ಸಾಹಸ ಸಿಂಹನಿಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ವಿಜಯ್ ರಂಗರಾಜು
Team Udayavani, Dec 13, 2020, 6:34 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದ ಸಾಹಸ ಸಿಂಹ ದಿವಂಗತ ವಿಷ್ಣುವರ್ದನ್ ಅವರ ಕುರಿತಾಗಿ ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಕನ್ನಡ ಸಿನಿಪ್ರಿಯರ ಹಾಗೂ ಚಿತ್ರರಂಗ ಬಳಗದ ಕೆಂಗಣ್ಣಿಗೆ ಗುರಿಯಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕ್ಷಮೆ ಯಾಚಿಸಿದ್ದಾರೆ.
ಕೆಲ ದಿನಗಳ ಹಿಂದೆ ತೆಲುಗು ಮಾಧ್ಯಮವೊಂದರಲ್ಲಿ ಬಾಯಿಗೆ ಬಂದಂತೆ ಮಾತನಾಡುವ ಮೂಲಕ ನಟ ವಿಜಯ್ ರಂಗರಾಜು ವಿವಾದ ಸೃಷ್ಟಿಸಿಕೊಂಡಿದ್ದರು.
ಇದಾದ ಬಳಿಕ ಸ್ಯಾಂಡಲ್ ವುಡ್ ನ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಹಲವು ನಟರು ಮತ್ತು ಅಭಿಮಾನಿಗಳು ಇವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೋವಿಡ್ ಸೋಂಕು ದೃಢ
ಇದೀಗ ಈ ಕುರಿತಾಗಿ ನಟ ವಿಜಯ್ ರಂಗರಾಜು ವೀಡಿಯೋ ಒಂದರ ಮೂಲಕ ಕ್ಷಮೆ ಯಾಚಿಸಿರುವ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದ ಮೂಲಕ ನಾನು ವಿಷ್ಣು ದಾದ ಅವರ ಕುರಿತಾಗಿ ತಪ್ಪು ಮಾತನಾಡಿದ್ದೇನೆ. ನನ್ನ ತಪ್ಪಿಗೆ ನಾನು ಈಗಾಗಲೇ ತಕ್ಕ ಶಿಕ್ಷೆ ಅನುಭವಿಸುತ್ತಿದ್ದು, ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ನಾನು ಮಾಡಿರುವ ತಪ್ಪಿಗೆ ವಿಷ್ಣುವರ್ದನ್ ಅವರ ಅಭಿಮಾನಿಗಳು, ಕುಟುಂಬಸ್ಥರು, ಹಾಗೂ ನಟರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ವಿಜಯ್ ರಂಗರಾಜು ಹೇಳಿಕೆಯ ಕುರಿತಾಗಿ ನಟ ಸುದೀಪ್ ವೀಡಿಯೋದ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದರು. ನಟ ಪುನೀತ್ ರಾಜ್ ಕುಮಾರ್ ಕೂಡಾ ಈ ಕುರಿತಾಗಿ ಟ್ಟೀಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗ ಒಂದು ಮನೆ, ಎಲ್ಲಾ ಕಲಾವಿದರೂ ಒಂದೇ ಕುಟುಂಬ, ಪ್ರತಿಯೊಬ್ಬ ಕಲಾವಿದರು ಇತರ ಕಲಾವಿದರನ್ನು ಗೌರವಿಸುವುದನ್ನು ಮೊದಲು ಕಲಿಯಬೇಕು. ವಿಷ್ಣುವರ್ದನ್ ಅವರ ಕುರಿತಾಗಿ ಅವಹೇಳನಕಾರಿ ಮಾತನಾಡಿದ ವಿಜಯ್ ರಂಗರಾಜು ಅವರು ಕ್ಷಮೆ ಕೇಳಬೇಕು ಎಂದು ಹೇಳಿದ್ದರು.
ಪೋಷಕ ಪಾತ್ರಗಳನ್ನು ಮಾಡುತ್ತಿದ್ದ ವಿಜಯ್ ರಂಗರಾಜು ಸಂದರ್ಶನವೊಂದರಲ್ಲಿ ತಾವು ದಿವಂಗತ ನಟ ವಿಷ್ಣುವರ್ದನ್ ಅವರ ಜೊತೆ ನಟಿಸಿದ್ದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ವಿಷ್ಣುವರ್ದನ್ ಅವರ ನಡತೆಯ ಕುರಿಯಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್