ಗಿಡ ನೆಟ್ಟು ಅಪ್ಪು ಆಸೆ ಪೂರೈಸಿ: ಅಭಿಮಾನಿಗಳಲ್ಲಿ ರಾಘಣ್ಣ ಮನವಿ
Team Udayavani, Jan 30, 2022, 1:28 PM IST
ಪುನೀತ್ ರಾಜ್ಕುಮಾರ್ ನಿಧನರಾಗಿ ಶನಿವಾರಕ್ಕೆ ಮೂರು ತಿಂಗಳು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ವರ್ಗ ಶನಿವಾರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ಕುಮಾರ್ ಸಮಾಧಿಗೆ ತೆರಳಿ ಪೂಜೆಸಲ್ಲಿಸಿದರು. ಈ ವೇಳೆ ರಾಘವೇಂದ್ರ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿದಂತೆ ಕುಟುಂಬ ವರ್ಗ ಹಾಜರಿತ್ತು.
ಎಂದಿನಂತೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡಾ ಆಗಮಿಸಿ, ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು. ಇನ್ನು ಇದೇ ವೇಳೆ ರಾಜ್ ಕುಟುಂಬ ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಕಾಳಜಿ ಮೆರೆಯಿತು. ಮುಂದಿನ ದಿನಗಳಲ್ಲಿ ಸಮಾಧಿ ಬಳಿ ಬರುವ ಅಭಿಮಾನಿಗಳಿಗೆ ಮತ್ತಷ್ಟುಗಿಡಗಳನ್ನು ವಿತರಿಸಿ, ಪುನೀತ್ ಹುಟ್ಟುಹಬ್ಬದ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ವಿತರಿಸುವ ಗುರಿ ಹೊಂದಿದೆ. ಈ ಕುರಿತು ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, “ಎಲ್ಲೆಲ್ಲಿಂದಲೋ ಕಷ್ಟಪಟ್ಟು ಅಪ್ಪು ಮೇಲಿನ ಪ್ರೀತಿಗಾಗಿ ಅಭಿಮಾನಿಗಳು ಬರುತ್ತಿದ್ದಾರೆ.
ಹೀಗೆ ಬರುವ ಅಭಿಮಾನಿಗಳಿಗೆ ಒಂದೊಂದು ಗಿಡ ನೀಡಿದರೆ ಪರಿಸರ ರಕ್ಷಣೆ ಮಾಡಿದಂತಾಗುತ್ತದೆ. ಅಪ್ಪುಗೆ ಪರಿಸರ, ಕಾಡೆಂದರೆ ತುಂಬಾ ಇಷ್ಟ. ಹೀಗಾಗಿ ಅಭಿಮಾನಿಗಳು ಗಿಡ ನೆಟ್ಟು, ಅದನ್ನು ಒಂದು ವರ್ಷ ನೋಡಿಕೊಂಡರೆ ಮತ್ತೆ ಅದು ಬೆಳೆದುಕೊಂಡು ಹೋಗುತ್ತದೆ. ಇದಲ್ಲದೇ ಗಿಡ, ಮರಗಳಲ್ಲಿ ಆತ್ಮಗಳು ವಾಸಿಸುತ್ತವೆ ಎಂಬ ನಂಬಿಕೆಯೂ ಇದೆ. ಹಾಗಾಗಿ, ಆ ಆತ್ಮಗಳಿಗೂ ನಾವು ಗೌರವ ಕೊಟ್ಟಂತಾಗುತ್ತದೆ. ಅಪ್ಪು ಅಭಿಮಾನಿಗಳು ಗಿಡ ನೆಟ್ಟು ಇಡೀ ಕರ್ನಾಟಕವನ್ನು ಹಸಿರಾಗಿಸಬೇಕು’ ಎಂದು ಮನವಿ ಮಾಡಿದರು.
ಇನ್ನು, ಶನಿವಾರ ಸಮಾಧಿ ಬಳಿ ಅನ್ನದಾನ ಹಾಗೂ ಸಂಜೆ ವೇಳೆ ದೀಪೋತ್ಸವ ಕೂಡಾ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ