ನಿರ್ಮಾಪಕ ಉಮಾಪತಿ ಮಾತು : 100% ಸೀಟು ಭರ್ತಿಗೆ ಅವಕಾಶ ಸಿಕ್ಕ ನಂತರವಷ್ಟೇ ರಾಬರ್ಟ್
Team Udayavani, Nov 30, 2020, 12:23 PM IST
ಸ್ಟಾರ್ ಸಿನಿಮಾಗಳು ಯಾವಾಗ ರಿಲೀಸ್… ಹೀಗೊಂದು ಪ್ರಶ್ನೆಯನ್ನು ಸಿನಿಪ್ರೇಮಿಗಳುಕೇಳುತ್ತಲೇ ಇದ್ದರು. ಆದರೆ, ಅದಕ್ಕೆ ಈವರೆಗೂ ಸರಿಯಾದ ಉತ್ತರ ಸಿಕ್ಕಿಲ್ಲ. ಅದರಲ್ಲೂ ದರ್ಶನ್ ಅಭಿಮಾನಿಗಳು “ರಾಬರ್ಟ್’ ಚಿತ್ರದ ಮೇಲೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಿಸಿಕೊಂಡು ಸಿನಿಮಾ ಬಿಡುಗಡೆಗೆ ಎದುರುನೋಡುತ್ತಲೇ ಇದ್ದಾರೆ. ಆದರೆ, ಚಿತ್ರ ಬಿಡುಗಡೆ ಯಾವಾಗ ಎಂದರೆ ಅದಕ್ಕೆ ಉತ್ತರ ಸದ್ಯಕ್ಕಿಲ್ಲ.
ಹೌದು, ಸದ್ಯಕ್ಕೆ “ರಾಬರ್ಟ್’ಚಿತ್ರ ಬಿಡುಗಡೆಯಾಗುವುದಿಲ್ಲ. ಅದಕ್ಕೆಕಾರಣ ಚಿತ್ರ ಮಂದಿರಗಳ ಶೇ 50 ಸೀಟು ಭರ್ತಿ ನಿಯಮ. ಈ ನಿಯಮ ಸಡಿಲವಾಗಿ ಶೇಕಡಾ ನೂರಕ್ಕೆ ನೂರು ಸೀಟು ಭರ್ತಿಗೆ ಅವಕಾಶ ಸಿಗುವವರೆಗೆ “ರಾಬರ್ಟ್’ ರಿಲೀಸ್ ಮಾಡದಿರಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಮಾತನಾಡುವ “ರಾಬರ್ಟ್’ ಚಿತ್ರದನಿರ್ಮಾಪಕ ಉಮಾಪತಿ, “ಸದ್ಯಕ್ಕೆ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇನಿರ್ಣಯಕ್ಕೆ ಬಂದಿಲ್ಲ. ಶೇ 100ರಷ್ಟು ಸೀಟು ಭರ್ತಿಗೆ ಅವಕಾಶ ಸಿಕ್ಕ ನಂತರವಷ್ಟೇ ಸಿನಿಮಾ ಬಿಡುಗಡೆಯ ಬಗ್ಗೆ ನಿರ್ಧರಿಸುತ್ತೇವೆ. ಅದಕ್ಕಿಂತ ಮುಂಚೆ ಚಿತ್ರದ ರಿಲೀಸ್ ದಿನಾಂಕ ನಿರ್ಧರಿಸೋದು ಸರಿಯಲ್ಲ’ ಎನ್ನುತ್ತಾರೆ. ಅಲ್ಲಿಗೆ 2020ರಲ್ಲಿ “ರಾಬರ್ಟ್’ ತೆರೆಕಾಣೋದಿಲ್ಲ ಎಂದಂತಾಯಿತು.
ಸದ್ಯಕ್ಕಿಲ್ಲ ಮದಕರಿ :
“ರಾಬರ್ಟ್’ ಚಿತ್ರದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ “ರಾಜವೀರ ಮದಕರಿನಾಯಕ’ ಚಿತ್ರದಲ್ಲಿ ಅಭಿನಯಿಸಲಿದ್ದು, ಕೋವಿಡ್ ಲಾಕ್ಡೌನ್ ನಿಂದಾಗಿ ಈ ಚಿತ್ರದ ಕೆಲಸಗಳು ಅಂದುಕೊಂಡಂತೆ ಶುರುವಾಗಿರಲಿಲ್ಲ. ಆದರೆ ಲಾಕ್ಡೌನ್ ತೆರವಾದ ನಂತರವೂ ಚಿತ್ರ ಯಾವಾಗ ಚಿತ್ರೀಕರಣ ಆರಂಭಿಸಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾತನಾಡಿರುವ ಚಿತ್ರದ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು, “ಸಿನಿಮಾದ ಒಂದಷ್ಟುಕೆಲಸಗಳು ಶುರುವಾಗಿತ್ತಾದರೂ, ಆ ನಂತರ ಶುರುವಾದಕೊರೊನಾ ಲಾಕ್ಡೌನ್ನಿಂದಾಗಿ ಕೆಲಸ ಅರ್ಧಕ್ಕೆ ನಿಂತಿದೆ. ಈಗ ಮತ್ತೆ ಸಿನಿಮಾದಕೆಲಸಗಳು ಶುರುವಾಗಬೇಕಿದೆ. ಆದರೆ ಸದ್ಯದ ಮಟ್ಟಿಗೆ ಯಾವಾಗಿನಿಂದ ಶುರುವಾಗುತ್ತದೆ ಅನ್ನೋದು ಸ್ಪಷ್ಟವಿಲ್ಲ’ ಎಂದಿದ್ದಾರೆ. ಸದ್ಯ ದರ್ಶನ್ ತಮ್ಮ ಸ್ನೇಹಿತರ ಜೊತೆ ಜಾಲಿ ಟ್ರಿಪ್ ಹೋಗುತ್ತಾ, ಖುಷಿಯಾಗಿದ್ದಾರೆ.ಕೆಲ ದಿನಗಳ ಹಿಂದಷ್ಟೇ ತಮ್ಮ ಸ್ನೇಹಿತ ಸಂದೇಶ್ ಅವರ ಹೋಟೆಲ್ನಲ್ಲಿಕೇಕ್ ತಯಾರಿಸುವಲ್ಲಿ ನಿರತರಾಗಿದ್ದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ.
ಇದನ್ನೂ ಓದಿ : ಗ್ರಾ.ಪಂ ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ನಿಗದಿ: ಎರಡು ಹಂತಗಳಲ್ಲಿ ನಡೆಯಲಿದೆ ಮತದಾನ
ಸದ್ಯಕ್ಕೆ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ನಿರ್ಣಯಕ್ಕೆಬಂದಿಲ್ಲ. ಶೇ 100ರಷ್ಟು ಸೀಟುಭರ್ತಿಗೆ ಅವಕಾಶ ಸಿಕ್ಕ ನಂತರವಷ್ಟೇ ಸಿನಿಮಾ ಬಿಡುಗಡೆಯ ಬಗ್ಗೆ ನಿರ್ಧರಿಸುತ್ತೇವೆ. – ಉಮಾಪತಿ ಶ್ರೀನಿವಾಸ್ ಗೌಡ, ನಿರ್ಮಾಪಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ