‘ಹ್ಯಾಪಿಲಿ ಮ್ಯಾರೀಡ್‌’ ಸ್ಟೋರಿ: ಪೃಥ್ವಿ ಅಂಬಾರ್‌-ಮಾನ್ವಿತಾ ಕಾಮತ್‌ ಜೋಡಿಯ ಹೊಸ ಚಿತ್ರ


Team Udayavani, Sep 2, 2021, 3:36 PM IST

‘ಹ್ಯಾಪಿಲಿ ಮ್ಯಾರೀಡ್‌’ ಸ್ಟೋರಿ: ಪೃಥ್ವಿ ಅಂಬಾರ್‌-ಮಾನ್ವಿತಾ ಕಾಮತ್‌ ಜೋಡಿಯ ಹೊಸ ಚಿತ್ರ

“ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಹಾಗೂ “ಟಗರು’ ಪುಟ್ಟಿ ಮಾನ್ವಿತಾ ಕಾಮತ್‌ ಮೊದಲ ಬಾರಿಗೆ ತೆರೆಮೇಲೆ ಹೊಸ ಚಿತ್ರದಲ್ಲಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ “ಹ್ಯಾಪಿಲಿ ಮ್ಯಾರೀಡ್‌’ ಎಂದು ಹೆಸರಿಡಲಾಗಿದೆ.

ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅಭಿನಯದ “ಲೈಫ್ ಈಸ್‌ ಬ್ಯುಟಿಫ‌ುಲ್’ ಚಿತ್ರಕ್ಕೆ ನಿರ್ದೇಶನ ಮಾಡಿರುವ ಅರುಣ್‌ ಕುಮಾರ್‌. ಎಂ ಮತ್ತು ಸಬು ಅಲೋಷಿಯಸ್‌ ಜಂಟಿಯಾಗಿ ನಿರ್ದೇಶನ ಮಾಡುತ್ತಿರುವ “ಹ್ಯಾಪಿಲಿ ಮ್ಯಾರೀಡ್‌’ ಚಿತ್ರಕ್ಕೆ “ಫ್ರೈಡೇ ಫಿಲಂಸ್‌’ ಬ್ಯಾನರ್‌ನಲ್ಲಿ ಲೋಹಿತ್‌ ಹೆಚ್‌. ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

“ಸಿಲ್ವರ್‌ಟ್ರೈಲ್‌ ಇಂಟರ್‌ನ್ಯಾಶನಲ್‌’ ಮತ್ತು “ಟಿನಿ ಹ್ಯಾಂಡ್ಸ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ “ಹ್ಯಾಪಿಲಿ ಮ್ಯಾರೀಡ್‌’ಗೆ ಬಿ. ಜಿ ಅರುಣ್‌, ಜೋಸ್‌ಕುಟ್ಟಿ ಮದತ್ತಿಲ್‌ ಮತ್ತು ರಂಜಿತ್‌ ಮನಂಬರಕ್ಕಟ್‌ ಸಹ ನಿರ್ಮಾಣವಿದೆ.

ಇದನ್ನೂ ಓದಿ:ಬಾಲಿವುಡ್‌ ನಟಿ ಕಿಯಾರಾ ಅಡ್ವಾಣಿ ಫೋಟೋ ಗ್ಯಾಲರಿ

ಅತಿಯಾಗಿ ಪ್ರೀತಿಸಿ ಮದುವೆಯಾದ ಪ್ರೇಮಿಗಳ ಧೋರಣೆ ಮತ್ತು ಗುಣಗಳಿಂದ ಸಂಬಂಧಗಳು ಹೇಗೆ ಒಡೆದು ಹೋಗುತ್ತದೆ ಎನ್ನುವುದರ ಸುತ್ತ ಚಿತ್ರ ಸಾಗಲಿದ್ದು, ಲವ್‌ಕಂ ಫ್ಯಾಮಿಲಿ ಥ್ರಿಲ್ಲರ್‌ ಶೈಲಿಯಲ್ಲಿ “ಹ್ಯಾಪಿಲಿ ಮ್ಯಾರೀಡ್‌’ ಚಿತ್ರ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬರುವ ಒಂದಷ್ಟು ವಿಭಿನ್ನ ಪಾತ್ರಗಳು ಚಿತ್ರದಕಥೆಗೆ ತಿರುವು ನೀಡಲಿದ್ದು, ಮನುಷ್ಯನಲ್ಲಿರುವ ಒಳಿತು-ಕೆಡುಕುಗಳನ್ನು ತೆರೆದಿಡುತ್ತಾ ಸಾಗುತ್ತದೆ.

ಮನೋ ವೈಜ್ಞಾನಿಕ ಆಟದಲ್ಲಿ ಮುಂದೇನು ಎನ್ನುವಂತ ಸನ್ನಿವೇಶಗಳು ನೋಡುಗನಿಗೆಕುತೂಹಲ ಹುಟ್ಟಿಸುತ್ತದೆ. ಒಂದು ಮಾಮೂಲಿ ಜಗಳ ತಾರಕಕ್ಕೆ ಹೋದಾಗ ಏನಾಗುತ್ತದೆ ಎಂಬುದನ್ನು ತೋರಿಸುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ ಎಂದು ಕಥಾಹಂದರದ ವಿವರಣೆ ನೀಡುತ್ತದೆ ಚಿತ್ರತಂಡ.

ಇನ್ನು “ಹ್ಯಾಪಿಲಿ ಮ್ಯಾರೀಡ್‌’ ಚಿತ್ರದಲ್ಲಿ ಪೃಥ್ವಿ ಅಂಬಾರ್‌ ಹಾಗೂ ಮಾನ್ವಿತಾ ಕಾಮತ್‌ ಅವರೊಂದಿಗೆ ಧರ್ಮಣ್ಣ ಕಡೂರ್‌, ಶ್ರೀಜಿತ್‌ ರವಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಚಿತ್ರದ ಚಿತ್ರೀಕರಣ ಶುರು ಮಾಡಿರುವ ಚಿತ್ರತಂಡ, ಬೆಂಗಳೂರು ಸುತ್ತಮುತ್ತ ಸುಮಾರು ಎರಡು ವಾರಗಳ ಚಿತ್ರೀಕರಣ ಮುಗಿಸಿದೆ. ಉಳಿದಂತೆ “ಹ್ಯಾಪಿಲಿ ಮ್ಯಾರೀಡ್‌’ ಚಿತ್ರದಲ್ಲಿ ಹಾಡುಗಳಿಗೆ ಅವಕಾಶ ಇರುವುದಿಲ್ಲವಂತೆ.

ಚಿತ್ರಕ್ಕೆ ಜಿತಿನ್‌ ದಾಸ್‌ ಛಾಯಾಗ್ರಹಣ, ಎಂ.ಜೆ ವಿನಯನ್‌ ಸಂಕಲನವಿದೆ. ಇತ್ತೀಚೆಗೆ “ಹ್ಯಾಪಿಲಿ ಮ್ಯಾರೀಡ್‌’ ಚಿತ್ರದ ಮೊದಲ ಮೋಶನ್‌ ಪೋಸ್ಟರ್‌ ಅನ್ನು ಕ್ರೇಜಿಸ್ಟಾರ್‌ ರವಿಚಂದ್ರನ್‌ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.