ಏಪ್ರಿಲ್‌ ಸಿನಿಮಾದಿಂದ ಹೊರಬಂದ ರಚಿತಾ

ರಮೇಶ್‌ ಅರವಿಂದ್‌ ಜೊತೆ ಹೊಸ ಚಿತ್ರ

Team Udayavani, Jun 1, 2019, 3:12 AM IST

rachitha

ನಟಿ ರಚಿತಾರಾಮ್‌ ಈಗ ಫ‌ುಲ್‌ ಬಿಜಿ ನಟಿ. ಒಂದರ ಹಿಂದೊಂದು ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರು ಕುರಿತಾದ ಹೊಸ ಸುದ್ದಿಯೆಂದರೆ, ರಚಿತಾರಾಮ್‌ ಈ ಹಿಂದೆ ಒಪ್ಪಿಕೊಂಡಿದ್ದ ಚಿತ್ರವೊಂದರಿಂದ ಹೊರಬಂದಿದ್ದಾರೆ.

ಹೌದು, “ಏಪ್ರಿಲ್‌’ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಸ್ವತಃ ಅವರೇ ಹೇಳಿಕೊಂಡಿದ್ದರು. ಆ ಚಿತ್ರಕ್ಕಾಗಿ ಭರ್ಜರಿ ಫೋಟೋಶೂಟ್‌ ಕೂಡ ನಡೆಸಲಾಗಿತ್ತು. ಎಲ್ಲೆಡೆ ಆ ಚಿತ್ರದ ಕುರಿತು ಸುದ್ದಿಯೂ ಆಗಿತ್ತು. ಕಾಲಕ್ರಮೇಣ ಆ ಚಿತ್ರತಂಡ ತಟಸ್ಥವಾಗಿದೆ. ಹಲವು ಕಾರಣಗಳಿಂದ ಆ ಚಿತ್ರ ಸೆಟ್ಟೇರಿಲ್ಲ.

ಹಾಗಾಗಿ, ರಚಿತಾರಾಮ್‌ ಅವರು ಸೆಟ್ಟೇರುವ ಲಕ್ಷಣಗಳು ಕಾಣದಿರುವುದರ ಹಿನ್ನೆಲೆಯಲ್ಲಿ “ಏಪ್ರಿಲ್‌’ ಚಿತ್ರದಿಂದ ಹೊರಬಂದಿರುವುದಾಗಿ ಹೇಳಿದ್ದಾರೆ. ಅದೊಂದು ಮಹಿಳಾ ಪ್ರಧಾನ ಕಥೆ ಇರುವ ಚಿತ್ರವಾಗಿದ್ದು, ಕಥೆ ಇಷ್ಟವಾಗಿದ್ದರಿಂದ ರಚಿತಾ ನಟಿಸಲು ಒಪ್ಪಿದ್ದರು. ಆದರೆ, ಸಮಯ ಮೀರಿದರೂ, ಚಿತ್ರ ಸೆಟ್ಟೇರದಿರುವ ಹಿನ್ನೆಲೆಯಲ್ಲಿ ಹೊರಬಂದಿದ್ದಾಗಿ ಅವರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಈ ಬೆನ್ನಲ್ಲೇ ರಚಿತಾರಾಮ್‌ ಅವರು ಹೊಸ ಚಿತ್ರವನ್ನು ಒಪ್ಪಿದ್ದಾರೆ. ಅದು ರಮೇಶ್‌ ಅರವಿಂದ್‌ ನಿರ್ದೇಶನದ ಚಿತ್ರ ಎಂಬುದು ವಿಶೇಷ. ಹೌದು, “ಏಪ್ರಿಲ್‌’ ಸಿನಿಮಾದಿಂದ ಹೊರಬಂದಿರುವ ರಚಿತಾರಾಮ್‌, ಈಗ ರಮೇಶ್‌ ಅರವಿಂದ್‌ ಅವರೇ ನಿರ್ದೇಶನ ಮಾಡುತ್ತಿರುವ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸಲು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಅದೂ ಕೂಡ ನಾಯಕಿ ಪ್ರಧಾನ ಕುರಿತಾದ ಕಥೆ ಆಗಿದ್ದು, ಹೊಸ ಬಗೆಯ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ ರಮೇಶ್‌ ಅರವಿಂದ್‌. ಎಲ್ಲಾ ಅಂದುಕೊಂಡಂತೆ ನಡೆದರೆ ಜೂನ್‌ನಲ್ಲಿ ರಮೇಶ್‌ ಅರವಿಂದ್‌ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣದಲ್ಲಿ ರಚಿತಾರಾಮ್‌ ಭಾಗವಹಿಸಲಿದ್ದಾರೆ.

ಅಂದಹಾಗೆ, ರಚಿತಾರಾಮ್‌ ಅವರು ಈ ಹಿಂದೆ ಬಿಡುಗಡೆಗೊಂಡು ಮೆಚ್ಚುಗೆ ಪಡೆದ “ಪುಷ್ಪಕ ವಿಮಾನ’ ಚಿತ್ರದಲ್ಲಿ ರಮೇಶ್‌ ಅರವಿಂದ್‌ ಅವರ ಮಗಳ ಪಾತ್ರದಲ್ಲಿ ನಟಿಸಿದ್ದರು. ಆಗ ಅವರಿಬ್ಬರ ಕಾಂಬಿನೇಷನ್‌ನಿಂದ ಚಿತ್ರ ಚೆನ್ನಾಗಿ ಮೂಡಿಬಂದಿತ್ತು.

ಅದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಈಗ ರಮೇಶ್‌ ಅರವಿಂದ್‌ ಅವರೇ ರಚಿತಾರಾಮ್‌ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಶೀರ್ಷಿಕೆ ಸೇರಿದಂತೆ ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ, ಎಲ್ಲೆಲ್ಲಿ ಚಿತ್ರೀಕರಣ ಎಂಬಿತ್ಯಾದಿ ವಿಷಯಗಳು ಹೊರಬೀಳಬೇಕಿದೆ.

ಈ ನಡುವೆ ರಚಿತಾರಾಮ್‌ ಅವರು ಹಿರಿಯ ನಿರ್ದೇಶಕ ಪಿ.ವಾಸು ಅವರ ನಿರ್ದೇಶನದ “ಆನಂದ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಿವರಾಜಕುಮಾರ್‌ ಚಿತ್ರದ ಹೀರೋ. ಇದೇ ಮೊದಲ ಬಾರಿಗೆ ರಚಿತಾರಾಮ್‌ ಅವರು ಶಿವರಾಜಕುಮಾರ್‌ ಜೊತೆ ನಟಿಸುತ್ತಿದ್ದಾರೆ.

ಆ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಅದರಲ್ಲಿ ರಚಿತಾ ಬಿಜಿಯಾಗಿದ್ದಾರೆ. ಅತ್ತ, ಉಪೇಂದ್ರ ಅವರೊಂದಿಗೆ ನಟಿಸಿರುವ “ಐ ಲವ್‌ ಯು’ ಚಿತ್ರ ಜೂನ್‌ 14 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ಐ ಲವ್‌ ಯು’ ಚಿತ್ರದ ಟ್ರೇಲರ್‌ ವೀಕ್ಷಿಸಿದ ರಚಿತಾರಾಮ್‌ ಅವರ ಅಭಿಮಾನಿಗಳು, ಅಷ್ಟೊಂದು ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಕಾಮೆಂಟ್‌ ಮಾಡಿದ್ದರು.

ಅದನ್ನು ಗಮನಿಸಿದ ರಚಿತಾರಾಮ್‌, ಕಥೆ ಚೆನ್ನಾಗಿತ್ತು. ಪಾತ್ರಕ್ಕೆ ಪೂರಕವಾಗಿದ್ದರಿಂದ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದೇನೆ. ಅಭಿಮಾನಿಗಳಿಗೆ ಇಷ್ಟ ಆಗಲ್ಲ ಅನ್ನುವುದಾದರೆ, ನಾನು ಮುಂದಿನ ದಿನಗಳಲ್ಲಿ ಆ ರೀತಿಯ ಬೋಲ್ಡ್‌ ಪಾತ್ರ ಮಾಡುವುದರಲ್ಲಿ ಅರ್ಥವಿಲ್ಲ ಎನ್ನುತ್ತಾರೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.