“ಕಾಣದಂತೆ ಮಾಯವಾದನು’ ಟ್ರೇಲರ್ ಮೆಚ್ಚಿದ ಪುನೀತ್
Team Udayavani, Jul 20, 2019, 3:02 AM IST
ಚಂದ್ರಶೇಖರ್ ನಾಯ್ಡು, ಸೋಮ್ ಸಿಂಗ್ ಹಾಗೂ ಪುಷ್ಪ ಸೋಮ್ ಸಿಂಗ್ ಅವರು ನಿರ್ಮಿಸಿರುವ “ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಟ್ರೇಲರ್ ವೀಕ್ಷಿಸಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ರಾಜ್ ಪ್ರತಿಪಾಠಿ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ಧವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಮಂಡಳಿ ಮುಂದೆ ಹೋಗಲಿದೆ. ಈ ಹಿಂದೆ “ಜಯಮ್ಮನ ಮಗ’ ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್ ಈ ಚಿತ್ರದ ಮೂಲಕ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಿಂಧು ಲೋಕನಾಥ್ ಈ ಚಿತ್ರದ ನಾಯಕಿ.
ಅಚ್ಯುತ್ ಕುಮಾರ್, ಸುಚೇಂದ್ರ ಪ್ರಸಾದ್, ರಾಘವ್ ಉದಯ್, ಭಜರಂಗಿ ಲೋಕಿ, ಧರ್ಮಣ್ಣ, ಸೀತಾ ಕೋಟೆ, ಬಾಬು ಹಿರಣ್ಣಯ್ಯ, ಹೊನ್ನಾವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಸುಜ್ಞಾನ್ ಅವರ ಛಾಯಾಗ್ರಹಣವಿದೆ. ಸುರೇಶ್ ಆರ್ಮುಗಂ ಸಂಕಲನ, ವಿನೋದ್ ಸಾಹಸವಿದೆ.