Kannada Cinema; ರಿಲೀಸ್ ಅಖಾಡಕ್ಕೆ ‘ಭೈರಾದೇವಿ’; ವಿಭಿನ್ನ ಗೆಟಪ್ನಲ್ಲಿ ರಾಧಿಕಾ
Team Udayavani, Nov 13, 2023, 9:30 AM IST
ನಟಿ ರಾಧಿಕಾ ಕುಮಾರಸ್ವಾಮಿ “ಭೈರಾದೇವಿ’ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಚಿತ್ರೀಕರಣ ಪೂರ್ಣಗೊಳಿಸಿರುವ ಆ ಚಿತ್ರದ ಬಿಡುಗಡೆ ಮಾತ್ರ ತಡವಾಗುತ್ತಲೇ ಇತ್ತು. ಅಂತಿಮವಾಗಿ ಚಿತ್ರತಂಡ ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದೆ.
ಇತ್ತೀಚೆಗೆ ರಾಧಿಕಾ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಟೀಸರ್ ಪ್ರದರ್ಶಿಸಿದ ಚಿತ್ರತಂಡ, ಶೀಘ್ರದಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ಚಿತ್ರವನ್ನು ಸ್ವತಃ ರಾಧಿಕಾ ಅವರೇ ತಮ್ಮ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಶ್ರೀಜಿತ್ ಈ ಸಿನಿಮಾದ ನಿರ್ದೇಶಕರು. ಈ ಚಿತ್ರದಲ್ಲಿ ರಾಧಿಕಾ ಅಘೋರಿ ಗೆಟಪ್ನಲ್ಲೂ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕಾಗಿ ಸಾಕಷ್ಟು ಕಷ್ಟಪಟ್ಟಿದ್ದಾರಂತೆ.
ಈ ಬಗ್ಗೆ ಮಾತನಾಡುವ ರಾಧಿಕಾ, “ನಿರ್ದೇಶಕರು ಕಥೆ ಹೇಳಿದಾಗ ಈ ಪಾತ್ರ ಮಾಡಲು ಸಾಧ್ಯವೇ ಎಂಬ ಭಯ ಕಾಡಿದ್ದು ಸುಳ್ಳಲ್ಲ. ಅಂತಿಮವಾಗಿ ಎಲ್ಲರ ಪ್ರೋತ್ಸಾಹದಿಂದ ಮಾಡಿದ್ದೇನೆ. “ಭೈರಾದೇವಿ’ ಕಾರಣಾಂತರಗಳಿಂದ ಸ್ವಲ್ಪ ತಡವಾಯಿತು. ಇನ್ನು ತಡ ಮಾಡುವುದಿಲ್ಲ. ಡಿಸೆಂಬರ್ ಅಥವಾ ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ’ ಎಂದರು.
ರಾಧಿಕಾ ಅವರಿಗೆ ತಮ್ಮ ಬ್ಯಾನರ್ನಡಿ ಹೊಸ ಬಗೆಯ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ. ಹಾಗಂತ ಆ ಎಲ್ಲಾ ಸಿನಿಮಾಗಳಲ್ಲಿ ಅವರೇ ಕಾಣಿಸಿಕೊಳ್ಳಬೇಕೆಂಬ ಆಸೆ ಇಲ್ಲ. ಬೇರೆ ನಟ-ನಟಿಯರನ್ನು ಹಾಕಿಕೊಂಡು ಸಿನಿಮಾ ಮಾಡುವ ಕನಸು
ಕಾಣುತ್ತಿದ್ದಾರೆ ರಾಧಿಕಾ. “ಮುಂದೆ ನನ್ನ ಹೋಂಬ್ಯಾನರ್ನಲ್ಲಿ ಬೇರೆ ಬೇರೆ ಜಾನರ್ನ ಸಿನಿಮಾಗಳನ್ನು ಮಾಡುವ ಆಸೆ ಇದೆ. ಹಾಗಂತ ನಾನೇ ನಟಿಸಬೇಕೆಂದಿಲ್ಲ. ನಾನೇ ನಟಿಸಲು ಮುಂದಾದರೆ ತುಂಬಾ ತಡವಾಗುತ್ತದೆ. ನನ್ನದೇ ಆದ ಕಮಿಟ್ಮೆಂಟ್ಗಳಿರುವುದರಿಂದ ಅಂದುಕೊಂಡ ಸಮಯಕ್ಕೆ ಸಿನಿಮಾಗಳು ಬರುವುದಿಲ್ಲ. ಹಾಗಾಗಿ ಬೇರೆಯವರಿಗೆ ಅವಕಾಶ ಕೊಡುವ ಬಗ್ಗೆ ಯೋಚಿಸುತ್ತಿದ್ದೇನೆ’ ಎನ್ನುತ್ತಾರೆ.
ಇದಲ್ಲದೇ, “ಅಜಾಗ್ರತ’ ಎಂಬ ಸಿನಿಮಾದಲ್ಲೂ ರಾಧಿಕಾ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದೆ. ಇದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ಇಡೀ ಸಿನಿಮಾ ನಾಯಕಿ ರಾಧಿಕಾ ಕುಮಾರಸ್ವಾಮಿ ಅವರ ಸುತ್ತ ನಡೆಯಲಿದ್ದು, ರಾಧಿಕಾ ಕಾಣಿಸಿಕೊಳ್ಳಲಿರುವ ಪಾತ್ರಕ್ಕೂ ಕೂಡ ಅದರದ್ದೇ ಆದ ಮಹತ್ವವಿರಲಿದೆ ಎಂಬುದು ಚಿತ್ರತಂಡದ ಮಾತು.
ರವಿರಾಜ್ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ “ಘಾರ್ಗ’ ಸಿನಿಮಾವನ್ನು ನಿರ್ದೇಶಿಸಿರುವ, ಫಿಲಂ ಮೇಕಿಂಗ್ ನಲ್ಲಿ ಎಂ. ಎಸ್ಸಿ ಪದವಿಧರರಾಗಿರುವ ಜೊತೆಗೆ ವಿಎಫ್ಎಕ್ಸ್ನಲ್ಲೂ ಪರಿಣತಿ ಹೊಂದಿರುವ ಯುವ ನಿರ್ದೇಶಕ ಎಂ. ಶಶಿಧರ್, “ಅಜಾಗ್ರತ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು