ಪುನೀತ್‌ ಗೆ ಇಂದು ಜನ್ಮದಿನದ ಸಂಭ್ರಮ


Team Udayavani, Mar 17, 2021, 8:47 AM IST

pun-eeth

ಬೆಂಗಳೂರು: ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರಿಗೆ ಇಂದು (ಮಾ. 17) ಜನ್ಮದಿನದ ಸಂಭ್ರಮ. ಪ್ರತಿವರ್ಷ ಪುನೀತ್‌ ರಾಜಕುಮಾರ್‌ ಜನ್ಮದಿನವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ವರ್ಷದಿಂದ ಪುನೀತ್‌ ರಾಜಕುಮಾರ್‌ ಅದ್ಧೂರಿ ಜನ್ಮದಿನಕ್ಕೆ ಕೊರೋನಾ ಅಡ್ಡಿಯಾಗಿದೆ.

ಕಳೆದ ವರ್ಷ ಮಾರ್ಚ್‌ ವೇಳೆಗೆ ಕೊರೋನಾ ಸೋಂಕು ದೇಶದೆಲ್ಲೆಡೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದರಿಂದ, ಪುನೀತ್‌ ರಾಜಕುಮಾರ್‌ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರಬಂದು ಸಾರ್ವಜನಿಕವಾಗಿ, ಅದ್ಧೂರಿ ಬರ್ತ್‌ಡೇ ಸಂಭ್ರಮ ಆಚರಿಸದಂತೆ ಮನವಿ ಮಾಡಿದ್ದರು. ಅದರಂತೆ ತಮ್ಮ ನೆಚ್ಚಿನ ನಟನ ಮನವಿಗೆ ಸ್ಪಂದಿಸಿದ್ದ ಅಪ್ಪು ಫ್ಯಾನ್ಸ್‌ ಕೂಡ ಸರಳವಾಗಿ, ಸೋಶಿಯಲ್‌ ಮಿಡಿಯಾಗಳನ್ನೇ ವೇದಿಕೆ ಮಾಡಿಕೊಂಡು ಪವರ್‌ಸ್ಟಾರ್‌ ಬರ್ತ್‌ಡೇ ಆಚರಿಸಿ ಸಂಭ್ರಮಿಸಿದ್ದರು.

ಇನ್ನು ಈ ಬಾರಿಯಾದರೂ ಅಪ್ಪು ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರು ವಾಗಲೇ, ಕೊರೋನಾದ ಎರಡನೇ ಅಲೆಯ ಆತಂಕ ಎದುರಾಗಿದೆ.

ಇದನ್ನೂ ಓದಿ: ಮತ್ತೆ ರಾತ್ರಿ ಕರ್ಫ್ಯೂ ಜಪ : ಮುಂಬಯಿ, ಪುಣೆ ಬಳಿಕ ಮ.ಪ್ರದೇಶ, ಗುಜರಾತ್‌ನಲ್ಲೂ ಜಾರಿ

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಮತ್ತೂಮ್ಮೆ ಲಾಕ್‌ಡೌನ್‌ ಆತಂಕ ಎದುರಾಗಿದೆ. ಮತ್ತೊಂದೆಡೆ, ಸರ್ಕಾರ ಕೂಡ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುತ್ತಿದೆ. ಪರಿಸ್ಥಿತಿ ಹೀಗಿರುವಾಗ, ಜನರ ಆರೋಗ್ಯ ಮತ್ತು ಸಾಮಾಜಿಕ ಹೊಣೆಗಾರಿಕೆ ಯಿಂದ ಈ ಬಾರಿಯೂ ಪುನೀತ್‌ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಆದಷ್ಟು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ತಮ್ಮ ಜನ್ಮದಿನಕ್ಕೂ ಎರಡು ದಿನಗಳ ಮುಂಚೆಯೇ ಸೋಶಿಯಲ್‌ ಮೀಡಿಯಾದಲ್ಲಿ ಲೈವ್‌ ಬಂದಿರುವ ಪುನೀತ್‌ ರಾಜಕುಮಾರ್‌, “ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ನನ್ನ ಜನ್ಮದಿನದಂದು ನಾನು ಮನೆಯಲ್ಲಿ ಇರುವುದಿಲ್ಲ. ಕುಟುಂಬ ದೊಂದಿಗೆ ದೇವಾಲಯಕ್ಕೆ ತೆರಳಲಿದ್ದೇನೆ.. ಹಾಗಾಗಿ ಯಾರೂ ಮನೆಗೆ ಬರುವುದು ಬೇಡ ಎಂದು ವಿನಂತಿ ಮಾಡಿಕೊಂಡಿದ್ದಾರೆ. ಇನ್ನು ಪುನೀತ್‌ ರಾಜಕುಮಾರ್‌ ಮನವಿಗೆ ಸ್ಪಂದಿಸಿರುವ ಅಭಿಮಾನಿಗಳು, ಈ ಬಾರಿಯೂ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ. ಬರ್ತ್ ಡೇ ಪ್ರಯುಕ್ತ ವಿಶೇಷ ಸಿಡಿಪಿ ವಿನ್ಯಾಸಗೊಳಿಸಿರುವ ಅಪ್ಪು ಫ್ಯಾನ್ಸ್‌, ಅದನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಳ್ಳುವ ಮೂಲಕ ಪವರ್‌ಸ್ಟಾರ್‌ಗೆ ಜನ್ಮದಿನದ ಶುಭಾಶಯ ಕೋರಲು ಮುಂದಾಗಿದ್ದಾರೆ.

ಅಲ್ಲದೆ ಪುನೀತ್‌ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಸಸಿ ನೆಡುವುದು, ಬಡವರಿಗೆ ಆಹಾರ ಕಿಟ್‌ ವಿತರಣೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಔಷಧಿ ವಿತರಣೆ, ಉಚಿತ ವೈದ್ಯಕೀಯ ತಪಾಸಣೆ, ಅನ್ನದಾನ ಹೀಗೆ ಒಂದಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ಬಾಲಸುಟ್ಟ ಶಿವಸೇನೆ ಹುಲಿ : ಬೆಳಗಾವಿ ಕೇಂದ್ರಾಡಳಿತವಾಗದು ಎಂದು ಕೇಂದ್ರ ಸ್ಪಷ್ಟನೆ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.