ಕಂಠೀರವ ಸ್ಟುಡಿಯೋದಲ್ಲಿ ರಾಜ್‌ ಹಬ್ಬ


Team Udayavani, Apr 24, 2018, 4:48 PM IST

Dr-Raj-Birthday-2.jpg

ಅಲ್ಲಿ ಎತ್ತ ನೋಡಿದರೂ ಹಬ್ಬದ ಸಂಭ್ರಮ. ರಾರಾಜಿಸುತ್ತಿದ್ದ ಭಾವಚಿತ್ರಗಳು, ಸಾಲುಗಟ್ಟಿದ್ದ ಜನಜಂಗುಳಿ. ಮುಗಿಲು ಮುಟ್ಟಿದ್ದ ಜೈಕಾರ, ಕೈಯಲ್ಲಿ ತರಹೇವಾರಿ ಹೂವು, ಹಾರಗಳು, ಇವೆಲ್ಲದರ ಜತೆಗೆ ಕಣ್ತುಂಬಿಕೊಂಡ ಮನಸುಗಳು…

ಇದೆಲ್ಲಾ ಕಂಡು ಬಂದದ್ದು ಕಂಠೀರವ ಸ್ಟುಡಿಯೋದಲ್ಲಿ. ಏಪ್ರಿಲ್‌ 24 ಅಂದರೆ, ಅದು ಡಾ.ರಾಜಕುಮಾರ್‌ ಅವರ ಅಭಿಮಾನಿಗಳ ಪಾಲಿಗೆ ನಾಡ ಹಬ್ಬವಿದ್ದಂತೆ. ಮಂಗಳವಾರ ನಡೆದ ವರನಟ ಡಾ.ರಾಜಕುಮಾರ್‌ ಅವರ 90ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳದ್ದೇ ಕಾರುಬಾರು.

ಹಾಗಾಗಿ, ಅವರ ಸಮ್ಮುಖದಲ್ಲೇ ಸ್ಮಾರಕ ಬಳಿ, ಡಾ.ರಾಜಕುಮಾರ್‌ ಕುಟುಂಬ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜನ್ಮದಿನ ಆಚರಿಸಿತು. ಬೆಳಗ್ಗೆ ಡಾ. ರಾಜಕುಮಾರ್‌ ಅವರ ಸ್ಮಾರಕ ಬಳಿ ಆಗಮಿಸಿದ ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌, ಪುನೀತ್‌ ರಾಜಕುಮಾರ್‌ ಹಾಗೂ ಕುಟುಂಬ ವರ್ಗ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿತು.

ನಂತರ ಜ್ಯೋತಿ ಬೆಳಗಿಸಿ ನಮಿಸಿದರು. ಈ ವೇಳೆ ಎಸ್‌.ಎ. ಗೋವಿಂದರಾಜು, ಲಕ್ಷ್ಮೀ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ನಟ ಬಾಲರಾಜು, ನಿರ್ಮಾಪಕ ಕೆ.ಪಿ. ಶ್ರೀಕಾಂತ್‌, ವಾಸು, ಬಾಲರಾಜ್‌, ರಘುರಾಮ್‌ ಸೇರಿದಂತೆ ಅನೇಕರು ಹಾಜರಿದ್ದು, ರಾಜ್‌ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಪಕ್ಕದ್ದಲ್ಲೇ ಇದ್ದ ಪಾರ್ವತಮ್ಮ ರಾಜಕುಮಾರ್‌ ಸಮಾಧಿಗೂ ಈ ವೇಳೆ ಪೂಜೆ ಸಲ್ಲಿಸಲಾಯಿತು. ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಇರುವುದರಿಂದ ಈ ವೇಳೆ ಅನ್ನಸಂತರ್ಪಣೆ ಕಾರ್ಯಕ್ರಮ ಇರಲಿಲ್ಲ. ಆದರೆ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್‌ ಕುಟುಂಬ, ಆಗಮಿಸಿದ್ದ ಸಾವಿರಾರು ಅಭಿಮಾನಿಗಳಿಗೆ ಸಿಹಿ ವಿತರಿಸಿತು.

ಸಿಹಿ ಸ್ವೀಕರಿಸಿದ ಅಭಿಮಾನಿಗಳು, ರಾಜಕುಮಾರ್‌ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಜೈಕಾರ ಹಾಕಿದ್ದಲ್ಲದೆ, ಕೆಲವರು ಅಣ್ಣಾವ್ರ ಫೋಟೋ ಹಿಡಿದು, ಸ್ಮಾರಕದ ಎದುರು ನಮಸ್ಕರಿಸಿದರು. ಈ ವೇಳೆ ಚಿತ್ರರಂಗದ ಅನೇಕ ನಟ, ನಟಿಯರು, ನಿರ್ಮಾಪಕ, ನಿರ್ದೇಶಕರುಗಳು ಮತ್ತು ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಅಣ್ಣಾವ್ರ ಆಶೀರ್ವಾದ ಪಡೆದ ವಧು-ವರ: ಈ ಬಾರಿಯ ರಾಜಕುಮಾರ್‌ ಹುಟ್ಟುಹಬ್ಬದಲ್ಲಿ ಒಂದು ವಿಶೇಷವಿತ್ತು. ಮದುವೆಗೆ ತಯಾರಾಗಿದ್ದ ನವ ವಧು-ವರ ಇಬ್ಬರು ಕಲ್ಯಾಣ ಮಂಟಪಕ್ಕೆ ಹೋಗುವ ಮುನ್ನ, ಕಂಠೀರವ ಸ್ಟುಡಿಯೋಗೆ ಆಗಮಿಸಿ, ಡಾ.ರಾಜಕುಮಾರ್‌ ಸಮಾಧಿಗೆ ನಮಸ್ಕರಿಸಿ, ಅಣ್ಣಾವ್ರ ಆಶೀರ್ವಾದ ಪಡೆದರು.  

ಈ ವೇಳೆ, ಶಿವರಾಜಕುಮಾರ್‌ ಕೂಡ ನೂತನ ವಧು-ವರರಿಗೆ ಶುಭ ಹಾರೈಸಿದ್ದು ವಿಶೇಷವಾಗಿತ್ತು. ಇನ್ನು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ಮಂಗಳವಾರ ಬೆಳಗ್ಗೆ ಡಾ.ರಾಜಕುಮಾರ್‌ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ಮಂಡಳಿಯ ಎದುರು ಇರುವ ರಾಜ್‌ ಪ್ರತಿಮೆಗೆ ಹೂವಿನ ಹಾರ ಹಾಕುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು. ರಾಜಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಶಿವರಾಜಕುಮಾರ್‌ ಅಭಿನಯದ “ರುಸ್ತುಂ’ ಚಿತ್ರಕ್ಕೆ ಮುಹೂರ್ತವೂ ನೆರವೇರಿತು.

ಈ ಚಿತ್ರವನ್ನು ಸಾಹಸ ನಿರ್ದೇಶಕ ರವಿವರ್ಮ ನಿರ್ದೇಶಿಸುತ್ತಿದ್ದಾರೆ. ಇದೇ ದಿನ ವಿನಯರಾಜಕುಮಾರ್‌ ಅವರ “ಅಪ್ಪ ಅಮ್ಮ ಪ್ರೀತಿ’ ಎಂಬ ಹೊಸ ಚಿತ್ರಕ್ಕೂ ಮುಹೂರ್ತ ನೆರವೇರಿತು. ಈ ಚಿತ್ರಕ್ಕೆ ಶ್ರೀಧರ್‌ ನಿರ್ದೇಶಕರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.