ಸೆನ್ಸಾರ್‌ ಮಂಡಳಿ ವಿರುದ್ಧ ನಿರ್ಮಾಪಕರ ಪ್ರತಿಭಟನೆ


Team Udayavani, Jul 26, 2018, 11:16 AM IST

censor11.jpg

“ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಅನ್ಯಾಯವಾಗುತ್ತಿದೆ, ಅಗತ್ಯವಿರದಿದ್ದರೂ ಕೆಲ ಚಿತ್ರಗಳಿಗೆ “ಎ’ ಪ್ರಮಾಣ ಪತ್ರ ನೀಡುವ ಮೂಲಕ, ಹೊಸ ನಿರ್ಮಾಪಕರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ, ಸೆನ್ಸಾರ್‌ ಮಂಡಳಿಯ ನಡೆಯಿಂದಾಗಿ ವ್ಯಾಪಾರ, ವಹಿವಾಟಕ್ಕೂ ಸಮಸ್ಯೆ ಎದುರಾಗಿದೆ….’

– ಹೀಗೆ ದೂರುವ ಮೂಲಕ ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟಿಸಿದ್ದು ಕನ್ನಡ ಚಿತ್ರರಂಗದ ಹಲವು ನಿರ್ಮಾಪಕ, ನಿರ್ದೇಶಕರು. ಇಷ್ಟಕ್ಕೂ ಕೆಲ ನಿರ್ಮಾಪಕ, ನಿರ್ದೇಶಕರು ಸೆನ್ಸಾರ್‌ ಮಂಡಳಿ ವಿರುದ್ಧ ಪ್ರತಿಭಟನೆಗಿಳಿಯಲು ಮುಖ್ಯ ಕಾರಣ, ಸೆನ್ಸಾರ್‌ ಮಂಡಳಿಯ ನಡೆ.

ಹೌದು, ಸೆನ್ಸಾರ್‌ ಮಂಡಳಿಯು ಉದ್ಯಮಕ್ಕೆ ಬೇಸರ ತರಿಸಿದೆ, ನಿಗದಿತ ವೇಳೆಗೆ ಚಿತ್ರಗಳನ್ನು ವೀಕ್ಷಿಸಿ, ಪ್ರಮಾಣ ಪತ್ರ ಕೊಡುತ್ತಿಲ್ಲ. ಅಗತ್ಯ ಇರದಿದ್ದರೂ, ಕತ್ತರಿ ಹಾಕಬೇಕು ಎಂಬ ಸೂಚನೆ ಕೊಡುವುದಲ್ಲದೆ, ಕತ್ತರಿ ಹಾಕಲು ಒಪ್ಪದ ಚಿತ್ರಗಳಿಗೆ ‘ಎ’ ಪ್ರಮಾಣ ಪತ್ರ ಕೊಡುತ್ತಿದೆ. ಇದರಿಂದ ಹೊಸ ನಿರ್ಮಾಪಕರು, ನಿರ್ದೇಶಕರು ಕಷ್ಟ ಎದುರಿಸಬೇಕಾಗಿದೆ ಎಂಬುದು ಪ್ರತಿಭಟನಾಕಾರರ ಆರೋಪ.

ಸೆನ್ಸಾರ್‌ ಮಂಡಳಿಯ ನಿಧಾನಗತಿಯಿಂದಾಗಿ, ಚಿತ್ರಗಳಿಗೆ ಸೆನ್ಸಾರ್‌ ಬೇಗ ಆಗುತ್ತಿಲ್ಲ. ಇದರಿಂದ ಚಿತ್ರಗಳನ್ನು ಸರಿಯಾದ ಸಮಯಕ್ಕೆ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಸಾಲ ಮಾಡಿ ಚಿತ್ರ ನಿರ್ಮಿಸಿರುವ ನಿರ್ಮಾಪಕರು ಬಡ್ಡಿ ಕಟ್ಟಲಾಗದೆ ಒದ್ದಾಡುವಂತಾಗಿದೆ. ಸೆನ್ಸಾರ್‌ ಮಂಡಳಿ “ಎ’ ಪ್ರಮಾಣ ಪತ್ರ ಕೊಡುವುದರಿಂದ ಸಬ್ಸಿಡಿಗೆ, ಸ್ಯಾಟಲೈಟ್ಸ್‌ ವ್ಯಾಪಾರ ವಹಿವಾಟಕ್ಕೆ ಅಡ್ಡಿಯಾಗುತ್ತಿದೆ.

ಇದೆಲ್ಲದರ ಜೊತೆಗೆ ಸೆನ್ಸಾರ್‌ ಮಂಡಳಿ ನಿರ್ಮಾಪಕ, ನಿರ್ದೇಶಕರನ್ನು ಅಗೌರವದಿಂದ ನೋಡಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದವರು ನಿರ್ಮಾಪಕರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು. “ರವಿಹಿಸ್ಟರಿ’, “ಆದಿಪುರಾಣ’ ಮತ್ತು “ಮೂರ್ಕಲ್‌ ಎಸ್ಟೇಟ್‌’ ಸೇರಿದಂತೆ ಅನೇಕ ಚಿತ್ರಗಳಿಗೆ “ಎ’ ಪ್ರಮಾಣ ಪತ್ರ ಕೊಡಲಾಗಿದ್ದು, ಅಗತ್ಯವಿರದ ದೃಶ್ಯಗಳಿಗೆ ಕತ್ತರಿ ಹಾಕಬೇಕು,

ಇಲ್ಲವಾದಲ್ಲಿ “ಎ’ ಪ್ರಮಾಣ ಪತ್ರಕೊಡುವುದಾಗಿ ಸೆನ್ಸಾರ್‌ ಮಂಡಳಿ ಅಧಿಕಾರಿಗಳು ಸೂಚಿಸುವ ಮೂಲಕ ನಿರ್ಮಾಪಕರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬ ಆರೋಪ ನಿರ್ಮಾಪಕರದು. ಅಂದಹಾಗೆ, ಪ್ರತಿಭಟನೆಯಲ್ಲಿ ನಿರ್ಮಾಪಕರಾದ ಕಾರ್ತಿಕ್‌, ಶಮಂತ್‌, ಕುಮಾರ್‌ ಭದ್ರಾವತಿ ಸೇರಿದಂತೆ ಅನೇಕರು ಪಾಲ್ಗೊಂಡು, ಸೆನ್ಸಾರ್‌ ಮಂಡಳಿ ವರ್ತನೆ ವಿರುದ್ಧ ಘೋಷಣೆ ಕೂಗಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.