Appu Birthday; ಪುನೀತ್‌ ನೆನಪಿನಲ್ಲಿ ಫ್ಯಾನ್ಸ್‌ ಸಾಮಾಜಿಕ ಕಾರ್ಯ


Team Udayavani, Mar 17, 2024, 8:43 AM IST

puneeth rajkumar

ದೊಡ್ಮನೆ ಹುಡುಗ, ಕನ್ನಡ ಚಿತ್ರರಂಗದ “ಪವರ್‌ ಸ್ಟಾರ್‌’ ಪುನೀತ್‌ ರಾಜಕುಮಾರ್‌ ಅವರ 49ನೇ ಜನ್ಮದಿನವನ್ನು ಇಂದು ಅವರ ಅಭಿಮಾನಿಗಳು, ಕುಟುಂಬ ವರ್ಗ ಮತ್ತು ಸ್ನೇಹಿತರು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಪುನೀತ್‌ ನಿಧನದ ಬಳಿಕವೂ ಪುನೀತ್‌ ಅವರ ನೆನಪಿನಲ್ಲೇ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನದ ಸಂಭ್ರಮವನ್ನು ಹಿಂದಿನಂತೆಯೇ ಆಚರಿಸಿಕೊಂಡು ಬರುತ್ತಿದ್ದಾರೆ.

ಇನ್ನು ಪುನೀತ್‌ ರಾಜಕುಮಾರ್‌ ನಿಧನಕ್ಕೂ ಮೊದಲು ಪ್ರತಿವರ್ಷ ಕೂಡ ಪುನೀತ್‌ ರಾಜಕುಮಾರ್‌ ಅವರ ಜನ್ಮದಿನಕ್ಕೆ ಎರಡು-ಮೂರು ವಾರಗಳ ಮುಂಚೆಯೇ ಅಭಿಮಾನಿಗಳಿಂದ ಜೋರಾಗಿ ತಯಾರಿ ಶುರುವಾಗುತ್ತಿತ್ತು. ಪುನೀತ್‌ ರಾಜಕುಮಾರ್‌ ಕೂಡ ತಮ್ಮ ಜನ್ಮದಿನದಂದು ತಮ್ಮ ಅಭಿಮಾನಿಗಳ ಜೊತೆ ಸೇರಿ ಆಚರಿಸಿಕೊಳ್ಳುತ್ತಿದ್ದರು. ಪುನೀತ್‌ ನಿಧನದ ಬಳಿಕ ಅವರ ದೈಹಿಕ ಅನುಪಸ್ಥಿತಿಯಲ್ಲಿಯೇ ಅವರ ಅಭಿಮಾನಿಗಳು ಪುನೀತ್‌ ರಾಜಕುಮಾರ್‌ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಸಲ್ಲಿಸುವ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಹಿಂದಿನಂತೆಯೇ ಆಚರಿಸಿಕೊಂಡು ಬರುತ್ತಿರುವುದು ವಿಶೇಷ.

ಅಪ್ಪು ಸಮಾಧಿಗೆ ಕುಟುಂಬಸ್ಥರು, ಅಭಿಮಾನಿಗಳ ನಮನ

ಪುನೀತ್‌ ರಾಜಕುಮಾರ್‌ ಜನ್ಮದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ರಾಜಕುಮಾರ್‌ ಅವರ ಸಮಾಧಿಗೆ ಭೇಟಿ ನೀಡುತ್ತಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಇಂದು ಬೆಳಿಗ್ಗೆ ಪುನೀತ್‌ ಸಮಾಧಿಗೆ ಭೇಟಿ ನೀಡಲಿರುವ ಪುನೀತ್‌ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಪುಷ್ಪ ನಮನ ಸಲ್ಲಿಸುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲಿದ್ದಾರೆ.

ಸಾಮಾಜಿಕ ಕಾರ್ಯಗಳು

ಮೊದಲಿನಿಂದಲೂ ಪುನೀತ್‌ ರಾಜಕುಮಾರ್‌ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಹತ್ತು ಹಲವು ಸಾಮಾಜಿಕ ಕೆಲಸಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪುನೀತ್‌ ರಾಜಕುಮಾರ್‌ ಅಗಲಿಕೆಯ ಬಳಿಕವೂ ಈ ಸಾಮಾಜಿಕ ಕೆಲಸಗಳು ನಿರಂತರವಾಗಿ ನಡೆದುಕೊಂಡೆ ಬರುತ್ತಿದೆ. ಪುನೀತ್‌ ರಾಜಕುಮಾರ್‌ ಹುಟ್ಟುಬಹºದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ, ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಬಡ ರೋಗಿಗಳಿಗೆ ಔಷಧಿ ವಿತರಣೆ, ಉಚಿತ ನೇತ್ರ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಅನ್ನದಾನ ಹೀಗೆ ಹಲವು ಸಮಾಜಮುಖೀ ಕೆಲಸಗಳನ್ನು ಅಭಿಮಾನಿಗಳು ಬೆಂಗಳೂರು ಮತ್ತು ರಾಜ್ಯದ ಹಲವು ಸ್ಥಳಗಳಲ್ಲಿ ಹಮ್ಮಿಕೊಂಡಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.