ಪುನೀತ್‌ ರಾಜಕುಮಾರ್‌ ರ ‘ಯುವರತ್ನ’ ಇಂದು ತೆರೆಗೆ


Team Udayavani, Apr 1, 2021, 8:04 AM IST

ಪುನೀತ್‌ ರಾಜಕುಮಾರ್‌ ರ ‘ಯುವರತ್ನ’ ಇಂದು ತೆರೆಗೆ

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರ ಇಂದು (ಏ. 1) ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ತೆರೆಕಾಣುತ್ತಿದ್ದು, ಎರಡೂ ಭಾಷೆಗಳಲ್ಲೂ ಚಿತ್ರದ ಬಿಡುಗಡೆಗೆ ಭರ್ಜರಿ ತಯಾರಿ ನಡೆದಿದೆ. ಇಂದು ಮುಂಜಾನೆಯಿಂದಲೇ “ಯುವರತ್ನ’ ಚಿತ್ರದ ಪ್ರದರ್ಶನ ಆರಂಭವಾಗಲಿದ್ದು, ತಮ್ಮ ನೆಚ್ಚಿನ ನಟ ಚಿತ್ರವನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಲು ಪವರ್‌ಸ್ಟಾರ್‌ ಫ್ಯಾನ್ಸ್‌ ಕೂಡ ಕಾತುರರಾಗಿದ್ದಾರೆ.

ಇನ್ನು “ಯುವರತ್ನ’ ಚಿತ್ರದಲ್ಲಿ ಪುನೀತ್‌ ರಾಜಕುಮಾರ್‌ಗೆ ಸಯೇಶಾ ಸೈಗಲ್‌ ಮೊದಲ ಬಾರಿಗೆ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ. ಉಳಿದಂತೆ ಪ್ರಕಾಶ್‌ ರೈ, ಸಾಯಿಕುಮಾರ್‌, ಧನಂಜಯ್‌, ದಿಗಂತ್‌, ಸೋನು ಗೌಡ, ವಿಶಾಲ್‌ ಹೆಗ್ಡೆ, ಸಾಧುಕೋಕಿಲ, ರಂಗಾಯಣ ರಘು, ಅಚ್ಯುತ ಕುಮಾರ್‌, ಅವಿನಾಶ್‌, ಸುಧಾರಾಣಿ, ಪ್ರಕಾಶ್‌ ಬೆಳವಾಡಿ, ತಾರಕ್‌ ಪೊನ್ನಪ್ಪ, ರಾಜೇಶ್‌ ನಟರಂಗ, ಗುರುದತ್‌, ಕುರಿ ಪ್ರತಾಪ್‌, ಹನುಮಂತೇ ಗೌಡ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಹೊಂಬಾಳೆ ಫಿಲಂಸ್‌’ ಬ್ಯಾನರ್‌ನಲ್ಲಿ ವಿಜಯ್‌ ಕಿರಗಂದೂರು “ಯುವರತ್ನ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. “ಯುವರತ್ನ’ ಚಿತ್ರಕ್ಕೆ ಸಂತೋಷ್‌ ಆನಂದರಾಮ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಎಸ್‌. ತಮನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ವೆಂಕಟೇಶ್‌ ಅಂಗುರಾಜ್‌ ಛಾಯಾಗ್ರಹಣ, ಜ್ಞಾನೇಶ್‌ ಬಿ. ಮಠದ್‌ ಸಂಕಲನವಿದೆ. ಶಿವಕುಮಾರ್‌ ಕಲಾ ನಿರ್ದೇಶನ, ಚಿನ್ನಿಪ್ರಕಾಶ್‌, ಜಾನಿ, ಸಿರೀಶ್‌, ಮೋಹನ್‌ ನೃತ್ಯ ನಿರ್ದೇಶನವಿದೆ. ಚಿತ್ರದ ಸಾಹಸ ದೃಶ್ಯಗಳಿಗೆ ರಾಮ್‌ ಲಕ್ಷ್ಮಣ್‌, ಅಂಬು ಅರಿವು, ವಿಜಯ…, ದಿಲೀಪ್‌ ಸುಬ್ರಹ್ಮಣ್ಯಂ ಸಾಹಸ ಸಂಯೋಜಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಹಾಡುಗಳು ಮತ್ತು ಟ್ರೇಲರ್‌ಗಳ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ “ಯುವರತ್ನ’ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಚಿತ್ರತಂಡ ಕೂಡ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದ್ದು, ರಾಜ್ಯದ ಉದ್ದಗಲ ಸಂಚಾರ ಮಾಡಿ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸವನ್ನು ಮಾಡಿದೆ. ಒಟ್ಟಾರೆ ರಿಲೀಸ್‌ಗೂ ಮೊದಲೇ ಸೌಂಡ್‌ ಮಾಡುತ್ತಿರುವ ಪುನೀತ್‌ ಅವರ ಪವರ್‌ ಪ್ಯಾಕ್‌ ಸಿನಿಮಾ “ಯುವರತ್ನ’ ಥಿಯೇಟರ್‌ನಲ್ಲಿ ಪ್ರೇಕ್ಷಕ ಪ್ರಭು ಗಳಿಗೆ ಹೇಗೆಲ್ಲಾ ಇಷ್ಟವಾಗುತ್ತದೆ ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.