ಚಂಬಲ್‌ ಕಣಿವೆಯಲ್ಲಿ ಪುನೀತ್‌


Team Udayavani, Jan 28, 2019, 5:40 AM IST

chambalsatish.jpg

ಕನ್ನಡದಲ್ಲಿ ಸದ್ಯಕ್ಕೆ ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳ ಪಟ್ಟಿಯಲ್ಲಿ ನೀನಾಸಂ ಸತೀಶ್‌ ಅಭಿನಯದ “ಚಂಬಲ್‌’ ಚಿತ್ರವೂ ಒಂದು. ಈ ಚಿತ್ರ ಈಗ ಬಿಡುಗಡೆಯ ತಯಾರಿಯಲ್ಲಿದೆ. ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯಾವುದೇ ಕಟ್‌ ಇಲ್ಲದೆ “ಯು/ಎ’ ಪ್ರಮಾಣ ಪತ್ರ ನೀಡಿದೆ. ಈಗ “ಚಂಬಲ್‌’ನ ಹೊಸ ಸುದ್ದಿಯೆಂದರೆ, ಅದು ಟ್ರೇಲರ್‌ ಬಿಡುಗಡೆ.

ಹೌದು, ಈ ಚಿತ್ರದ ಟ್ರೇಲರ್‌ ಜನವರಿ 31 ರಂದು ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರದ ಟ್ರೇಲರ್‌ಗೆ ಪುನೀತ್‌ರಾಜಕುಮಾರ್‌ ಅವರು ಚಾಲನೆ ನೀಡಲಿದ್ದಾರೆ. ಚಿತ್ರದ ಹೀರೋ ನೀನಾಸಂ ಸತೀಶ್‌ ಅವರಿಗೆ ಪುನೀತ್‌ ಅವರಿಂದಲೇ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿಸಬೇಕು ಎಂಬ ಆಸೆ. ಆ ಆಸೆಗೆ ಪುನೀತ್‌ ಕೂಡ ಗ್ರೀನ್‌ಸಿಗ್ನಲ್‌ ನೀಡುತ್ತಿದ್ದು, ಸತೀಶ್‌ ಅವರ ಆಸೆಯಂತೆ ಜನವರಿ 31 ರಂದು ಪುನೀತ್‌ ಅವರು ಟ್ರೇಲರ್‌ ಬಿಡುಗಡೆ ಮಾಡಲಿದ್ದಾರೆ.

ಈ ಹಿಂದೆ ಕೂಡ ಸತೀಶ್‌ ಅಭಿನಯದ “ಅಯೋಗ್ಯ’ ಚಿತ್ರದ ಹಾಡೊಂದನ್ನು ಪುನೀತ್‌ ಬಿಡುಗಡೆ ಮಾಡಿದ್ದರು. ಅದೇ ಖುಷಿಯಲ್ಲಿರುವ ಸತೀಶ್‌ ಅವರಿಂದ ಬಿಡುಗಡೆ ಮಾಡಿಸಲು ಮುಂದಾಗಿದ್ದಾರೆ. ಅಂದಹಾಗೆ, ಈ ಹಿಂದೆ ಪುನೀತ್‌ ಅವರಿಗೆ “ಪೃಥ್ವಿ’ ಚಿತ್ರವನ್ನು ನಿರ್ದೇಶಿಸಿದ್ದ ಜೇಕಬ್‌ ವರ್ಗಿಸ್‌ ಅವರೇ “ಚಂಬಲ್‌’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, “ಚಂಬಲ್‌’ ಅಂದಾಕ್ಷಣ, ಚಂಬಲ್‌ ಕಣಿವೆಯ ಡಕಾಯಿತರ ನೆನಪಾಗುತ್ತೆ. ಚಿತ್ರದಲ್ಲೂ ಆ ಅಂಶಗಳಿವೆಯಾ? ಎಂಬುದಕ್ಕೆ ಚಿತ್ರ ಬರುವವರೆಗೂ ಕಾಯಬೇಕು ಎಂಬುದು ಚಿತ್ರತಂಡದ ಮಾತು.

ಆದರೂ, ಟ್ರೇಲರ್‌ನಲ್ಲಿ ಒಂದಷ್ಟು ಸೂಕ್ಷ್ಮ ವಿಷಯಗಳಿವೆ. ಅದನ್ನು ನೋಡಿದವರಿಗೆ ಇದು ಯಾವ ರೀತಿಯ ಸಿನಿಮಾ ಎಂಬುದು ಗೊತ್ತಾಗಲಿದೆಯಂತೆ. ಕಥೆಯಲ್ಲಿ  ಒಬ್ಬ ಅಮಾಯಕ, ಒಂದು ಕೂಪದಲ್ಲಿ ಸಿಲುಕೊಂಡು, ಒದ್ದಾಡಿ, ಆ ಬಳಿಕ ಹೇಗೆ ಹೊರಬರುತ್ತಾನೆ ಎಂಬ ವಿಷಯ ಅಡಕವಾಗಿದೆಯಂತೆ. ಇನ್ನು, ಈ ಚಿತ್ರದಲ್ಲಿ ರೋಜರ್‌ ನಾರಾಯಣ್‌, ಸೋನು ಗೌಡ, ಸರ್ದಾರ್‌ ಸತ್ಯ, ಅಚ್ಯುತ್‌ ಕುಮಾರ್‌ ಸೇರಿದಂತೆ ಇತರರು ನಟಿಸಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.