್ಕರ ಗರಂ
Team Udayavani, Jul 2, 2021, 1:46 PM IST
ಬೆಂಗಳೂರು:ತಮ್ಮ ಹಾಗೂ ರಕ್ಷಿತ್ ಶೆಟ್ಟಿ ನಡುವಿನ ಸ್ನೇಹ ಬಿರುಕು ಮೂಡಿದೆ. ರಕ್ಷಿತ್ ಶೆಟ್ಟಿಯಿಂದ ತಮಗೆ ಆರ್ಥಿಕ ನಷ್ಟವುಂಟಾಗಿದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಿರುವ ಸುದ್ದಿಗೆ ನಿರ್ಮಾಪಕ ಪುಷ್ಕರ ಮಲ್ಲಿಕಾರ್ಜುನಯ್ಯ ಖಡಕ್ ಉತ್ತರ ನೀಡಿದ್ದಾರೆ. ಹಾಗೂ ರಕ್ಷಿತ್ ಶೆಟ್ಟಿ ವಿರುದ್ಧ ತೇಜೋವಧೆಯ ಪದ ಬಳಕೆಗೆ ಗರಂ ಆಗಿದ್ದಾರೆ.
ವಾಹಿನಿ ವಿರುದ್ಧ ಪತ್ರ ಬರೆದು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಪುಷ್ಕರ, ನಾವು ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗೋದು’ ಎಂಬ ಅಡಿ ಬರಹದೊಂದಿಗೆ ದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ.
ಪುಷ್ಕರ ಪತ್ರ :
‘ ನಮ್ಮ ಚಿತ್ರರಂಗಕ್ಕೆ ಇದು ಪರೀಕ್ಷೆಯ ಕಾಲ. ಇಂತಹ ಸಂದರ್ಭದಲ್ಲಿ ರಕ್ಷಿತ್ ಬಗ್ಗೆ ಪ್ರತಿಷ್ಠಿತ ಸುದ್ದಿವಾಹಿನಿಯಲ್ಲಿ ಈ ರೀತಿ ಪ್ರಸಾರ ಆಗಿರುವುದು ಆಘಾತದ ಸಂಗತಿ’.
‘ತಮ್ಮ ಪರಿಶ್ರಮದಿಂದ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿರುವ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಈ ರೀತಿ ಸುದ್ದಿ ಮಾಡುವುದು ಸರಿಯಲ್ಲ. ಸುದ್ದಿವಾಹಿನಿಯ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಯಾವುದು ಸತ್ಯ ಎಂದು ಸ್ಪಷ್ಟಪಡಿಸಲು ನಾವೆಲ್ಲರೂ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕಾಗಿ ಬಂದಿರುವುದು ದುರದೃಷ್ಟಕರ ಸಂಗತಿ’.
‘ಗೋಧಿಬಣ್ಣ ಸಾಧಾರಣ ಮೈಕಟ್ಟು ಚಿತ್ರದಿಂದ ಅವನೇ ಶ್ರೀಮನ್ನಾರಾಯಣ ಸಿನಿಮಾದವರೆಗೆ ನಾನು ಮತ್ತು ರಕ್ಷಿತ್ ಜೊತೆಯಾಗಿ ಸಾಗಿ ಬಂದಿದ್ದೇವೆ. ನನ್ನ ಸಿನಿಮಾ ಜರ್ನಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಅವನೇ ಶ್ರೀಮನ್ನಾರಾಯಣ ಬ್ಯುಸಿನೆಸ್ ಬಗ್ಗೆ ಅನೇಕ ಊಹಾಪೋಹಗಳಿವೆ. ಅದು ನನ್ನ ವೈಯಕ್ತಿಕ. ಲಾಭ-ನಷ್ಟ ಏನೇ ಇದ್ದರೂ ಉತ್ಸಾಹದಲ್ಲಿ ನಾವು ಒಂದು ತಂಡದ ರೀತಿ ಕೆಲಸ ಮಾಡಿದ್ದೇವೆ. ಮಂದೆಯೂ ಹಾಗೆಯೇ ಮಾಡಲಿದ್ದೇವೆ. ಒಂದು ಸಿನಿಮಾದ ಫಲಿತಾಂಶದಿಂದ ನಮಗೆ ಸಿನಿಮಾದ ಮೇಲಿರುವ ಒಲವು ಕಡಿಮೆ ಆಗುವುದಿಲ್ಲ. ಒಂದು ಕುಟುಂಬದ ರೀತಿ ನಮ್ಮ ನಡುವೆ ಏನೇ ಹೊಂದಾಣಿಕೆ ಇರಬಹುದು. ಅದನ್ನು ಸಾರ್ವಜನಿಕವಾಗಿ ನಾವು ಸ್ಪಷ್ಟಪಡಿಸಬೇಕಿಲ್ಲ’.
‘ರಕ್ಷಿತ್ ಅವರಂತಹ ವ್ಯಕ್ತಿ ಬಗ್ಗೆ ಯಾವುದೇ ಸುದ್ದಿ ಸಂಸ್ಥೆ ಈ ರೀತಿಯ ವರದಿ ಪ್ರಸಾರ ಮಾಡಿದರೆ ನಾನು ವಿರೋಧಿಸುತ್ತೇನೆ. ಎಲ್ಲ ಮಾಧ್ಯಮಕ್ಕೂ ಸಾಕಷ್ಟು ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿ ಇದೆ. ನಾವು ಬೇರೆಯವರಿಗೆ ಮರ್ಯಾದೆ ಕೊಟ್ಟರೆ ಮಾತ್ರ ನಮಗೆ ಮರ್ಯಾದೆ ಸಿಗುತ್ತದೆ. ಮತ್ತೆ ಭವಿಷ್ಯದಲ್ಲಿ ಈ ರೀತಿ ಮಾಡಬಾರದು ಎಂದು ವಿನಂತಿಸಿಕೊಳ್ಳುತ್ತೇನೆಂದು’ ಪುಷ್ಕರ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ