ದೇವತೆಯಾದ ರಾಧಿಕಾ…!

ದಮಯಂತಿಯಲ್ಲಿ ಕನಸಿನ ಪಾತ್ರ ಮಾಡಿದ ಖುಷಿ

Team Udayavani, Sep 23, 2019, 3:04 AM IST

Radhika-Damayanthi

“ಅಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆ. ಇತ್ತು. ಅದೀಗ ನೆರವೇರಿದೆ…’ ಇದು ರಾಧಿಕಾ ಅವರ ಖುಷಿಯ ಮಾತು. ಹೌದು, ರಾಧಿಕಾ ಅವರಿಗೆ ತೆಲುಗಿನ “ಅರುಂಧತಿ’ ಚಿತ್ರದಲ್ಲಿ ನಟಿ ಅನುಷ್ಕಾ ನಿರ್ವಹಿಸಿದ್ದ ರೀತಿಯ ಪಾತ್ರ ಮಾಡಬೇಕು ಅಂತ ಬಹಳ ದಿನದಿಂದಲೂ ಅವರ ಆಸೆ ಮತ್ತು ಕನಸಾಗಿತ್ತು. ಅದೀಗ ನೆರವೇರಿದ ಖುಷಿ ಅವರದು. ಅವರು “ದಮಯಂತಿ’ ಸಿನಿಮಾದಲ್ಲಿ ವಿಶೇಷ ಪಾತ್ರದ ಮೂಲಕ ಗಮನಸೆಳೆಯಲಿದ್ದಾರೆ.

ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಇತ್ತೀಚೆಗೆ ಚಿತ್ರದ ಟೀಸರ್‌ ಕೂಡ ಹೊರಬಂದಿದೆ. ಸಿನಿಮಾದ ಟೀಸರ್‌ ನೋಡಿದವರು ಮೆಚ್ಚಿಕೊಂಡಿದ್ದಾರೆ. ಸ್ವತಃ ರಾಧಿಕಾ ಅವರಿಗೇ ಆ ಚಿತ್ರದ ಪಾತ್ರದ ಬಗ್ಗೆ ಸಾಕಷ್ಟು ಕುತೂಹಲವೂ ಇದೆ. ಇಷ್ಟು ದಿನಗಳ ಕಾಲ ಹಲವು ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ರಾಧಿಕಾ, “ದಮಯಂತಿ’ ಸಿನಿಮಾ ಮೂಲಕ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರೇ ಹೇಳುವಂತೆ, “ನಾನು ಒಂದೊಳ್ಳೆಯ ಕಥೆ ಇರುವ ಚಿತ್ರದಲ್ಲಿ ನೆನಪಲ್ಲುಳಿಯುವಂತಹ ಪಾತ್ರ ಮಾಡಬೇಕು ಎಂದು ಆಸೆ ಪಟ್ಟಿದ್ದೆ.

ಅದು “ದಮಯಂತಿ’ ಮೂಲಕ ಈಡೇರಿದೆ. ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ ಚಿತ್ರ ಮಾಡಿದ್ದಾರೆ. ನನ್ನ ಮಗಳು ಹಾಗು ಅಣ್ಣನ ಮಕ್ಕಳು ನನ್ನ ಗೆಟಪ್‌ ನೋಡಿದ ಬಳಿಕ ಹತ್ತಿರ ಬರಲು ಭಯಪಡುತ್ತಿದ್ದಾರೆ. ಅಷ್ಟೊಂದು ಎಫೆಕ್ಟ್ ಆಗಿರುವಂತಹ ಪಾತ್ರವದು. ಅದನ್ನು ಸಿನಿಮಾದಲ್ಲೇ ನೋಡಿದರೆ, ಎಷ್ಟರಮಟ್ಟಿಗೆ ಪ್ರಭಾವ ಬೀರುತ್ತೆ ಅನ್ನುವುದು ಗೊತ್ತಾಗುತ್ತೆ. ನಾನಿಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಇನ್ನು, ಈ ಚಿತ್ರದಲ್ಲಿ “ಭಜರಂಗಿ’ ಲೋಕಿ ಮುಖ್ಯ ಪಾತ್ರ ಮಾಡಿದ್ದಾರೆ. ಸಿನಿಮಾ ರಿಲೀಸ್‌ ನಂತರ ಅವರಿಗೆ ನಿಜಕ್ಕೂ ಒಳ್ಳೆಯ ಬ್ರೇಕ್‌ ಸಿಗಲಿದೆ’ ಎಂಬುದು ಅವರ ಮಾತು.

ನವರಸನ್‌ ಈ ಚಿತ್ರದ ನಿರ್ದೇಶಕರು. ನಿರ್ಮಾಣವನ್ನೂ ಮಾಡಿದ್ದಾರೆ. ಚಿತ್ರೀಕರಣ ಸಮಯದಲ್ಲಿದ್ದ ಅವರಿಗೆ ಈ ಚಿತ್ರದ ಒನ್‌ಲೈನ್‌ ಹುಟ್ಟುಕೊಂಡಿದೆ. ಆಗಲೇ ಅವರು ಶೀರ್ಷಿಕೆ ಪಕ್ಕಾ ಮಾಡಿ, ನೋಂದಣಿ ಮಾಡಿಸಿ, ರಾಧಿಕಾ ಅವರಿಗೆ ಕಥೆ ಹೇಳಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡ ರಾಧಿಕಾ ಅವರು ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ಕುರಿತು ಹೇಳುವ ನವರಸನ್‌, “ಕಥೆಯಲ್ಲಿ ರಾಧಿಮಾ ಮೇಡಮ್‌ ಕೊಂಚ ಬದಲಾವಣೆ ಬಯಸಿದ್ದರು. ಅದನ್ನು ಸರಿಪಡಿಸಿಕೊಂಡು ಚಿತ್ರ ಮಾಡಿದ್ದೇವೆ. ಒಂದು ಊರಲ್ಲಿ ದೇವತೆ ಇದ್ದಾಗ, ದುಷ್ಟ ಶಕ್ತಿಗಳೆಲ್ಲಾ ಹೇಗೆ ಓಡಿ ಹೋಗುತ್ತವೆ ಎಂಬ ಕಥೆ ಇಲ್ಲಿದೆ.

ಕನ್ನಡಕ್ಕೊಂದು ಹೊಸ ಬಗೆಯ ಚಿತ್ರ ಇದಾಗಲಿದೆ ಕನ್ನಡ ಸೇರಿದಂತೆ ತೆಲುಗು, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ತಯಾರಾಗಿದೆ’ ಎಂಬುದು ನಿರ್ದೇಶಕರ ಮಾತು. ಚಿತ್ರದಲ್ಲಿ ತಬಲನಾಣಿ, ಕೆಂಪೇಗೌಡ ಅವರು ನಟಿಸಿದ್ದು, ಚಿತ್ರೀಕರಣದ ಅನುಭವ ಹಂಚಿಕೊಂಡರು. ಉಳಿದಂತೆ “ದಮಯಂತಿ’ ಚಿತ್ರದಲ್ಲಿ ಬಲ ರಾಜವಾಡಿ, ಅನುಷಾ ರೈ, ವೀಣಾಸುಂದರ್‌, ಬೇಬಿ ಮಿಲನ, ಶರಣ್‌ ನಟಿಸಿದ್ದಾರೆ. ಮಾಸ್ತಿ ಸಂಭಾಷಣೆ ಬರೆದರೆ, ಎಸ್‌.ಗಣೇಶ್‌ನಾರಾಯಣ್‌ ಸಂಗೀತವಿದೆ. ಪಿ.ಕೆ.ಹೆಚ್‌.ದಾಸ್‌ ಛಾಯಾಗ್ರಹಣವಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ನವೆಂಬರ್‌ನಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.