ಬಣ್ಣ ಹಚ್ಚಲು ರೆಡಿಯಾದ ಪುಷ್ಕರ್ ಮಲ್ಲಿಕಾರ್ಜುನಯ್ಯ
Team Udayavani, Feb 5, 2022, 11:57 AM IST
ಇಲ್ಲಿಯವರೆಗೆ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದ ಪುಷ್ಕರ್ ಮಲ್ಲಿಕಾರ್ಜುನಯ್ಯ ಈಗ ನಟನಾಗಿ ಬೆಳ್ಳಿ ತೆರೆಗೆ ಎಂಟ್ರಿಕೊಡುವ ಉತ್ಸಾಹದಲ್ಲಿದ್ದಾರೆ.
“ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಬಳಿಕ ನಾಯಕ ನಟನಾಗುವ ಘೋಷಣೆ ಮಾಡಿಕೊಂಡಿದ್ದ ಪುಷ್ಕರ್, ಸುಮಾರು ಎರಡೂವರೆ ವರ್ಷಗಳ ಕಾಲ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದಾರೆ. ಇದೀಗ ಅಂತಿಮವಾಗಿ ಈ ಸಿನಿಮಾದ ಬಹುತೇಕ ಪ್ರೀ-ಪ್ರೊಡಕ್ಷನ್ಸ್ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಭಾನುವಾರ ಈ ಚಿತ್ರ ಅಧಿಕೃತವಾಗಿ ಸೆಟ್ಟೇರಲಿದೆ.
ಸದ್ಯ ಪುಷ್ಕರ್ ಲುಕ್ ಹೊರಬಿದ್ದಿದ್ದು, ಆದಿತ್ಯ ಗುಣವಂತ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಳಿದಂತೆ ಪುಷ್ಕರ್ ನಾಯಕ ನಟನಾಗುತ್ತಿರುವ ಹೊಸ ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಪುಷ್ಕರ್ ತಮ್ಮ ಮ್ಯಾನರಿಸಂಗೆ ತಕ್ಕುದಾದ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಂಡಿದ್ದಾರೆ. ಈ ನಡುವೆಯೇ ಪುಷ್ಕರ್ ನಿರ್ಮಾಣದ “ಅವತಾರ್ ಪುರುಷ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದಲ್ಲಿ ಶರಣ್ ನಾಯಕರಾಗಿ ನಟಿಸಿದ್ದು, ಸುನಿ ನಿರ್ದೇಶಿಸಿದ್ದಾರೆ