ಸಿಹಿಯಾಗಿದೆ ‘ಶುಗರ್‌ ಲೆಸ್‌’ ಟ್ರೇಲರ್‌: ಜುಲೈ 8ಕ್ಕೆ ಪೃಥ್ವಿ ಅಂಬರ್ ಚಿತ್ರ ರಿಲೀಸ್‌


Team Udayavani, Jun 27, 2022, 2:58 PM IST

pruthvi ambar’s Sugarless movie ready to release

ಸುಂದರ ಕನಸುಗಳನ್ನು ಕಟ್ಟಿಕೊಂಡಿರುವ ಯುವಕನಿಗೆ ಡಯಾಬಿಟಿಕ್‌ ಇದ್ದರೆ ಹೇಗಾಗಬಹುದು… ಆತ ಪಡುವ ಪಾಡೇನು, ಪ್ರೀತಿ, ಪ್ರೇಮ, ಜೀವನದ ಮೇಲೆ ಅದು ಯಾವ ರೀತಿ ಪರಿಣಾಮ ಬೀರಬಹುದು.. ಇಂತಹ ಅಂಶಗಳನ್ನು ಇಟ್ಟುಕೊಂಡು ಕಟ್ಟಿಕೊಟ್ಟಿರುವ ಸಿನಿಮಾ “ಶುಗರ್‌ಲೆಸ್‌’. ಜುಲೈ 8ಕ್ಕೆ ಬಿಡುಗಡೆಯಾಗುತ್ತಿರುವ ಈ ಸಿನಿಮಾದ ಟ್ರೇಲರ್‌ ಭಾನುವಾರ ಬಿಡುಗಡೆಯಾಗಿದೆ.

ಟ್ರೇಲರ್‌ ಮೊದಲ ನೋಟದಲ್ಲೇ ಭರವಸೆ ಮೂಡಿಸುತ್ತಿದ್ದು, ಒಂದಷ್ಟು ಗಂಭೀರ ಅಂಶಗಳನ್ನು ಫ‌ನ್‌ ಹಿನ್ನೆಲೆಯಲ್ಲಿ ಕಟ್ಟಿಕೊಟ್ಟಿದ್ದಾರೆ. ಜೊತೆಗೊಂದು ಸಂದೇಶವೂ ಇರುವುದು ಟ್ರೇಲರ್‌ನಲ್ಲಿ ಎದ್ದು ಕಾಣುತ್ತದೆ. ಆ ಮೂಲಕ ಹೊಸ ಜಾನರ್‌ನ ಸಿನಿಮಾವಾಗಿ “ಶುಗರ್‌ಲೆಸ್‌’ ಕನ್ನಡ ಚಿತ್ರರಂಗದಲ್ಲಿ ಒಂದು ವಿಭಿನ್ನ ಪ್ರಯೋಗವಾಗುವ ನಿರೀಕ್ಷೆ ಇದೆ.

ಚಿತ್ರದ ಟ್ರೇಲರ್‌ ಅನ್ನು ಭಾನುವಾರ ನಟರಾದ ಶ್ರೀನಗರ ಕಿಟ್ಟಿ, ದೀಪಕ್‌ ಬಿಡುಗಡೆ ಮಾಡಿ ಶುಭ ಹಾರೈಸಿದರು. “ಶುಗರ್‌ಲೆಸ್‌’ ಚಿತ್ರಕ್ಕೆ ಶಶಿಧರ್‌ ಕೆ.ಎಂ ಕಥೆ, ಚಿತ್ರಕಥೆ ಬರೆದು ನಿರ್ಮಾಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ “ಡಾಟರ್‌ ಆಫ್ ಪಾರ್ವತಮ್ಮ’, “ವೀರಂ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಿರ್ಮಾಪಕನಾಗಿದ್ದ ಶಶಿಧರ್‌ ಕೆ.ಎಂ, ಮೊದಲ ಬಾರಿಗೆ “ಶುಗರ್‌ ಲೆಸ್‌’ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಗಾಂಧಿನಗರಕ್ಕೆ ಪರಿಚಯವಾಗುತ್ತಿದ್ದು, ಮೊದಲ ನಿರ್ದೇಶನದಲ್ಲೇ ಗಮನ ಸೆಳೆದಿದ್ದಾರೆ. ಈಗಾಗಲೇ ಚಿತ್ರದ ಸ್ಯಾಟ್‌ಲೈಟ್‌ ಹಕ್ಕು ಹಾಗೂ ಹಿಂದಿಗೆ ರೀಮೇಕ್‌ ರೈಟ್ಸ್‌ ಮಾರಾಟವಾಗುವ ಮೂಲಕ ಶಶಿಧರ್‌ ಖುಷಿಯಾಗಿದ್ದಾರೆ. ಜೊತೆಗೆ ಹಿಂದಿ ರೀಮೇಕ್‌ಗೂ ಶಶಿಧರ್‌ ಅವರದ್ದೇ ನಿರ್ದೇಶನವಿದೆ.

“ನಾನು ಚಿತ್ರರಂಗಕ್ಕೆ ಬಂದು 5 ವರ್ಷ ಆಯಿತು. ನನಗೆ ಚಿತ್ರರಂಗ ಎಲ್ಲವನ್ನು ಕೊಟ್ಟಿದೆ. ನಟನೆ, ನಿರ್ಮಾಣದ ಜೊತೆಗೆ ಈಗ ನಿರ್ದೇಶನ ಕೂಡಾ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಾಯಿಲೆಗಳ ಬಗ್ಗೆಯೇ ಸಿನಿಮಾ ಮಾಡುವ ಆಸೆ ಇದೆ’ ಎಂದರು ಶಶಿಧರ್‌.

ಇದನ್ನೂ ಓದಿ:ಹೊಸ ‘ಹೋಪ್’ ನಲ್ಲಿ ಶ್ವೇತಾ: ಚಿತ್ರಕ್ಕೆ ಸಚಿವ ಡಾ. ಅಶ್ವಥ್‌ ನಾರಾಯಣ್‌ ಸಾಥ್‌

“ಭಾರತದಲ್ಲಿ ಇಲ್ಲಿಯವರೆಗೆ ನೂರಾರು ವಿಷಯಗಳ ಮೇಲೆ ಸಾವಿರಾರು ಸಿನಿಮಾಗಳು ಬಂದಿವೆ. ಆದ್ರೆ ಡಯಾಬಿಟಿಕ್‌ (ಶುಗರ್‌) ಕುರಿತು ಯಾವುದೇ ಸಿನಿಮಾಗಳು ಬಂದಿಲ್ಲ. ನಮಗೆ ಗೊತ್ತಿರುವಂತೆ ಇಡೀ ಭಾರತದಲ್ಲೇ ಡಯಾಬಿಟಿಕ್‌ ಸಬ್ಜೆಕ್ಟ್ ಮೇಲೆ ಬರುತ್ತಿರುವ ಮೊದಲ ಸಿನಿಮಾ ನಮ್ಮದು. ಸಾಮಾನ್ಯವಾಗಿ ಡಯಾಬಿಟಿಕ್‌ ವಿಷಯ ಅಂದ್ರೆ, ಬಹುತೇಕರು ತುಂಬ ಸೀರಿಯಸ್‌ ಆಗುತ್ತಾರೆ. ಆದ್ರೆ ನಾವು ಸಿರಿಯಸ್‌ ವಿಷಯವಾದ್ರೂ ಅದನ್ನು ಹ್ಯೂಮರಸ್‌ ಆಗಿ, ನೋಡುಗರಿಗೆ ಮುಟ್ಟುವಂತೆ ತೆರೆಮೇಲೆ ತರುತ್ತಿದ್ದೇವೆ. ಇದರಲ್ಲಿ ಲವ್‌, ಸೆಂಟಿಮೆಂಟ್‌, ಎಮೋಶನ್ಸ್‌, ಕಾಮಿಡಿ ಜೊತೆಗೊಂದು ಮೆಸೇಜ್‌, ಹೀಗೆ ಎಂಟರ್‌ಟೈನ್ಮೆಂಟ್‌ಗೆ ಏನೇನು ಎಲಿಮೆಂಟ್ಸ್‌ ಇರಬೇಕೋ, ಅದೆಲ್ಲವೂ “ಶುಗರ್‌ಲೆಸ್‌’ನಲ್ಲಿದೆ’ ಎನ್ನುತ್ತಾರೆ ನಿರ್ಮಾಪಕ ಕಂ ನಿರ್ದೇಶಕ ಶಶಿಧರ್‌ ಕೆ.ಎಂ.

ಚಿತ್ರದಲ್ಲಿ ಪೃಥ್ವಿ ಅಂಬರ್‌ ಹಾಗೂ ಪ್ರಿಯಾಂಕಾ ತಿಮ್ಮೇಶ್‌ ನಾಯಕ-ನಾಯಕಿ. ಇಬ್ಬರೂ ಕೂಡಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಿರಿಯ ನಟ ದತ್ತಣ್ಣ ಅವರಿಗೆ ಸಿನಿಮಾ ಮೂಡಿಬಂದಿರುವ ರೀತಿ ಖುಷಿ ಕೊಟ್ಟಿದೆಯಂತೆ. ಉಳಿದಂತೆ ಚಿತ್ರದಲ್ಲಿ ನಟಿಸಿರುವ ಪದ್ಮಜಾ ರಾವ್‌, ರಘು ರಮಣಕೊಪ್ಪ, ವಿತರಕಿ ಮಾಲಿನಿ ಸೇರಿದಂತೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.