Kannada Cinema; ರಿಲೀಸ್‌ ಅಖಾಡಕ್ಕೆ ‘ಭೈರಾದೇವಿ’; ವಿಭಿನ್ನ ಗೆಟಪ್‌ನಲ್ಲಿ ರಾಧಿಕಾ


Team Udayavani, Nov 13, 2023, 9:30 AM IST

Kannada Cinema; ರಿಲೀಸ್‌ ಅಖಾಡಕ್ಕೆ ‘ಭೈರಾದೇವಿ’; ವಿಭಿನ್ನ ಗೆಟಪ್‌ನಲ್ಲಿ ರಾಧಿಕಾ

ನಟಿ ರಾಧಿಕಾ ಕುಮಾರಸ್ವಾಮಿ “ಭೈರಾದೇವಿ’ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಚಿತ್ರೀಕರಣ ಪೂರ್ಣಗೊಳಿಸಿರುವ ಆ ಚಿತ್ರದ ಬಿಡುಗಡೆ ಮಾತ್ರ ತಡವಾಗುತ್ತಲೇ ಇತ್ತು. ಅಂತಿಮವಾಗಿ ಚಿತ್ರತಂಡ ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಇತ್ತೀಚೆಗೆ ರಾಧಿಕಾ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಟೀಸರ್‌ ಪ್ರದರ್ಶಿಸಿದ ಚಿತ್ರತಂಡ, ಶೀಘ್ರದಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ಚಿತ್ರವನ್ನು ಸ್ವತಃ ರಾಧಿಕಾ ಅವರೇ ತಮ್ಮ ಬ್ಯಾನರ್‌ನಲ್ಲಿ ನಿರ್ಮಿಸಿದ್ದಾರೆ. ಶ್ರೀಜಿತ್‌ ಈ ಸಿನಿಮಾದ ನಿರ್ದೇಶಕರು. ಈ ಚಿತ್ರದಲ್ಲಿ ರಾಧಿಕಾ ಅಘೋರಿ ಗೆಟಪ್‌ನಲ್ಲೂ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕಾಗಿ ಸಾಕಷ್ಟು ಕಷ್ಟಪಟ್ಟಿದ್ದಾರಂತೆ.

ಈ ಬಗ್ಗೆ ಮಾತನಾಡುವ ರಾಧಿಕಾ, “ನಿರ್ದೇಶಕರು ಕಥೆ ಹೇಳಿದಾಗ ಈ ಪಾತ್ರ ಮಾಡಲು ಸಾಧ್ಯವೇ ಎಂಬ ಭಯ ಕಾಡಿದ್ದು ಸುಳ್ಳಲ್ಲ. ಅಂತಿಮವಾಗಿ ಎಲ್ಲರ ಪ್ರೋತ್ಸಾಹದಿಂದ ಮಾಡಿದ್ದೇನೆ. “ಭೈರಾದೇವಿ’ ಕಾರಣಾಂತರಗಳಿಂದ ಸ್ವಲ್ಪ ತಡವಾಯಿತು. ಇನ್ನು ತಡ ಮಾಡುವುದಿಲ್ಲ. ಡಿಸೆಂಬರ್‌ ಅಥವಾ ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ’ ಎಂದರು.

ರಾಧಿಕಾ ಅವರಿಗೆ ತಮ್ಮ ಬ್ಯಾನರ್‌ನಡಿ ಹೊಸ ಬಗೆಯ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ. ಹಾಗಂತ ಆ ಎಲ್ಲಾ ಸಿನಿಮಾಗಳಲ್ಲಿ ಅವರೇ ಕಾಣಿಸಿಕೊಳ್ಳಬೇಕೆಂಬ ಆಸೆ ಇಲ್ಲ. ಬೇರೆ ನಟ-ನಟಿಯರನ್ನು ಹಾಕಿಕೊಂಡು ಸಿನಿಮಾ ಮಾಡುವ ಕನಸು

ಕಾಣುತ್ತಿದ್ದಾರೆ ರಾಧಿಕಾ. “ಮುಂದೆ ನನ್ನ ಹೋಂಬ್ಯಾನರ್‌ನಲ್ಲಿ ಬೇರೆ ಬೇರೆ ಜಾನರ್‌ನ ಸಿನಿಮಾಗಳನ್ನು ಮಾಡುವ ಆಸೆ ಇದೆ. ಹಾಗಂತ ನಾನೇ ನಟಿಸಬೇಕೆಂದಿಲ್ಲ. ನಾನೇ ನಟಿಸಲು ಮುಂದಾದರೆ ತುಂಬಾ ತಡವಾಗುತ್ತದೆ. ನನ್ನದೇ ಆದ ಕಮಿಟ್‌ಮೆಂಟ್‌ಗಳಿರುವುದರಿಂದ ಅಂದುಕೊಂಡ ಸಮಯಕ್ಕೆ ಸಿನಿಮಾಗಳು ಬರುವುದಿಲ್ಲ. ಹಾಗಾಗಿ ಬೇರೆಯವರಿಗೆ ಅವಕಾಶ ಕೊಡುವ ಬಗ್ಗೆ ಯೋಚಿಸುತ್ತಿದ್ದೇನೆ’ ಎನ್ನುತ್ತಾರೆ.

ಇದಲ್ಲದೇ, “ಅಜಾಗ್ರತ’ ಎಂಬ ಸಿನಿಮಾದಲ್ಲೂ ರಾಧಿಕಾ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದೆ. ಇದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ಇಡೀ ಸಿನಿಮಾ ನಾಯಕಿ ರಾಧಿಕಾ ಕುಮಾರಸ್ವಾಮಿ ಅವರ ಸುತ್ತ ನಡೆಯಲಿದ್ದು, ರಾಧಿಕಾ ಕಾಣಿಸಿಕೊಳ್ಳಲಿರುವ ಪಾತ್ರಕ್ಕೂ ಕೂಡ ಅದರದ್ದೇ ಆದ ಮಹತ್ವವಿರಲಿದೆ ಎಂಬುದು ಚಿತ್ರತಂಡದ ಮಾತು.

ರವಿರಾಜ್‌ ಈ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಅಶ್ವಿ‌ನಿ ರಾಮ್‌ ಪ್ರಸಾದ್‌ ಅವರ ಪುತ್ರ ಅರುಣ್‌ ರಾಮ್‌ ಪ್ರಸಾದ್‌ ಅಭಿನಯದ “ಘಾರ್ಗ’ ಸಿನಿಮಾವನ್ನು ನಿರ್ದೇಶಿಸಿರುವ, ಫಿಲಂ ಮೇಕಿಂಗ್‌ ನಲ್ಲಿ ಎಂ. ಎಸ್ಸಿ ಪದವಿಧರರಾಗಿರುವ ಜೊತೆಗೆ ವಿಎಫ್ಎಕ್ಸ್‌ನಲ್ಲೂ ಪರಿಣತಿ ಹೊಂದಿರುವ ಯುವ ನಿರ್ದೇಶಕ ಎಂ. ಶಶಿಧರ್‌, “ಅಜಾಗ್ರತ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.