ಸಿನಿಮಾಗಳ ಫಾರಿನ್ ಡಿಸ್ಟ್ರಿಬ್ಯೂಶನ್ನತ್ತ ಪುಷ್ಕರ್
Team Udayavani, Oct 30, 2019, 3:01 AM IST
ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಈಗ ಮತ್ತೂಂದು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಅದು ವಿದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಜವಾಬ್ದಾರಿ. “ಗೋಧಿ ಬಣ್ಣ ಸಾಧಾರಣ ಮೈ ಕಟ್ಟು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪುಷ್ಕರ್ ನಂತರದ ದಿನಗಳಲ್ಲಿ ಸಿನಿಮಾ ನಿರ್ಮಾಣ, ಪೋಸ್ಟ್ ಪ್ರೊಡಕ್ಷನ್ಗೆ ಬೇಕಾದ ಎಲ್ಲಾ ಅಂಶಗಳೊಂದಿಗೆ ತಯಾರಾಗಿದ್ದು ಗೊತ್ತೇ ಇದೆ.
ಇತ್ತೀಚೆಗಷ್ಟೇ ಗಾಂಧಿನಗದಲ್ಲಿ ಡಿಸ್ಟ್ರಿಬ್ಯೂಶನ್ ಆಫೀಸ್ ತೆರೆದು ಸಿನಿಮಾ ವಿತರಣಾ ಕ್ಷೇತ್ರಕ್ಕೂ ಲಗ್ಗೆ ಇಟ್ಟಿರುವ ಪುಷ್ಕರ್ ಈಗ ಫಾರಿನ್ ಡಿಸ್ಟ್ರಿಬ್ಯೂಶನ್ನತ್ತ ಮುಖ ಮಾಡಿದ್ದಾರೆ. ಈ ಮೂಲಕ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಕನಸಿನ ಬಗ್ಗೆ ಮಾತನಾಡುವ ಪುಷ್ಕರ್, “ಈ ಹಿಂದೆ ನಮ್ಮ ಸಿನಿಮಾಗಳನ್ನು ಸತೀಶ್ ಶಾಸ್ತ್ರಿ ಎನ್ನುವವರ ಸ್ಯಾಂಡಲ್ವುಡ್ ಟಾಕೀಸ್ ಬ್ಯಾನರ್ ಮೂಲಕ ಬಿಡುಗಡೆ ಮಾಡುತ್ತಿದ್ದೆವು.
ಈಗ “ಅವನೇ ಶ್ರೀಮನ್ನಾರಾಯಣ’ ಸಿನಿಮಾ ಮೂಲಕ ಪುಷ್ಕರ್ ಬ್ಯಾನರ್ ಕೂಡಾ ವಿದೇಶದಲ್ಲಿ ಸಿನಿಮಾ ವಿತರಣೆಗೆ ಮುಂದಾಗಿದೆ. ಪುಷ್ಕರ್ ಬ್ಯಾನರ್ ಹಾಗೂ ಸ್ಯಾಂಡಲ್ವುಡ್ ಟಾಕೀಸ್ ಜೊತೆಯಾಗಿ ಫಾರಿನ್ ಡಿಸ್ಟ್ರಿಬ್ಯೂಶನ್ ಮಾಡಲಿದೆ’ ಎನ್ನುವ ಪುಷ್ಕರ್, ಮುಂದಿನ ದಿನಗಳಲ್ಲಿ ಬೇರೆ ಸಿನಿಮಾಗಳ ವಿತರಣೆಯನ್ನು ಮಾಡಲಿದ್ದಾರಂತೆ. “ನನ್ನ ಉದ್ದೇಶ ನಿರ್ಮಾಪಕನಿಗೆ ಮೋಸವಾಗಬಾರದು. ಎಲ್ಲವೂ ಪಾರದರ್ಶಕವಾಗಿ ನಡೆಯಬೇಕು.
ಒಂದೊಂದು ರೂಪಾಯಿಯ ಲೆಕ್ಕ ಕೂಡಾ ನೇರವಾಗಿ ನಿರ್ಮಾಪಕನ ಅಕೌಂಟ್ಗೆ ಬರುವಂತಾಗಬೇಕು. ನಾವು ಆ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದೇವೆ’ ಎನ್ನುತ್ತಾರೆ. ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ “ಅವನೇ ಶ್ರೀಮನ್ನಾರಾಯಣ’ ಬಿಡುಗಡೆಯಾಗಲಿದೆಯಂತೆ. “ಅವನೇ ಶ್ರೀಮನ್ನಾರಾಯಣ’ ಚಿತ್ರ ಡಿಸೆಂಬರ್ 27 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ನಂತರ ಪುಷ್ಕರ್ ಬೇರೆ ಸಿನಿಮಾಗಳ ವಿತರಣೆಯನ್ನು ಕರ್ನಾಟಕದಲ್ಲೂ ಮಾಡಲಿದ್ದಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ