ಪುನೀತ್‌ ತುಂಬಾ ಫ್ರೆಂಡ್ಲಿ ನಟ


Team Udayavani, Feb 5, 2019, 5:33 AM IST

puneet.jpg

ಪುನೀತ್‌ ರಾಜಕುಮಾರ್‌ ಅಭಿನಯದ “ನಟಸಾರ್ವಭೌಮ’ ಚಿತ್ರದ ಮೂಲಕ ಅನುಪಮಾ ಪರಮೇಶ್ವರನ್‌ ಎಂಬ ಮಲಯಾಳಿ ಕುಟ್ಟಿ ಹೊಸ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. 2015ರಲ್ಲಿ ಮಲೆಯಾಳಂನಲ್ಲಿ ತೆರೆಗೆ ಬಂದ ರೊಮ್ಯಾಂಟಿಕ್‌ ಕಾಮಿಡಿ ಕಥಾಹಂದರದ “ಪ್ರೇಮಂ’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದ ಅನುಪಮ, ಆ ಚಿತ್ರ ಬಿಡುಗಡೆಯಾದ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು.

ಬಳಿಕ ಮಲೆಯಾಳಂನ “ಜೇಮ್ಸ್‌ ಆ್ಯಂಡ್‌ ಅಲೈಸ್‌’, “ಜೊಮೊಂಟೆ ಸುವಿಶೇಷಂಗಳ್‌’, ತಮಿಳಿನ “ಕೋಡಿ’, ತೆಲುಗಿನ “ಅ ಆ..’, “ಶತಮಾನಂ ಭವತಿ’, “ಕೃಷ್ಣಾರ್ಜುನ ಯುದ್ಧಂ’, “ತೇಜ್‌ ಐ ಲವ್‌ ಯು’ ಹೀಗೆ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿ ತನ್ನದೇ ಆದ ಅಭಿಮಾನಿಗಳನ್ನು ಸಂಪಾದಿಸಿಕೊಂಡಾಕೆ. ಈಗ ಕನ್ನಡ ಚಿತ್ರರಂಗಕ್ಕೂ ಪದಾರ್ಪಣೆ ಮಾಡುತ್ತಿರುವ ಅನುಪಮಾ ಪರಮೇಶ್ವರನ್‌ ತಮ್ಮ ಚೊಚ್ಚಲ ಕನ್ನಡ ಚಿತ್ರ “ನಟಸಾರ್ವಭೌಮ’ನ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಾರೆ. 

“ಕಳೆದ ಎರಡು-ಮೂರು ವರ್ಷಗಳಿಂದಲೂ ಕನ್ನಡ ಚಿತ್ರರಂಗದಿಂದ ಹಲವು ಚಿತ್ರಗಳಲ್ಲಿ ಅಭಿನಯಿಸುವ ಆಫ‌ರ್ ಬರುತ್ತಿದ್ದವು. ಆದರೆ ಸಮಯದ ಕೊರತೆ ಮತ್ತು ನನಗೆ ಕೆಲವೊಂದು ಕಥೆಗಳು, ಪಾತ್ರಗಳು ಅಷ್ಟಾಗಿ ಹೊಂದಾಣಿಕೆ ಆಗುವುದಿಲ್ಲ ಎಂದೆನಿಸಿದ್ದರಿಂದ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರಲಿಲ್ಲ. “ನಟಸಾರ್ವಭೌಮ’ ಚಿತ್ರದಲ್ಲೂ ಹಾಗೇ ಒಂದು ಅವಕಾಶ ಬಂತು. ಚಿತ್ರದ ಕಥೆ, ನನ್ನ ಪಾತ್ರ, ಜೊತೆಗೆ ದೊಡ್ಡ ದೊಡ್ಡ ಕಲಾವಿದರು, ತಂತ್ರಜ್ಞರ ಟೀಮ್‌ ಸಿಕ್ಕಿದ್ದರಿಂದ ಚಿತ್ರವನ್ನು ಒಪ್ಪಿಕೊಂಡೆ.

ಮೊದಲ ಕನ್ನಡ ಚಿತ್ರದಲ್ಲೇ ಇಂಥದ್ದೊಂದು ಟೀಮ್‌ ಸಿಕ್ಕಿರುವುದಕ್ಕೆ ತುಂಬಾ ಖುಷಿ ಇದೆ. ನನ್ನ ಪಾತ್ರ ಕನ್ನಡ ಆಡಿಯನ್ಸ್‌ಗೆ ಇಷ್ಟವಾಗುತ್ತದೆ’ ಎಂಬ ವಿಶ್ವಾಸದ ಮಾತುಗಳನ್ನಾಡುತ್ತಾರೆ ಅನುಪಮಾ ಪರಮೇಶ್ವರನ್‌. ಇನ್ನು ಪುನೀತ್‌ ರಾಜಕುಮಾರ್‌ ಜೊತೆಗಿನ ಅಭಿನಯದ ಬಗ್ಗೆ ಮಾತನಾಡುವ ಅನುಪಮಾ, “ಕನ್ನಡದಲ್ಲಿ ಪುನೀತ್‌ ರಾಜಕುಮಾರ್‌ ಅವರ ಹಲವು ಚಿತ್ರಗಳನ್ನು ನೋಡಿದ್ದೆ. ಕನ್ನಡದಲ್ಲಿ ಅವರೊಬ್ಬ ದೊಡ್ಡ ಸ್ಟಾರ್‌ ನಟ ಅನ್ನುವುದನ್ನೂ ಕೇಳಿದ್ದೆ.

ನನ್ನ ಮೊದಲ ಚಿತ್ರದಲ್ಲೇ ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದೇ ಭಾವಿಸುತ್ತೇನೆ. ಮೊದಲ ಸಲ ಅವರ ಜೊತೆ ಕೆಮಿಸ್ಟ್ರಿ ಹೇಗಿರುತ್ತದೆಯೋ, ಏನೋ ಎಂಬ ಭಯವಿತ್ತು. ಆದರೆ ಅವರು ಅಷ್ಟು ದೊಡ್ಡ ಸ್ಟಾರ್‌ ಆದ್ರೂ ತುಂಬಾ ಫ್ರೆಂಡ್ಲಿ ಆಗಿದ್ರು. ಯಾವಾಗಲೂ ಎನರ್ಜಿಟಿಕ್‌ ಆಗಿ, ನಗುನಗುತ್ತ ಅವರು ಇರುವುದರಿಂದ ಅವರ ಜೊತೆ ಕೆಲಸ ಮಾಡೋದು ತುಂಬಾ ಕಂಫ‌ರ್ಟ್‌ ಫೀಲ್‌ ಕೊಟ್ಟಿತು’ ಎನ್ನುತ್ತಾರೆ ಅನುಪಮಾ.

ಆದರೆ ಚಿತ್ರದಲ್ಲಿ ತಮ್ಮ ಪಾತ್ರವೇನು ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಡದ ಅನುಪಮ “ನನ್ನ ಪಾತ್ರದ ಬಗ್ಗೆ ಮಾತ್ರ ಹೆಚ್ಚೇನು ಕೇಳಬೇಡಿ. ಅದನ್ನು ಥಿಯೇಟರ್‌ನಲ್ಲಿ ನೋಡಿ, ಆಮೇಲೆ ನನ್ನ ಅಭಿನಯ ಹೇಗಿದೆ ಅಂತ ಹೇಳಿ’ ಎನ್ನುತ್ತಾರೆ. “ಸದ್ಯ ನನ್ನ ಗಮನ ಕನ್ನಡ ಪ್ರೇಕ್ಷಕರು “ನಟಸಾರ್ವಭೌಮ’ನನ್ನು, ನನ್ನ ಪಾತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಅನ್ನುವುದರ ಕಡೆಗೆ ತುಂಬ ಕುತೂಹಲವಿದೆ. ಇನ್ನೂ ಮೂರ್‍ನಾಲ್ಕು ಚಿತ್ರಗಳ ಆಫ‌ರ್ ಕನ್ನಡದಲ್ಲಿ ಬರುತ್ತಿದ್ದರೂ, ಅದರ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎನ್ನುವ ಅನುಪಮಾ,

“ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದಕ್ಕೆ ಖುಷಿಯಾಗುತ್ತದೆ ಮುಂದೆ ನನಗಿಷ್ಟವಾಗುವ ಅವಕಾಶಗಳು ಸಿಕ್ಕರೆ ಖಂಡಿತಾ ಕನ್ನಡ ಚಿತ್ರಗಳಲ್ಲಿ ಅಭಿನಯಿಸಲು ರೆಡಿ’ ಎನ್ನುತ್ತಾರೆ. ಒಟ್ಟಾರೆ ಮಲೆಯಾಳಂ, ತಮಿಳು, ತೆಲುಗು ಹೀಗೆ ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಸಿನಿಪ್ರಿಯರ ಮನಗೆದ್ದಿರುವ ಅನುಪಮ ಕನ್ನಡ ಸಿನಿಪ್ರಿಯರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗುತ್ತಾರೆ ಅನ್ನೋದು “ನಟಸಾರ್ವಭೌಮ’ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.